ಗ್ಯಾರಂಟಿ ಯೋಜನೆ ಜನರಿಗೆ ತಲುಪದಂತೆ ಕೇಂದ್ರ ಸರ್ಕಾರ ತಂತ್ರಾಂಶ ಹ್ಯಾಕ್ ಮಾಡಿದೆ: ಸತೀಶ್‌ ಜಾರಕಿಹೊಳಿ ಆರೋಪ

Date:

  • ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ: ಜಾರಕಿಹೊಳಿ
  • ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿ: ಜೋಶಿ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪದಂತೆ ಪಿತೂರಿ ನಡೆಸಲು ಇವಿಎಂ ಮಾದರಿಯಲ್ಲಿ ಕೇಂದ್ರ ಸರ್ಕಾರ ತಂತ್ರಾಂಶಗಳನ್ನು ಹ್ಯಾಕ್ ಮಾಡಿ ಸರ್ವರ್ ಡೌನ್ ಆಗುವಂತೆ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇಲಾಖೆಯ ಸರ್ವರ್​ ಕೂಡ ಹ್ಯಾಕ್ ಆಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆರೋಪಿಸಿದರು.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್‌ಗಳನ್ನು ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಆನ್‌ಲೈನ್‌ನಲ್ಲಿ ಸಮಸ್ಯೆ ಹೆಚ್ಚಾದರೆ, ನೇರವಾಗಿ (ಆಫ್​ಲೈನ್) ಅರ್ಜಿ ಸ್ವೀಕರಿಸುತ್ತೇವೆ. ಇದರಿಂದ ಒಂದು ತಿಂಗಳು ತಡ ಆಗಬಹುದು. ಅದಕ್ಕಿಂತ ಹೆಚ್ಚೇನು ಆಗುವುದಿಲ್ಲ” ಎಂದರು.

“ಸರಿಯಾದ ಯೋಜನೆ ರೂಪಿಸದೆ ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಿದ್ದಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರಲ್ಲಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಸಮಸ್ಯೆಗಳನ್ನು ಸರಿಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಹ್ಯಾಕ್‌ ಮಾಡಿದರೆ ಹೇಗೆ? ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ”‌ ಎಂದರು.

ಈ ಸುದ್ದಿ ಓದಿದ್ದೀರಾ? ಸಕಾಲಕ್ಕೆ ಕೇಂದ್ರ ಅಕ್ಕಿ ವಿತರಣೆ ಮಾಡದಿದ್ದಲ್ಲಿ ಕಾನೂನು ಹೋರಾಟ: ಸಚಿವ ಪ್ರಿಯಾಂಕ್ ಖರ್ಗೆ

ಪ್ರಲ್ಹಾದ್‌ ಜೋಶಿ ತಿರುಗೇಟು

“ರಾಜ್ಯ ಸರ್ಕಾರದ ಸರ್ವರ್ ಹ್ಯಾಕ್ ಮಾಡಿದರೆ ದೂರು ನೀಡಲಿ” ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಮಾಡಿದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿಸಲಿ. ಸತೀಶ್ ಜಾರಕಿಹೊಳಿ ಹೇಳಿಕೆ ಹಾಸ್ಯಾಸ್ಪದವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸುಮ್ಮನೇ ಕುಂಟು ನೆಪ ಹೇಳುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....