ಮೈಸೂರು | ಹುಣಸೂರಿನ ಹಾಡಿಗಳಿಗೆ ಭೇಟಿ ನೀಡಿದ ಸಿಇಓ ; ಸಮಸ್ಯೆಗಳ ಆಲಿಕೆ

Date:

Advertisements

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್ ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ವಿವಿಧ ಹಾಡಿಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಕೆ ಮಾಡಿದರು.

ಹನಗೂಡು ಹೋಬಳಿಯ ದೊಡ್ಡ ಹೆಜ್ಜುರು, ಉಮ್ಮತ್ತೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಲ್ಲೂರು ಪಾಲ, ಶಂಕರಪುರ ಹಾಡಿಗಳಿಗೆ ಭೇಟಿ ನೀಡಿ ವಸತಿ, ಶೌಚಾಲಯ,ಆಶ್ರಮ ಶಾಲೆಗಳಿಗೆ ಮೂಲಸೌಕರ್ಯ, ಗಿರಿಜನರಿಗೆ ಅಗತ್ಯವಾಗಿ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳು, ಕಸ ವಿಲೇವಾರಿ ಘಟಕ,ನಿವೇಶನ ವಂಚಿತರ ಮಾಹಿತಿ ಕಲೆ ಹಾಕಿದರಲ್ಲದೆ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿ ಗ್ರಾಮದಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಘಟಕ ನಿರ್ಮಾಣ ಮಾಡಲು ಕ್ರಿಯಾಯೋಜನೆ ಸಿದ್ದಪಡಿಸಿವಂತೆ ತಿಳಿಸಿ, ನಿವೇಶನ ವಂಚಿತರ ಮಾಹಿತಿ ಕಲೆ ಹಾಕಿ ನಿವೇಶನ ನೀಡುವ ಕೆಲಸಕ್ಕೆ ಮುಂದಾಗುವಂತೆ ಸೂಚಿಸಿದ್ದಾರೆ.

Advertisements

ಆಶ್ರಮ ಶಾಲೆಗಳ ಸಿಬ್ಬಂದಿಗಳು ವೇತನ ವಿಳಂಬವಾಗಿದ್ದು ತಿಂಗಳಿಗೆ ಸರಿಯಾಗಿ ವೇತನ ಸಿಕ್ಕರೆ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದ್ದಾರೆ.ಆಶ್ರಮ ಶಾಲೆಗಳಿಗೆ ಶೌಚಾಲಯ, ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಕೋರಿದ್ದಾರೆ.

ಗ್ರಾಮದ ಜನರು ನಿವೇಶನ, ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದಾಗ ಸುತ್ತಮುತ್ತ ಕಂದಾಯ ಭೂಮಿಯಿರುವುದು ತಿಳಿದು ಬಂದಿದ್ದು, ಜಿಲ್ಲಾಧಿಕಾರಿಯವರ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಭೇಟಿ ಸಮಯದಲ್ಲಿ ಇಓ ಕೆ ಹೊಂಗಯ್ಯ,ಎಇಇ ಪುಟ್ಟರಾಜು,ಸಿಡಿಪಿಐ ಹರೀಶ್,ತಾಲ್ಲೂಕು ಯೋಜನಾಧಿಕಾರಿ ರಾಜೇಶ್,ಪರಿಶಿಷ್ಟ ಪಂಗಡ ಇಲಾಖೆ ಸಹಾಯಕ ನಿರ್ದೇಶಕ ಗಂಗಾಧರ್,ನರೇಗಾ ಸಹಾಯಕ ನಿರ್ದೇಶಕ ಎಸ್ ಗಿರಿಧರ್ ಸೇರಿದಂತೆ ಮತ್ತಿತರೇ
ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X