ಕರ್ನಾಟಕಕ್ಕೆ 50ರ ಸಂಭ್ರಮ | ಕೆಂಪು-ಹಳದಿಯಿಂದ ಕಂಗೊಳಿಸುತ್ತಿದೆ ಬೆಳಗಾವಿ

Date:

Advertisements

ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿನ 50 ವರ್ಷ ಪೂರೈಸಿದೆ. ರಾಜ್ಯಾದ್ಯಂತ 50ರ ಸಂಭ್ರಮ ಮನೆ ಮಾಡಿದೆ. ಮಹಾರಾಷ್ಟ್ರದೊಂದಿಗೆ ಗಡಿ ವಿವಾದಹೊಂದಿರುವ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಕನ್ನಡ ಬಾವುಟಗಳು ಹಾರಾಡುತ್ತಿವೆ. ಬೆಳಗಾವಿ ನಗರ ಅಕ್ಷರಶಃ ಕೆಂಪು-ಹಳದಿ ಬಣ್ಣಗಳಿಂದ ಕಂಗೊಳಿಸುತ್ತಿದೆ.

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕನ್ನಡ ಹಬ್ಬದ ಮೆರಗು ಹೆಚ್ಚಿದೆ. ನಗರದಲ್ಲಿ ಇಡೀ ದಿನ ಕನ್ನಡ ರಾಜ್ಯೋತ್ಸವದ ಮೆರವಣಿಗೆ ನಡೆಯಲಿದೆ. 100 ರೂಪಕ ವಾಹನಗಳು ರಾಜ್ಯೋತ್ಸವ ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ. ಹಳದಿ-ಕೆಂಪು ಬಣ್ಣದ ಗಾಳಿಪಟ ಉತ್ಸವವೂ ನಡೆಯಲಿದೆ.

ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಲು ಮುಂದಾಗಿದೆ. ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಮಹಾರಾಷ್ಟ್ರ ರಾಜಕೀಯ ನಾಯಕರಿಗೆ ಬೆಳಗಾವಿ ಪ್ರವೇಶಿಸದಂತೆ ನಿರ್ಬಂಧ ಹೇಳಿದೆ. ಜಿಲ್ಲೆಯ ಗಡಿ ಭಾಗದಲ್ಲಿ 18 ಚೆಕ್​ಪೋಸ್ಟ್​​ಗಳ ನಿರ್ಮಾಣ ಮಾಡಲಾಗಿದೆ.

Advertisements

ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಇಬ್ಬರು ಡಿಸಿಪಿ, 12 ಡಿವೈಎಸ್‌ಪಿ, 120ಕ್ಕೂ ಹೆಚ್ಚು ಇನ್ಸ್​ಪೆಕ್ಟರ್ಸ್​, 300 ಪಿಎಸ್‌ಐ, 2000 ಪಿಸಿ, 500 ಹೋಮ್​ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಬೆಳಗಾವಿ ನಗರದ ಹಲವೆಡೆ 300 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X