ಚಾಮರಾಜನಗರ | ನಾಡಹಬ್ಬ ದಸರಾಕ್ಕೆ ಹೊರಟ ಗಜ ಪಯಣಕ್ಕೆ ಶಾಸಕ ಗಣೇಶ್ ಪ್ರಸಾದ್ ಚಾಲನೆ

Date:

Advertisements

ವಿಶ್ವ ವಿಖ್ಯಾತ ಮೈಸೂರಿನ ದಸರಾ ಅಕ್ಟೋಬರ್ 15ರಿಂದ ಆರಂಭವಾಗುತ್ತಿದ್ದು, ಬಂಡಿಪುರ ಹುಲಿ ಸಂರಕ್ಷಣಾ ವ್ಯಾಪ್ತಿಯ ಮದ್ದೂರು ವಲಯದ ರೋಹಿತ್ ಮತ್ತು ಹಿರಣ್ಯ ಎಂಬ ಹೆಸರಿನ ಆನೆಗಳನ್ನು ಮೈಸೂರಿಗೆ ಕಳುಹಿಸಿಕೊಡಲಾಗುತ್ತಿದೆ. ಈ ಆನೆಗಳು ಒಂದು ತಿಂಗಳ ಕಾಲ ಮೈಸೂರಿನ ಅರಮನೆಯಲ್ಲಿದ್ದು ದಸರಾ ಜಂಬೂಸವಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ ಎಂದು ಗುಂಡ್ಲುಪೇಟೆ ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ತಿಳಿಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದಿಂದ ನಾಡಹಬ್ಬ ದಸರಾಕ್ಕೆ ಹೊರಟ ಗಜ ಪಯಣಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಂಡೀಪುರ ಹುಲಿ ಯೋಜನೆಯ ಸಂರಕ್ಷಣೆಯ ಪ್ರಭಾರ ನಿರ್ದೇಶಕ ಪ್ರಭಾಕರನ್ ಮಾತನಾಡಿ, “ಮದ್ದೂರು ವಲಯದಿಂದ ಎರಡು ಆನೆಗಳನ್ನು ಮೈಸೂರಿನ ದಸರಾ ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುತ್ತಿದ್ದು, ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳಲಿರುವ ಸಾಕಾನೆಗಳಿಗೆ ಎಲ್ಲ ರೀತಿಯ ತರಬೇತಿ ನೀಡಲಾಗಿದೆ. ರಾಂಪುರ ಆನೆ ಶಿಬಿರದ ಸೌಮ್ಯ ಸ್ವಭಾವದ ಆನೆಗಳು ಯಶಸ್ವಿಯಾಗಿ ದಸರಾದಲ್ಲಿ ಭಾಗವಹಿಸಿ ವಾಪಸ್ಸಾಗಲಿ ಶುಭವಾಗಲಿ” ಎಂದು ಹಾರೈಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕುಳುವ ಸಮುದಾಯವನ್ನು ಎಸ್.ಸಿ ಪಟ್ಟಿಯಿಂದ ತೆಗೆಯಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ

ಗಜ ಪಯಣಕ್ಕೆ ವಿಜೃಂಭಣೆಯಿಂದ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ದಂಡಾಧಿಕಾರಿಗಳಾದ ಟಿ ರಮೇಶ್ ಬಾಬು ಮತ್ತು ಎಸಿಎಫ್ ಪರಮೇಶ್ವರ್ ಮತ್ತು ನವೀನ್ ರವೀಂದ್ರ ವಲಯ ಅರಣ್ಯ ಅಧಿಕಾರಿ ನವೀನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X