ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

Date:

Advertisements

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ ಮೂಲಕ ಜಾತಿ ನಿಂದನೆ ಮಾಡಿದ್ದು, ದಲಿತರ ಮನಸ್ಸನ್ನು ಘಾಸಿಗೊಳಿಸಿದ್ದಾರೆ. ಇಂತಹ ಖಂಡನಾರ್ಹ ಹೇಳಿಕೆ ನೀಡಿರುವ ನಟನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲೇಬೇಕು ಎಂದು ರೈತ ಮುಖಂಡ ಅನಗಳ್ಳಿ ಬಸವರಾಜು ಆಗ್ರಹಿಸಿದರು.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಮಸೀದಿ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ರೈತ ಮುಖಂಡ ಅನಗಳ್ಳಿ ಬಸವರಾಜು ನೇತೃತ್ವದಲ್ಲಿ ಹಲವು ಪ್ರಗತಿಪರ ಸಂಘಟನೆಗಳು ಒಗ್ಗೂಡಿ ನಟ ಉಪೇಂದ್ರ ಹೇಳಿಕೆ ವಿರುದ್ಧ ನಡೆಸಿದ ಬಾರುಕೋಲು ಚಳವಳಿಯಲ್ಲಿ ಮಾತನಾಡಿದರು.

“ನಟ ಉಪೇಂದ್ರ ಅವಹೇಳನಕಾರಿಯಾಗಿ ಮಾತನಾಡಿ ಘನ ನ್ಯಾಯಾಲಯದ ಮೂಲಕ ತಡೆಯಾಜ್ಞೆ ತಂದಿರಬಹುದು. ಆದರೆ, ಜಾತಿ ನಿಂದನೆ ಪ್ರಕಾರ ಜೈಲು ಶಿಕ್ಷೆ ಆಗಲೇಬೇಕು” ಎಂದು ಒತ್ತಾಯಿಸಿದರು.

Advertisements

“ಕೊಳ್ಳೇಗಾಲ ಪಟ್ಟಣದಲ್ಲಿ ಹಲವು ಸಂಘಟನೆಗಳು ಸೇರಿ ಈವರೆಗೆ ನಿರಂತರವಾಗಿ ಸುಮಾರು 35 ದಿನಗಳಿಂದ ಪ್ರತಿ ದಿನವೂ ವಿನೂತನ ಪ್ರತಿಭಟನೆ ನಡೆಸುತ್ತಾ ಬಂದಿದ್ದು, ತಾಲೂಕು ಆಡಳಿತದ ಮೂಲಕ ನಟ ಉಪೇಂದ್ರನಿಗೆ ಶಿಕ್ಷೆ ಆಗುವಂತೆ ಕೋರಿ ಮನವಿ ಸಲ್ಲಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

“ಶನಿವಾರವೂ ಆಹಾರ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಜಾತಿ ನಿಂದನೆ ಮಾಡಿದ ಉಪೇಂದ್ರನ ಮೇಲೆ ಕೂಡಲೇ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಚಾಮರಾಜು, ಅಕ್ರಮ ಉಲ್ಲಾ ಖಾನ್ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X