ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

Date:

Advertisements

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿಯಿಂದಾಗಿ ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿಯೂ ಆಗಿದೆ.

ಚಾಮರಾಜನಗರ, ಗುಂಡ್ಲುಪೇಟೆ ತಾಲೂಕುಗಳಿಗೆ ಹೋಲಿಸಿದರೆ ಹನೂರು ತಾಲೂಕಿನಲ್ಲಿ ಚೆನ್ನಾಗಿ ಮಳೆಯಾಗಿದೆ. ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಬಿದ್ದರೆ, ಗುಂಡ್ಲುಪೇಟೆಯ ಅರಣ್ಯದ ಅಂಚುಗಳಲ್ಲಿ ತುಂತುರು ಮಳೆಯಾಗಿದೆ.

ಮಳೆಯಾಗಿದ್ದರಿಂದ ಬಿಸಿಲಿನಿಂದ ತತ್ತರಿಸಿದ್ದ ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇರುವುದಾಗಿ ಹವಾಮಾನ ಇಲಾಖೆ ಹೇಳಿದೆ.

Advertisements

ಹನೂರು ತಾಲೂಕಿನ ಕೌದಳ್ಳಿ, ನಾಗಣ್ಣನಗರ, ಜಿ ಆರ್ ನಗರ, ಕಾಮಗೆರೆ, ಮಂಗಲ, ಕಣ್ಣೂರು ಸೇರಿದಂತೆ ಹಲವೆಡೆ ಗುರುವಾರ ಮಧ್ಯಾಹ್ನ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಬರದ ಛಾಯೆಯಿಂದ ಬಾಡಿ ಬಸವಳಿದಿದ್ದ ಇಳೆಗೆ ಮಳೆ ತಂಪೆರೆದಿದೆ.

ಬೆಳಿಗ್ಗೆಯಿಂದ ಮಳೆ ಬರುವ ಕುರುಹುಗಳು ಇರಲಿಲ್ಲ. ಮಧ್ಯಾಹ್ನ ಮೋಡ ಕಪ್ಪಿಟ್ಟು, ಗಾಳಿ, ಗುಡುಗಿನ ಸಹಿತ ಮಳೆಯಾಗಿದೆ.

ಟೊಮೆಟೊ ಬೆಳೆ ಹಾನಿ

ಮಳೆಗೆ ತಾಲೂಕಿನ ನಾಗಣ್ಣ ನಗರ, ಅಜ್ಜೀಪುರ ಸಮೀಪದ ಜಿ ಆರ್‌ ನಗರದಲ್ಲಿ ಬಾಳೆ ಮತ್ತು ಟೊಮೆಟೊ ಬೆಲೆ ನೆಲಕ್ಕಚಿವೆ. ನಾಗಣ್ಣ ನಗರದ ರೈತ ಮುರುಗೇಶ್ ಅವರ 800 ಬಾಳೆ ಮರಗಳ ಪೈಕಿ 650 ಮರಗಳು ಮುರಿದು ಬಿದ್ದಿವೆ. ಅಜ್ಜೀಪುರ ಸಮೀಪದ ಜಿ ಆರ್ ನಗರದ ರೈತ ಶ್ರೀರಂಗ ಅವರಿಗೆ ಸೇರಿದ ಟೊಮೊಟೊ ಬೆಳೆ ಉದುರಿವೆ.

‘ಬಿರು ಬೇಸಿಗೆಯ ನಡುವೆ ಸಾಲ ಮಾಡಿ ಬೆಳೆಯಲಾಗಿದ್ದ ಬಾಳೆ ಬೆಳೆ ಕಟಾವು ಹಂತಕ್ಕೆ ತಲುಪಿತ್ತು. ಇಂತಹ ಸಂದರ್ಭದಲ್ಲಿ ಬೆಳೆ ಮಳೆಗೆ ಸಿಲುಕಿರುವುದರಿಂದ  ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಜಿಲ್ಲಾಡಳಿತ ಪರಿಶೀಲನೆ ನಡೆಸಿ ಪರಿಹಾರ ನೀಡಬೇಕು’ ಎಂದು ರೈತರು ಒತ್ತಾಯಿಸಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಆಲೂರು, ಕೆಂಪನಪುರ, ಗೂಳಿಪುರ, ಕನ್ನೇಗಾಲ, ಮಂಗಲ ಗ್ರಾಮಗಳಲ್ಲೂ ಗಾಳಿ ಸಹಿತ ಮಳೆಯಾಗಿದೆ.

ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಕೆಂಪನಪುರ ಸೇರಿದಂತೆ ಹಲವು ಊರುಗಳಲ್ಲಿ ಗಾಳಿಯ ಆರ್ಭಟಕ್ಕೆ ಸಿಲುಕಿ ಬಾಳೆ ತೋಟಗಳು ನೆಲಕ್ಕುರುಳಿವೆ. ಕೆಂಪನಪುರ ಗ್ರಾಮದ ಕೆ ಎಂ ಗುರುಸಿದ್ದಪ್ಪ ಸುಶೀಲಮ್ಮ ಹಾಗೂ ಸಿದ್ದಲಿಂಗಸ್ವಾಮಿ ಎಂಬುವವರಿಗೆ ಸೇರಿದ ತಲಾ ಎರಡು ಎಕರೆ ಬಾಳೆ ಫಸಲು ನಾಶವಾಗಿರುವುದಾಗಿ ವರದಿಯಾಗಿದೆ.

“ಕಟಾವು ಹಂತಕ್ಕೆ ಬಂದಿರುವ ಬಾಳೆ ತೋಟ ಗಾಳಿ ಮಳೆಗೆ ನೆಲ ಕಚ್ಚಿರುವುದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲು ಮುಂದಾಗಬೇಕು” ಎಂದು ಕೆಂಪನಪುರ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲು ಹಾಗೂ ಕಾಡಂಚಿನ ಗ್ರಾಮಗಳಲ್ಲಿ ನಾಲ್ಕೈದು ನಿಮಿಷಗಳ ಕಾಲ ತುಂತುರು ಮಳೆಯಾಗಿದೆ. ಬಂಡೀಪುರ, ಮೇಲುಕಾಮನಹಳ್ಳಿ, ಹಂಗಳ, ದೇವರಹಳ್ಳಿ, ಗೋಪಾಲಪುರ ಭಾಗದಲ್ಲೂ ತುಂತುರು ಹನಿ ಬಿದ್ದಿದೆ.

ಸಂಜೆ ಐದರ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಬಳಿಕ ಜೋರು ಹನಿ ಬಿದ್ದು ನಿಂತಿತು. ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X