ಚಾಮರಾಜನಗರ | ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ನೆಡೆಸಲು ಪೂರ್ವಭಾವಿ ಸಭೆ

Date:

Advertisements

ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ಹಾಗೂ ಜನತಾದರ್ಶನ ನಡೆಸಲು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಶಾಸಕ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು “ವಾಲ್ಮೀಕಿ ಜಯಂತಿ ವಿಚಾರವಾಗಿ ನಾಯಕ ಸಮಾಜದ ಯಜಮಾನರುಗಳ ತೀರ್ಮಾನದಂತೆ ಅಕ್ಟೋಬರ್ 28ರಂದು ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಗುತ್ತದೆ. ಹಾಗೂ ಸಮಾಜದ ಹಿರಿಯರ ಮತ್ತು ಮುಖಂಡರ ಅಪೇಕ್ಷೆಯಂತೆ ನಾಯಕ ಸಮುದಾಯದ ಸ್ವಾಮೀಜಿ ಮತ್ತು ಸಚಿವರುಗಳು ಸೇರಿದಂತೆ ದಿನಾಂಕ ನಿಗದಿ ಪಡಿಸಿ ತಾಲೂಕಿನಲ್ಲಿ ಬಹಳ ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ವಾಲ್ಮೀಕಿ ಭವನದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು “ವಾಲ್ಮೀಕಿ ಭವನ ಕಾಮಗಾರಿ ಅಪೂರ್ಣಗೊಂಡಿದ್ದು, ಮುಂದಿನ ಎರಡು ಮೂರು ತಿಂಗಳಲ್ಲಿ ಸಚಿವರ ಜೊತೆಗೆ ಚರ್ಚೆ ಮಾಡಿ ಅನುದಾನ ಮಂಜೂರು ಮಾಡಲಾಗುವುದು” ಎಂದು ಹೇಳಿದ ಅವರು ವಾಲ್ಮೀಕಿ ಜಯಂತಿ ಆಚರಣೆ ದಿನ ಊಟ ಮತ್ತು ಶಾಮಿಯಾನದ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು

Advertisements

ಗ್ರಾಮೀಣ ದಸರಾ ಅಕ್ಟೋಬರ್ 20ಕ್ಕೆ ದಿನಾಂಕ ನಿಗದಿಪಡಿಸಿದ ಬಳಿಕ ಸಾರ್ವಜನಿಕರು, ʼರಸ್ತೆಯಲ್ಲಿ ವಿದ್ಯುತ್ ಅಲಂಕಾರ ಮಾಡುವ ಬಗ್ಗೆ ತಿಳಿಸಿದರು. ಗುಂಡ್ಲುಪೇಟೆ ಗಡಿ ತಾಲೂಕು ಆಗಿರುವ ಕಾರಣ ಸ್ವಾಗತ ಕಮಾನು ಅಳವಡಿಸುವಂತೆ ಹಾಗೂ ಕಲಾತಂಡಗಳನ್ನು ಒಳಗೊಂಡಂತೆ ಕವಿಗೋಷ್ಠಿ, ರೈತರ ದಸರಾ ಹಬ್ಬದ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಬೇಕುʼ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, “ಸರ್ಕಾರದಿಂದ ಗ್ರಾಮೀಣ ದಸರಾ ಆಚರಣೆಗೆ ಸಣ್ಣ ಪ್ರಮಾಣದ ಅನುದಾನ ಸಿಗಲಿದ್ದು, ಅದರ ಚೌಕಟ್ಟಿನಲ್ಲಿ ನಡೆಸಬೇಕು. ಅಲ್ಲದೇ ಗ್ರಾಮೀಣ ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳು ಸಂಜೆ 4ರಿಂದ ರಾತ್ರಿ 10ರವರೆಗೆ ಜರುಗುವುದರಿಂದ 6 ಗಂಟೆಯೊಳಗೆ ಸಮಿತಿ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕು” ಎಂದು ತಾಲೂಕು ದಂಡಾಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ; ಮಹಿಷ ದಸರಾಗೆ ಸಮ್ಮತಿ

ಗ್ರಾಮೀಣ ಭಾಗದ ಪ್ರತಿಭೆಗಳನ್ನು ಬಳಸಿಕೊಂಡು ವೇದಿಕೆಯಲ್ಲಿ ಕಂಸಾಳೆ, ಡೊಳ್ಳು ಕುಣಿತ, ಗಾಯನ ಸೇರಿದಂತೆ ಇತರ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ತಾಲೂಕು ದಂಡಾಧಿಕಾರಿ ಟಿ ರಮೇಶ್ ಬಾಬು, ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಪುರಸಭೆ ಮುಖ್ಯ ಅಧಿಕಾರಿ ವಸಂತ್ ಕುಮಾರಿ, ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ, ಪುರಸಭೆ ಮಾಜಿ ಅಧ್ಯಕ್ಷರುಗಳಾದ ಪಿ ಗಿರೀಶ್ ಮತ್ತು ಮಲ್ಲೇಶ್, ಪುರಸಭೆ ಸದಸ್ಯ ಕುಮಾರ್ ಪಟ್ಟಬಿ, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಸಂಘ ಸಂಸ್ಥೆಯ ಅಧ್ಯಕ್ಷರುಗಳು ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X