ಚಾಮರಾಜನಗರ | ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶ ಕಲ್ಪಿಸಿ: ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ

Date:

Advertisements

ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ವಿಶೇಷ ಚೇತನರ ಹಕ್ಕುಗಳ ಅಧಿನಿಯಮದ
ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ ನೀಡಿದರು.

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ವಿಶೇಷಚೇತನರ ಹಕ್ಕುಗಳ ಅಧಿನಿಯಮದ ಅನುಷ್ಠಾನ ಮತ್ತು ವಿಶೇಷಚೇತನರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

“ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ಇಲ್ಲದೆ ವಿಕಲಚೇತನರಿಗೆ ಶೇ.20ರಿಂದ ಶೇ.25ರಷ್ಟು ನೇರವಾಗಿ ಪ್ರವೇಶ ನೀಡಲು ಅವಕಾಶವಿದ್ದು, ವಿಶೇಷಚೇತನರಿಗೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸಬೇಕಿದೆ. ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸದೆ ವಿಶೇಷಚೇತನರಿಗೆ ಶೇ.20 ರಿಂದ 25ರಷ್ಟು ನೇರವಾಗಿ ಸೀಟುಗಳನ್ನು ನೀಡಬೇಕು. ಇದರಿಂದ ವಿಶೇಷಚೇತನರಿಗೆ ಅನುಕೂಲವಾಗಲಿದೆ. ಈ ಮೂಲಕ ವ್ಯಾಸಂಗಕ್ಕೆ ಉತ್ತೇಜನ ನೀಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕು” ಎಂದು ತಿಳಿಸಿದರು.

Advertisements

“ಶಾಲೆಗಳಲ್ಲಿ ಅಂಧ ಮಕ್ಕಳಿಗೆ ಬ್ರೈಲ್ ಇನ್ನಿತರ ಅನುಕೂಲವಾಗುವ ವ್ಯವಸ್ಥೆಗಳನ್ನು ಜಾರಿಗೆ ತರಬೇಕು. ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರನ್ನು ಅಂಧ ವಿದ್ಯಾರ್ಥಿಗಳ ಬೋಧನೆಗೆ ನಿಯೋಜಿಸಬೇಕು. ಅಂಧ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿಯೇ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಶಿಕ್ಷಣದ ನೈಜ ಉದ್ದೆಶ ಈಡೇರಿದಂತಾಗುವುದಿಲ್ಲ. ಕಷ್ಟಕರ ಜೀವನ ನಡೆಸುವ ವಿಶೇಷಚೇತನರ ಕೆಲಸಗಳನ್ನು ಸಕಾಲಕ್ಕೆ ಮಾಡಿಕೊಡಬೇಕು. ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಿದರೆ ಅನುಕೂಲವಾಗಲಿದೆ. ಬೇರೆ ಜಿಲ್ಲೆಗಳಿಗೆ ಚಾಮರಾಜನಗರ ಮಾದರಿಯಾಗಬೇಕು. ವಿಶೇಷಚೇತನರಿಗೆ ಮೀಸಲಾಗಿರುವ ಅನುದಾನ ಹೆಚ್ಚಿನ ಪ್ರಮಾಣದಲ್ಲಿ ವಿನಿಯೋಗವಾಗಬೇಕು” ಎಂದು ಹೇಳಿದರು.

“ಕಟ್ಟಡ ನಿರ್ಮಿಸುವಾಗ ಇಲಾಖೆಗಳು ವಿಕಲಚೇತನ ಸ್ನೇಹಿ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ರ್ಯಾಂಪ್ ಸೇರಿದಂತೆ ವಿಶೇಷಚೇತನರು ಪ್ರವೇಶಿಸಲು ಅನುವು ಮಾಡಿಕೊಡುವ ಇನ್ನಿತರ ಆಧುನಿಕ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕೆಎಸ್‍ಆರ್‌ಟಿಸಿ ಸೇವೆಗಳಲ್ಲಿ ವಿಶೇಷಚೇತನರಿಗೆ ನೆರವಾಗುವ ಸೌಲಭ್ಯಗಳು ಇರಬೇಕು” ಎಂದು ಆಯುಕ್ತ ದಾಸ್ ಸೂರ್ಯವಂಶಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, “ಅಂಧ ಮಕ್ಕಳ ಶಿಕ್ಷಣಕ್ಕಾಗಿಯೇ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಮೂರು ತಿಂಗಳ ತರಬೇತಿ ಶಿಬಿರಗಳನ್ನು ಏರ್ಪಾಡು ಮಾಡಲಾಗುವುದು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಈ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿ ಶಿಕ್ಷಣದ ಸುಧಾರಣೆಗೆ ಆದ್ಯ ಗಮನ ಹರಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ ವಿರುದ್ಧ ಎದ್ದು ನಿಲ್ಲಬೇಕಿದೆ: ಈಶ್ವರಾನಂದ ಶ್ರೀ ಕರೆ

“ಆರೋಗ್ಯ ಇಲಾಖೆಯಿಂದ ವಿಶೇಷಚೇತನರಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ವೇಳೆ ಅಂಗವಿಕಲತೆ ಹೋಗಲಾಡಿಸುವಲ್ಲಿ ಆರೋಗ್ಯ ಇಲಾಖೆಯ ಪಾತ್ರ ತುಂಬಾ ಮಹತ್ವದ್ದಾಗಿದೆ. ತಪಾಸಣೆ ಆರಂಭದಲ್ಲಿಯೇ ಅನಾರೋಗ್ಯದ ತೊಂದರೆಗಳನ್ನು ಪತ್ತೆಹಚ್ಚಿ ಸರಿಯಾದ ಸಮಯಕ್ಕೆ ಔಷದೋಪಚಾರ ಚಿಕಿತ್ಸೆ ನೀಡುವುದು ಮುಖ್ಯವಾಗುತ್ತದೆ. ವಿಶೇಷಚೇತನರ ಆರೋಗ್ಯದ ಬಗ್ಗೆ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪಕಾರ್ಯದರ್ಶಿ ಪಿ ಲಕ್ಷ್ಮಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X