ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Date:

Advertisements

ಎರೆಡು ಬಾರಿ ಮುಂದೂಡಲಾಗಿದ್ದ ಸಚಿವ ಸಂಪುಟ ಸಭೆ ಇದೇ ಏ. 24 ರಂದು ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದೆ.

ಫೆ. 15 ಹಾಗೂ ಫೆ. 17 ರಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ,ಬೇರೆ ಬೇರೆ ಕಾರಣಗಳಿಂದ ಸಭೆ ನಡೆದಿರಲಿಲ್ಲ. ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮೊದಲ ಬಾರಿಗೆ ನಡೆಸಿ ಹಳೇ ಮೈಸೂರು ಪ್ರಾಂತ್ಯದ ಗಮನ ಸೆಳೆಯುವ ನಿಟ್ಟಿನಲ್ಲಿ ಆರಂಭದಿಂದಲೇ ಪ್ರಯತ್ನ ನಡೆದಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ಸಭೆ ನಡೆಸಿ ಸಚಿವ ಸಂಪುಟ ಸಭೆಗೆ ಅಗತ್ಯವಿರುವ ವ್ಯವಸ್ಥೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಆದರೆ ಆರೋಗ್ಯ, ನಿರಾವರಿ, ಮೂಲಭೂತ ಸೌಲಭ್ಯ ಒದಗಿಸಲು ನೆರವಾಗುತ್ತದೆ ಎಂಬ ನಿರೀಕ್ಷೆಯಲ್ಲಿದೆ.

Advertisements

ಅದರಲ್ಲೂ ಹೇಳಿ ಕೇಳಿ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ. ಜನಪ್ರತಿನಿಧಿಗಳು ಇಲ್ಲಿಗೆ ಬರಲು ಹಿಂದೇಟು ಹಾಕುವ ಸಂದರ್ಭವಿದ್ದಾಗ ಸಿದ್ದರಾಮಯ್ಯ ಅವರು ನಗರ ಪ್ರವೇಶ ಮಾಡಿ ಕಳಂಕ ತೊಡೆದು ಹಾಕಿದ್ದರು.

ಮತ್ತೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುವುದರಿಂದ ಜಿಲ್ಲೆಗೆ ಪೂರಕವಾದ ಅಭಿವೃದ್ಧಿ ವಿಚಾರದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಜಿಲ್ಲೆಯ ಜನಪ್ರತಿನಿದಿಗಳು, ಅಧಿಕಾರಿಗಳು.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘

ಈ ನಡುವೆ ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವು ಮಾಡಲು ಚಿಂತಿಸಿರುವ ಸರ್ಕಾರದ ಗಮನ ಸೆಳೆಯಲು ಪ್ರಸ್ತಾಪ ತಳ್ಳಿ ಹಾಕುವಂತೆ ಒತ್ತಡ ಹೇರಲು, ಜಿಲ್ಲೆಯ ಪರಿಸರವಾದಿಗಳು, ಸಾಮಾಜಿಕ ಹೋರಾಟಗಾರರು ಚಿಂತನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X