ಚಾಮರಾಜನಗರ | ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ : ವಡಗೆರೆ ದಾಸ್

Date:

Advertisements

ಚಾಮರಾಜನಗರ ಜಿಲ್ಲೆ, ಯಳಂದೂರು ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಅಂಬೇಡ್ಕರ್ ಸೇವಾ ಸಮಿತಿ ಮತ್ತು ಆಚರಣಾ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡ ವಡಗೆರೆ ದಾಸ್ ಮಾತನಾಡಿ ‘ ಯಳಂದೂರು ತಾಲ್ಲೂಕಿನಲ್ಲಿ ಶೇ 95.6 ರಷ್ಟು ಸಮೀಕ್ಷೆ ಮುಗಿದಿದೆ ಕೆಲವು ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ ‘ ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ಏಕ ಸದಸ್ಯ ಆಯೋಗ ರಚಿಸಿ ನಿವೃತ್ತ ಜಸ್ಟಿಸ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ಒಳಮೀಸಲಾತಿಯ ಅಂಗವಾಗಿ ಜಾತಿ ಗಣತಿ ಕಾರ್ಯವನ್ನು ರಾಜ್ಯಾದ್ಯಂತ ನಡೆಸುತ್ತಿದೆ. ಯಳಂದೂರು ತಾಲ್ಲೂಕಿನಲ್ಲಿ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿರುವ ಜಾತಿ ಗಣತಿಯಲ್ಲಿ ಹೊಲಯ ( ಬಲಗೈ) ಸಮುದಾಯ ಶೇ 95.6% ಸಮೀಕ್ಷೆ ಮುಗಿದಿದೆ. ಸಮೀಕ್ಷೆ ದಿನವನ್ನು ಮತ್ತೇ 29 ರ ತನಕ ಮುಂದುವರೆಸಿರುವುದರಿಂದ ಶೇ 100% ರಷ್ಟು ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟು ಹೊಲಯ ಕುಟುಂಬ ಪಡಿತರ ಚೀಟಿಯ ಪ್ರಕಾರ 5,956 ಕುಟುಂಬಗಳಿವೆ. ಇದರಲ್ಲಿ ನೋಂದಾಯಸಿರುವ 5,683. ನೋಂದಣಿ ಆಗದೇ ಇರುವ 273. ಒಟ್ಟು ಶೇ 95.6% ಆಗಿದೆ. ಉಳಿದ 273 ಕುಟುಂಬದವರದು ತಾಂತ್ರಿಕ ದೋಷದಿಂದ ಕೂಡಿದೆ ಅದನ್ನು ಸರಿ ಪಡಿಸಿ ಉಳಿದ ದಿನಗಳಲ್ಲಿ ಸಂಪೂರ್ಣಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಯಳಂದೂರು ತಾಲ್ಲೂಕಿನಲ್ಲಿ ಕಿನಕಹಳ್ಳಿ, ಕಂದಹಳ್ಳಿ, ಮೆಲ್ಲಹಳ್ಳಿ, ಅಗರ, ರಾಮಾಪುರ, ಅಗ್ರಹಾರ, ಬಿ ಆರ್ ಹಿಲ್ಸ್ ಗಳಲ್ಲಿ ಪೂರ್ಣಗೊಂಡಿದೆ ಎಂದರು.

Advertisements

ಕಿನಕಹಳ್ಳಿ ರಾಚಯ್ಯ ಮಾತನಾಡಿ ಚಾಮರಾಜನಗರ ಜಿಲ್ಲೆ ಒಳಮೀಸಲಾತಿ ಜಾತಿ ಗಣತಿಯಲ್ಲಿ ಬಲಗೈ ಸಮುದಾಯದ ಪ್ರತಿಯೊಬ್ಬರೂ ‘ಹೊಲಯ’ ಎಂದು ನಮೂದಿಸಲು ತಿಳಿಸಲಾಗಿದೆ. ಈ ಹಿನ್ನಲೆಯಲ್ಲಿ ಯಳಂದೂರು ತಾಲ್ಲೂಕು ಶೇ 95% ಸಮೀಕ್ಷೆ ಮುಗಿದಿದೆ. ಜಿಲ್ಲೆಯಲ್ಲಿ ಪಡಿತರ ಚೀಟಿಯ ಪ್ರಕಾರ ಒಟ್ಟು 70,243 ಕುಟುಂಬವಿದೆ ಒಟ್ಟು ಸದಸ್ಯರ ಸಂಖ್ಯೆ 2,33,603 ” ಇದೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಲಿಖಿತ ಸಂವಿಧಾನವಾದಿಗಳಿಂದ ಲಿಖಿತ ಸಂವಿಧಾನ ದುರ್ಬಲಗೊಳಿಸಲು ಹುನ್ನಾರ : ಸಚಿವ ಮಹದೇವಪ್ಪ

ಈ ಸಂದರ್ಭದಲ್ಲಿ ಕೆಸ್ತೂರು ಸಿದ್ದರಾಜು, ಗುಂಬಳ್ಳಿ ಮಹದೇವ್, ಯರಿಯೂರು ರಾಜಣ್ಣ, ಜಯರಾಮ್,ಹೊನ್ನೂರು ವೆಂಕಟೇಶ್, ಮಲ್ಲಿಕಾರ್ಜುನ, ಮದ್ದೂರು ಉಮಾಶಂಕರ್, ವೈ ಕೆ ಮೋಳೆ ನಂಜುಂಡ, ಯರಿಯೂರು ನಾಗೇಂದ್ರ, ಗೌತಮ್ ಬಡಾವಣೆ ವಜ್ರಮುನಿ, ಶಶಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X