ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ

Date:

Advertisements

ತುಮಕೂರು ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಂದು ನವದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 69ರ ಶಿರಾ, ಮಧುಗಿರಿ, ಭೈರನಹಳ್ಳಿ ವಿಭಾಗದ 52 ಕಿಮೀ. ಚತುಷ್ಪಥ ರಸ್ತೆ ಅಭಿವೃದ್ಧಿಗೆ 2024-25ರ ಆಯವ್ಯಯದಲ್ಲಿ 1000 ಕೋಟಿ ರೂ. ಮೀಸಲಿಟ್ಟಿದ್ದು, ಈ ರಸ್ತೆ ಕಾಮಗಾರಿ ಅನುಮೋದನೆಗೆ ಸಹಕರಿಸಿದ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

1000545581

ತುಮಕೂರು-ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 206ರ ತಮಕೂರು ನಗರ ಹಾಗೂ ಮಲ್ಲಸಂದ್ರ ಭಾಗದಲ್ಲಿ ಬೈಪಾಸ್ ನಿರ್ಮಾಣ ಮಾಡುವುದರಿಂದ ಸಾರಿಗೆ ದಟ್ಟಣೆ ಹಾಗೂ ಅಪಘಾತಗಳು ಕಡಿಮೆ ಮಾಡಬಹುದಾಗಿದೆ. ಜಿಲ್ಲೆಯು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು ತುಮಕೂರು ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿ ಅನಿವಾರ್ಯವಾಗಿದೆ ಎಂದು ಕೇಂದ್ರ ಮಂತ್ರಿಗಳಿಗೆ ತಿಳಿಸಿದರಲ್ಲದೆ. ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು ನಗರದಲ್ಲಿ 12.30 ಕಿಮೀ ಮತ್ತು ಗುಬ್ಬಿ ನಗರದಲ್ಲಿ 8.5 ಕಿಮೀ ಚತುಷ್ಪಥ ರಸ್ತೆ ನಿರ್ಮಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X