ಚಾಮರಾಜನಗರ | ಹನೂರಿ‌ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

Date:

  • ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಕೊಡುಗೆ
  • ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಆಸ್ಪತ್ರೆಗೂ ಆಂಬ್ಯುಲೆನ್ಸ್‌ ನೀಡಿಕೆ

ಬಹುಭಾಷಾ ನಟ ಪ್ರಕಾಶ್ ರೈ ಅವರು ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಸರ್ಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್‌ಗಳನ್ನು ಕೊಡುಗೆ ನೀಡುವ ಮೂಲಕ ತಮ್ಮ ಸಮಾಜಮುಖಿ ಸೇವೆಗಳನ್ನು ಮುಂದುವರೆಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಅಪ್ಪು ಹೆಸರಿನ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದು, ರಾಜ್ಯದ ಪ್ರತೀ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆಯನ್ನು ಪ್ರಕಾಶ್‌ ರೈ ಒಡೆತನದ ಪಿಆರ್‌ಎಫ್ ಫೌಂಡೇಶನ್ ಹಮ್ಮಿಕೊಂಡಿದೆ.

ನಟ ಪ್ರಕಾಶ್‌ ರೈ ಮಾತನಾಡಿ, “ನಾನು ಪುನೀತ್ ರಾಜ್‌ಕುಮಾರ್ ಅವರ ಜೊತೆ ಮೂರು ಸಿನಿಮಾಗಳಲ್ಲಿ ನಟಿಸಿದ್ದು, ಅವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದೆ. ಕೋವಿಡ್-19 ವೇಳೆಯಲ್ಲಿ ಅವರು ನನಗೆ ದೇಣಿಗೆ ರೂಪದಲ್ಲಿ ಸಾಕಷ್ಟು ಹಣ ಸಹಾಯ ಮಾಡಿದ್ದರು” ಎಂದು ನೆನಪಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪುನೀತ್ ರಾಜ್‌ಕುಮಾರ್‌ ಮೃತಪಡುವ ವೇಳೆ ಅವರಿಗೆ ಸಕಾಲದಲ್ಲಿ ಆಂಬ್ಯುಲೆನ್ಸ್ ಸಿಕ್ಕಿದ್ದರೆ ಬದುಕುತ್ತಿದ್ದರು ಎಂಬ ಮಾತುಗಳು ಕೇಳಿ ಬಂದಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು ಎನ್ನುವ ಉದ್ದೇಶದಿಂದ ಅವರ ಹೆಸರಿನಲ್ಲಿ ಆಂಬ್ಯುಲೆನ್ಸ್ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಹೋಲಿಕ್ರಾಸ್ ಆಸ್ಪತ್ರೆಗೂ ಕೊಡುಗೆ

ಕಳೆದ ಕೆಲ ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ವಿಷ ಪ್ರಸಾದ ದುರಂತ ಪ್ರಕರಣದ ವೇಳೆ ಹೋಲಿಕ್ರಾಸ್ ಆಸ್ಪತ್ರೆಯು ಗಣನೀಯ ಆರೋಗ್ಯ ಸೇವೆ ಒದಗಿಸಿತ್ತು. ಇಲ್ಲಿನ ಆಸ್ಪತ್ರೆಗೂ ಪ್ರಕಾಶ್ ರೈ ಆ್ಯಂಬುಲೆನ್ಸ್ ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಹೋಲಿಕ್ರಾಸ್ ಆಸ್ಪತ್ರೆಯು ಹಲವು ವರ್ಷಗಳಿಂದ ಬಡಜನರಿಗೆ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶದ ಜನರಿಗೆ ಅನುಕೂಲವಾಗಲೆಂದು ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ಹೋಲಿಕ್ರಾಸ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ ಮಾತನಾಡಿ, “ನಮ್ಮ ಆಸ್ಪತ್ರೆ ಸೇವೆಯನ್ನು ಗುರುತಿಸಿ ಆ್ಯಂಬುಲೆನ್ಸ್‌ಗಳನ್ನು ಕೊಡುಗೆ ನೀಡಿರುವ ಪ್ರಕಾಶ್ ರೈ ಅವರಿಗೆ ನಮ್ಮ ಸಿಬ್ಬಂದಿಗಳ ವತಿಯಿಂದ ಧನ್ಯವಾದಗಳನ್ನು ತಿಳಿಸಿ, ಇಂತಹ ಅವಕಾಶವನ್ನು ಬಳಸಿಕೊಂಡು ಕಾಡಂಚಿನ ಗುಡ್ಡ ಪ್ರದೇಶದ ಜನರಿಗೆ ಇನಷ್ಟು ಸೇವೆ ಸಲ್ಲಿಸುತ್ತೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...