ಚಾಮರಾಜನಗರ | ಜಿಂಕೆ ಕೊಂಬು, ಮದ್ದು ಗುಂಡುಗಳ ಅಕ್ರಮ ಸಾಗಾಟ; ಮೂವರ ಬಂಧನ

Date:

Advertisements

ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಬೈಕ್‌ನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಮದ್ದು ಗುಂಡುಗಳನ್ನು ಸಾಗಣೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಕೊಳ್ಳೇಗಾಲ ನಗರದ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಚೆನ್ನಲಿಂಗನಹಳ್ಳಿ ಬಸ್ ನಿಲ್ದಾಣದ ಬಳಿ ಇಬ್ಬರು ವ್ಯಕ್ತಿಗಳು ಬೈಕಿನಲ್ಲಿ ಜಿಂಕೆಯ ಒಣಗಿದ ಕೊಂಬುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.

ಹನೂರು ತಾಲೂಕಿನ ಹುಣಸೆಪಾಳ್ಯ ಗ್ರಾಮದ ಈರಣ್ಣ ಮತ್ತು ಆರ್ಯ ಎಂ. ಬಂಧಿತ ಆರೋಪಿಗಳು. ಇವರಿಂದ 12 ಜಿಂಕೆ ಕೊಂಬು ಹಾಗೂ ಹೋಂಡಾ ಶೈನ್ ಬೈಕ್ ವಶಪಡಿಸಿಕೊಂಡಿದ್ದಾರೆ.

Advertisements

ಜಿಂಕೆ ಕೊಂಬುಗಳನ್ನು ಮಾರಾಟ ಮಾಡುವ ಸಲುವಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ಖಚಿತ ಪಡಿಸಿಕೊಂಡ ಅರಣ್ಯ ಸಂಚಾರ ದಳದ ಪಿಎಸ್ಐ ವಿಜಯರಾಜು ಹಾಗೂ ಸಿಬ್ಬಂದಿ ಚೆನ್ನಾಲಿಂಗನಹಳ್ಳಿ ಗ್ರಾಮದ ಬಳಿಯ ಅಡ್ಡರಸ್ತೆಯಲ್ಲಿರುವ ಬಸ್ ನಿಲ್ದಾಣದಲ್ಲಿ ದಾಳಿ ನಡೆಸಿ, ಆರೋಪಿಗಳನ್ನು ಜಿಂಕೆ ಕೊಂಬುಗಳ ಸಮೇತ ಬಂಧಿಸಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಗರದ ಅರಣ್ಯ ಸಂಚಾರ ದಳದ ಪೊಲೀಸರು, ಗ್ರಾಮಾಂತರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕಾಡು ಪ್ರಾಣಿಗಳನ್ನು ಬೇಟೆಯಾಡಲು ಅಕ್ರಮವಾಗಿ ಮದ್ದು ಗುಂಡುಗಳನ್ನು ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ತಾಲೂಕಿನ ಕೊತ್ತನೂರು ಗ್ರಾಮದಲ್ಲಿ ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ತಾಲೂಕಿನ ಜಾಗೈರಿಯ ಸಿ ಆರ್‌ ನಗರದ ನಿವಾಸಿ ಸಗಯ್‌ ರಾಜ್‌(47) ಬಂಧಿತ ಆರೋಪಿ. ಈತನಿಂದ 9 ಸಿಡಿಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಕಾಡು ಪ್ರಾಣಿಗಳನ್ನು ಬೇಟೆಯಾಡುವ ಸಲುವಾಗಿ ತಾಲೂಕಿನ ಕೊತ್ತನೂರು ಕೆರೆ ಏರಿ ಮೇಲೆ ಸೈಕಲ್‌ನಲ್ಲಿ ಅಕ್ರಮವಾಗಿ ಸಿಡಿಮದ್ದು ಗುಂಡು ಇಟ್ಟುಕೊಂಡು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿ ಕೊಳ್ಳೆಗಾಲ ಗ್ರಾಮಾಂತರ ಠಾಣೆಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X