ಚಾಮರಾಜನಗರ | ರಾಜರು ಕೊಟ್ಟಿರುವ ಭೂಮಿಯನ್ನು ಕಿತ್ತುಕೊಳ್ಳಲ್ಲ: ಪ್ರಮೋದಾದೇವಿ ಒಡೆಯರ್

Date:

Advertisements

ಚಾಮರಾಜನಗರ ಜಿಲ್ಲೆಯಲ್ಲಿ ರಾಜರು ದಾನವಾಗಿ ಕೊಟ್ಟಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಜನರಿಂದ ಕಿತ್ತುಕೊಳ್ಳುವುದಿಲ್ಲ. ಈ ಬಗ್ಗೆ ಆತಂಕ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

ಜಿಲ್ಲೆಯಲ್ಲಿ ಮೈಸೂರು ರಾಜಮನೆತರದ ಹೆಸರಿನಲ್ಲಿರುವ 5 ಸಾವಿರ ಎಕರೆ ಖಾಸಗಿ ಸ್ವತ್ತಿಗೆ ಖಾತೆ ಮಾಡಿಸಿಕೊಳ್ಳುವ ವಿಚಾರವಾಗಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಂದಾಯ ಗ್ರಾಮಗಳನ್ನು ಮಾಡುವುದಾಗಿ ಚಾಮರಾಜನಗರ ಜಿಲ್ಲಾಡಳಿತ ಹೇಳಿದೆ. ಅದರಲ್ಲಿ ನಮಗೆ ಸೇರಿದ ಜಾಗವೂ ಇದೆ. ಹಾಗಾಗಿ ನಮ್ಮಲ್ಲಿರುವ ದಾಖಲೆಗಳ ಆಧಾರದ ಮೇಲೆಯೇ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕಂದಾಯ ಗ್ರಾಮ ಮಾಡುವ ಬಗ್ಗೆ ನಮಗೂ ಮಾಹಿತಿ ನೀಡಿದ್ದರೆ ಇಷ್ಟು ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ” ಎಂದರು.

“ಮಹಾರಾಜರು ದಾನವಾಗಿ ಕೊಟ್ಟಿರುವ ಭೂಮಿ ಕೊಟ್ಟಿದ್ದರೆ ಆ ಬಗ್ಗೆ ಯಾವುದೇ ತಕರಾರಿಲ್ಲ. ಈ ಬಗ್ಗೆ ಯಾವುದೇ ಪ್ರಶ್ನೆಗಳಿದ್ದರೂ ಆ ಭಾಗದ ಗ್ರಾಮಸ್ಥರು ನಮ್ಮನ್ನು ನೇರವಾಗಿ ಭೇಟಿಯಾಗಬಹುದು. ಒಂದು ವೇಳೆ ಅದು ನಮ್ಮ ಜಾಗವೇ ಆಗಿದ್ದರೂ ಸಂಬಂಧಿಸಿದವರಿಗೆ ಉಳುಮೆ ಮಾಡಲು ಜಮೀನು ಕೊಡಲಾಗುತ್ತದೆ. ಜಮೀನು ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ಗ್ರಾಮಸ್ಥರಿಗೆ ಯಾವುದೇ ರೀತಿ ತೊಂದರೆ ಕೊಡುವುದಿಲ್ಲ” ಎಂದು ಪುನರುಚ್ಚರಿಸಿದರು.

Advertisements

ಇದನ್ನೂ ಓದಿ: ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X