ಚಾಮರಾಜನಗರ | ಮನಿ ಡಬ್ಲಿಂಗ್ ಪ್ರಕರಣ; ಪಿಎಸ್ಐ ಪರಾರಿ

Date:

Advertisements

ಚಾಮರಾಜನಗರ ಕ್ರೈಮ್ ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ನಾಲ್ಕು ಮಂದಿ ಮನಿ ಡಬ್ಲಿಂಗ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ನಾಲ್ವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಬಿ. ಟಿ. ಕವಿತಾ ಅಮಾನತು ಮಾಡಿದ್ದಾರೆ.

ಸೈಬರ್ ಕ್ರೈಮ್ ನ ಪಿಎಸ್ಐ ಅಯ್ಯನಗೌಡ, ಕಾನ್ಸ್ಟೇಬಲ್ ಮೋಹನ್, ಮಹೇಶ್ ಹಾಗೂ ಟೌನ್ ಸ್ಟೇಷನ್ ಕಾನ್ಸ್ಟೇಬಲ್ ಬಸವಣ್ಣ ತಲೆ ಮರೆಸಿಕೊಂಡಿರುವ ಸಿಬ್ಬಂದಿಗಳಾಗಿದ್ದಾರೆ. ತಮಿಳುನಾಡು ಮೂಲದ ಉದ್ಯಮಿಯೊಬ್ಬರಿಗೆ ₹3.70 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡುವುದಾಗಿ ನಂಬಿಸಿ, ವಂಚಿಸಿದ್ದರು ಎನ್ನಲಾಗಿದೆ.

ತಮಿಳುನಾಡು ಮೂಲದ ಉದ್ಯಮಿ ಸಚ್ಚಿದಾನಂದ ಮೂರ್ತಿಗೆ ಜುಲೈ. 26 ರಂದು ಸಯ್ಯದ್ ಅನ್ಸಾರಿ ಹಾಗೂ ಇಮ್ರಾನ್ ಕರೆ ಮಾಡಿ ₹3 ಲಕ್ಷ ರೂಪಾಯಿ ನೀಡುವಂತೆ ತಿಳಿಸಿ ತಿಂಗಳೊಳಗಾಗಿ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಹೋಟೆಲ್ ಗೆ ಕರೆಸಿರುತ್ತಾರೆ. ಮೊದಲೇ ಪೂರ್ವ ಸಿದ್ಧತೆಯಲ್ಲಿದ್ದ ತಂಡ ಪಿಎಸ್ಐ ಅಯ್ಯನಗೌಡ ಅವರಿಗೆ ತಿಳಿಸಿದಾಗ, ತಕ್ಷಣವೇ ಸಿಬ್ಬಂದಿಗಳೊಡನೆ ಹೋಟೆಲ್ ಮೇಲೆ ದಾಳಿ ಮಾಡಿದಂತೆ ನಾಟಕವಾಡಿದ್ದಾರೆ.

Advertisements

ಪ್ರಕರಣ ದಾಖಲು ಮಾಡಬಾರದು ಎಂದರೆ ₹4 ಲಕ್ಷ ರೂಪಾಯಿ ನೀಡುವಂತೆ ಬಲವಂತವಾಗಿ ಧಮ್ಕಿ ಹಾಕಿದ ಹಿನ್ನಲೆಯಲ್ಲಿ ಉದ್ಯಮಿ ತನ್ನ ಬಳಿಯಿದ್ದ ₹3 ಲಕ್ಷ ರೂಪಾಯಿ ನೀಡಿದ್ದಾರೆ. ಬಳಿಕ ಫೋನ್ ಪೇ ಮೂಲಕ ಅನ್ಸಾರಿ ಎಂಬಾತನ ಖಾತೆಗೆ 70 ಸಾವಿರ ಆನ್ಲೈನ್ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕರ್ತವ್ಯಲೋಪ; ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅಮಾನತ್ತು

ಉದ್ಯಮಿ ಸಚ್ಚಿದಾನಂದ ಮೂರ್ತಿ ಪ್ರಕರಣದ ಸಂಭಂದ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸಂಪೂರ್ಣ ಮಾಹಿತಿ ಒದಗಿಸಿ ದೂರು ದಾಖಲಿಸಿದ ಹಿನ್ನಲೆಯಲ್ಲಿ ಆರೋಪಿಗಳಾದ ಅನ್ಸಾರಿ ಹಾಗೂ ಸಯ್ಯದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೇ, ನಾಲ್ವರು ಪೊಲೀಸ್ ಸಿಬ್ಬಂದಿಗಳು ಪರಾರಿಯಾಗಿದ್ದು, ಇವರುಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X