ಮೈಸೂರು | ವಸತಿ ಯೋಜನೆ ಕಾಮಗಾರಿ ವೀಕ್ಷಿಸಿದ ಸಿಇಓ ಎಸ್. ಯುಕೇಶ್ ಕುಮಾರ್

Date:

Advertisements

ಮೈಸೂರು ಜಿಲ್ಲೆ, ಹುಣಸೂರು, ಹೆಗ್ಗಡದೇವನ ಕೋಟೆ ತಾಲ್ಲೂಕಿನ ವಸತಿ ರಹಿತ ಜನರಿಗಾಗಿ ನಿರ್ಮಿಸುತ್ತಿರುವ ವಸತಿ ಯೋಜನೆ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಎಸ್. ಯುಕೇಶ್ ಕುಮಾರ್ ವೀಕ್ಷಿಸಿ, ಪರಿಶೀಲಿಸಿದರು.

ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಪುರ 4 ನೇ ಹಾಡಿ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ಮಾದಾಪುರ, ಚಕ್ಕೊಡನಹಳ್ಳಿ ಹಾಗೂ ಅಣ್ಣೂರು ಗ್ರಾಮ ಪಂಚಾಯ್ತಿ ವ್ಯಾಪ್ತಿ ಗ್ರಾಮಗಳಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದರು. ಬಸವ, ಅಂಬೇಡ್ಕರ್, ಪಿಎಂಎವೈ ಹಾಗೂ ಪಿಎಂ ಜನ್ಮನ್ ವಿವಿಧ ವಸತಿ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣ ಕೆಲಸ ಪ್ರಗತಿಯಲ್ಲಿದ್ದು, ಇದುವರೆಗೆ ನಡೆದಿರುವ ಕಾಮಗಾರಿ, ಆರಂಭಗೊಳ್ಳದ ಕಾಮಗಾರಿ ಕುರಿತಾಗಿ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಿದರು.

ಹುಣಸೂರು ತಾಲ್ಲೂಕಿನ ಗುರುಪುರ ಗ್ರಾಮ ಪಂಚಾಯಿತಿಯಲ್ಲಿರುವ ನಾಗಾಪುರ-4ನೇ ಹಾಡಿಗೆ ಭೇಟಿ ನೀಡಿದ ಅವರು, ಮೊದಲಿಗೆ ತಳಪಾಯ ಹಂತದ ವಸತಿ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು. ಮನೆಗಳ ಪರಿಶೀಲನೆ ಸಂದರ್ಭ ಕೆಲವು ಫಲಾನುಭವಿಗಳ ಮನೆಗಳನ್ನು ಪೂರ್ಣಗೊಳಿಸದಿರುವುದು ಕಂಡು ಬಂದಿದ್ದು, ತುರ್ತಾಗಿ ಪ್ರಗತಿ ಸಾಧಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಹಾಗೂ ಪಿಡಿಒ ಅವರಿಗೆ ಸೂಚಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮೇ. 5 ರಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಸಂಬಂಧ ದತ್ತಾಂಶ ಸಂಗ್ರಹಣೆಗೆ ಸಮೀಕ್ಷೆ : ಶಿಲ್ಪಾ ನಾಗ್

ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಯೋಜನಾಧಿಕಾರಿ ಕೆ.ಬಿ.ಪ್ರಭುಸ್ವಾಮಿ, ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಮಲ್ಲೇಶ್, ತಾಲ್ಲೂಕು ಮಟ್ಟದ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್, ಪಿಡಿಒ ಮಂಜುನಾಥ್, ವಸತಿ ವಿಷಯ ನಿರ್ವಾಹಕಿ ದಿವ್ಯ, ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್, ಸಹಾಯಕ ನಿರ್ದೇಶಕ ಕೆ. ಎಂ. ರಘುನಾಥ್, ಸೇರಿದಂತೆ ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X