ಚಳ್ಳಕೆರೆ | ಕೆಲವೇ ಕೆಲವು ಶ್ರೀಮಂತರ ಕೈಯಲ್ಲಿ ನಗರಸಭೆ ಮಳಿಗೆಗಳು; ಕರವೇ ಮುರಳಿ ಕಿಡಿ

Date:

Advertisements

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ನಗರಸಭೆ ಮಳಿಗೆಗಳು ಕೆಲವೇ ಕೆಲವು ಶ್ರೀಮಂತರ ಕೈವಶದಲ್ಲಿದ್ದು, ಅವರು ನಗರಸಭೆಯ ಆದಾಯಕ್ಕೆ ಮಾರಕವಾಗಿದ್ದಾರೆ ಎಂದು ಚಳ್ಳಕೆರೆ ನಗರದ ಕನ್ನಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಮುರಳಿ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಗರಸಭೆಯ ವಾಣಿಜ್ಯ ಮಳಿಗೆಗಳಿಂದ ಸರಿಯಾದ ಬಾಡಿಗೆ ಸಿಕ್ಕರೆ, ನಗರದ ಅಭಿವೃದ್ಧಿಗೆ ವಿನಿಯೋಗಿಸಬಹುದು. ಆದರೆ ಅಲ್ಲಿರುವ ಬಾಡಿಗೆದಾರರು ಅನೇಕ ವರ್ಷಗಳಿಂದ ತಮ್ಮ ಆಸ್ತಿಗಳಂತೆ ಆದಾಯವನ್ನು ಅನುಭವಿಸುತ್ತಿದ್ದಾರೆ” ಎಂದರು.

“ಲಕ್ಷಾಂತರ ರೂಪಾಯಿ ಬಾಡಿಗೆ ಬರುವ ಜಾಗದಲ್ಲಿ, ಕೇವಲ ₹500, ₹1000ಕ್ಕೆ ಬಾಡಿಗೆಗೆ ಪಡೆದು, ಅದನ್ನೂ ಸರಿಯಾಗಿ ನಗರಸಭೆಗೆ ಪಾವತಿಸದೆ, ಲಕ್ಷಾಂತರ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಇವರುಗಳು ನಗರಸಭೆಗೆ ಮತ್ತು ನಗರದ ಅಭಿವೃದ್ಧಿಗೆ ಮಾರಕವಾಗಿದ್ದಾರೆ” ಎಂದು ಕಿಡಿಕಾರಿದರು.

Advertisements

“ಇದೇ ವಿಷಯ ಖಂಡಿಸಿ ಹಲವಾರು ಸಂಘ-ಸಂಸ್ಥೆಗಳು, ಸಾಮಾಜಿಕ ಕಳಕಳಿಯ ಮುಖಂಡರು, ಬಹುತೇಕ ವರ್ಷಗಳಿಂದ ಹಲವು ರೀತಿಯ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಕೂಡಾ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಇತ್ತೀಚೆಗೆ  ಹೋರಾಟಗಾರರ ಫಲದಿಂದ ಮತ್ತು ಶಾಸಕರ ಹಿತಾಸಕ್ತಿಯಿಂದ, ಉತ್ತಮ ನೌಕರರ ಸಹಕಾರದಿಂದ, ಚಳ್ಳಕೆರೆ ನಗರದ ಅಭಿವೃದ್ಧಿ ದೃಷ್ಟಿಯಿಂದ ವ್ಯಾಪಾರಸ್ಥರನ್ನು ಖಾಲಿ ಮಾಡಿಸುವ ಒಂದು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ. ಶಾಸಕರ ಹಾಗೂ ನಗರಸಭೆಯ ಅಧಿಕಾರಿಗಳ ದಿಟ್ಟ ಕ್ರಮ ಶ್ಲಾಘನೀಯ” ಎಂದು ಅಭಿನಂದಿಸಿದರು.

ಈ ಸುದ್ದಿ ಓದಿದ್ದೀರ? ಶಿವಮೊಗ್ಗ | ಜ.21ರಂದು ‘ಗಾಂಧಿ ಭಾರತ’ ಸಮಾವೇಶ: ಸಚಿವ ಮಧು ಬಂಗಾರಪ್ಪ

ಗೌರವಾಧ್ಯಕ್ಷ ಬೋಜರಾಜು ಮಾತನಾಡಿ, “ಬಾಡಿಗೆದಾರರ ವಿರುದ್ಧ ನಗರದ ನಾಗರಿಕರು, ಸಂಘ ಸಂಸ್ಥೆಯವರು, ಸಾಮಾಜಿಕ ಕಳಕಳಿಯುಳ್ಳ ಹೋರಾಟಗಾರರು, ನಗರ ಸಭೆ ಮತ್ತು ಶಾಸಕರ ಬೆಂಬಲಕ್ಕೆ ನಿಂತುಕೊಳ್ಳುವ ಮೂಲಕ ನೈತಿಕ ಸ್ಥೈರ್ಯ ತುಂಬಬೇಕು. ಇಲ್ಲಿರುವ ಬಾಡಿಗೆದಾರರು ಮಳಿಗೆಗಳನ್ನು ಖಾಲಿ ಮಾಡದಿದ್ದರೆ, ಇನ್ನೂ ಹೆಚ್ಚಿನ ಹೋರಾಟವನ್ನು ಮುಂದುವರೆಸುವ ಮೂಲಕ ಜಿಲ್ಲಾಧಿಕಾರಿ, ಸಂಬಂಧಪಟ್ಟ ಮಂತ್ರಿಗಳು ಮತ್ತು ಸರ್ಕಾರದ ಗಮನಸೆಳೆಯಬೇಕು” ಎಂದು ಸಂಘ-ಸಂಸ್ಥೆಗಳಿಗೆ ಮನವಿ ಮಾಡಿದರು.

“ಬಾಡಿಗೆದಾರರು ಕಾನೂನಾತ್ಮಕವಾಗಿ ಹೋರಾಟ ಮಾಡಲಿ, ಅದರಲ್ಲಿ ತಪ್ಪೇನಿಲ್ಲ. ಅದನ್ನು ಬಿಟ್ಟು ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಧಮ್ಕಿ ಹಾಕುವುದು ಸರಿಯಲ್ಲ. ಹಾಲಿ ಇರುವ ನಗರಸಭೆಯ ಆಸ್ತಿಗಳನ್ನು ಖಾಲಿ ಮಾಡಿಸಿ ಉತ್ತಮ ಗುಣಮಟ್ಟದ ವಾಣಿಜ್ಯ ಮಳಿಗೆಗಳನ್ನು ಪುನರ್ ನಿರ್ಮಾಣ ಮಾಡಿ ಅರ್ಹರಿಗೆ, ಬಡವರಿಗೆ, ನಿರುದ್ಯೋಗಿ ವಿದ್ಯಾವಂತರಿಗೆ ಬಾಡಿಗೆಗೆ ಕೊಟ್ಟರೆ ಸಾಮಾಜಿಕವಾಗಿ ಉತ್ತಮ ಬೆಳವಣಿಗೆಯಾಗಲಿದೆ” ಎಂದು ಅಭಿಪ್ರಾಯಪಟ್ಟರು.

ಕರವೇ ತಾಲೂಕಧ್ಯಕ್ಷ ಪಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮರಿಕುಂಟೆ ಚಂದ್ರು, ಯುವಘಟಕದ ಅಧ್ಯಕ್ಷ ರವಿ, ಕಾರ್ಮಿಕ ಘಟಕ ಅಧ್ಯಕ್ಷರು ಮಂಜುನಾಥ್, ಪದಾಧಿಕಾರಿಗಳಾದ ರಾಜು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X