ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋಣ್ ಹಾಗೂ ಕ್ಯಾಮೆರಾ ಬಳಿಸಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಗುಂಡ್ಲುಪೇಟೆ ತಹಶೀಲ್ದಾರ್ ಟಿ ರಮೇಶ್ಬಾಬು ಅವರು ನಿಷೇಧ ಆದೇಶ ಹೊರಡಿಸಿದ್ದಾರೆ.
ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಬೆಟ್ಟದಲ್ಲಿರುವ ದೇವಾಲಯಕ್ಕೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಸಂಜೆ ವೇಳೆ, ಕಾಡಾನೆಗಳು ಹೇವಾಲಯದ ಸುತ್ತಮುತ್ತ ಓಡಾಡುತ್ತವೆ. ಪ್ರವಾಸಿಗರು ಅವುಗಳ ಬಳಿ ತೆರಳಿ ಫೋಟೋ ತೆಗೆಯುವುದು, ವಿಡಿಯೋ ಮಾಡುವುದು, ಸೆಲ್ಫಿ ತೆಗೆದುಕೊಳ್ಳುವುದು ಮಾಡುತ್ತಿದ್ದಾರೆ. ಕಾಡಾನೆಗಳು ಜನರ ಮೇಲೆ ದಾಳಿ ಮಾಡಿದರೆ ತೊಂದರೆಯಾಗುತ್ತದೆ. ಹೀಗಾಗಿ, ದೇವಾಲಯ ಮತ್ತು ಬೆಟ್ಟದಲ್ಲಿ ಚಿತ್ರೀಕರಣ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಭಕ್ತರು ಪೂಜನಾ ಸ್ಥಳವೆಂದು ಭಾವಿಸಿದರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಗರ ಅಚ್ಚುಮೆಚ್ಚಿನ ತಾಣವೂ ಆಗಿದೆ.