ಚಾಮರಾಜನಗರ | ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ: ಜ್ಞಾನಪ್ರಕಾಶ ಸ್ವಾಮೀಜಿ

Date:

ಕಾಯಕ ಶರಣರ ವಚನಗಳೇ ಇಂದಿನ ಸಂವಿಧಾನವಾಗಿದೆ. ಐವರೂ ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಅವರ ವಚನಗಳು ಇಂದಿಗೂ ಪ್ರಸ್ತುತ’ ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು.

ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼಕಾಯಕ ಶರಣರ ಜಯಂತಿʼ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬಸವಣ್ಣನವರ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿದ್ದರು. ಅವರಲ್ಲಿ ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಉರಿಲಿಂಗಿಪೆದ್ದಿ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ ಎಂಬ ಐವರು ಕಾಯಕ ಶರಣರು ಪ್ರಮುಖರಾಗಿದ್ದರು. ಅವರ ಜೀವನ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ನಿಟ್ಟಿನಲ್ಲಿ ಸರ್ಕಾರ ಶರಣರ ಜಯಂತಿ ಆಚರಣೆ ಮಾಡುತ್ತಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈಗ ಜನರ ನಡೆ ಒಂದು ಕಡೆ, ನುಡಿ ಒಂದು ಕಡೆ ಇದೆ. ಬೇಡುವವರ ಸಂಖ್ಯೆ ಜಾಸ್ತಿಯಾಗಿದೆ. ನಡೆ, ನುಡಿ ಒಂದಾಗದ ಕಾರಣ ಆಸ್ಪತ್ರೆಗಳು, ಕಾಯಿಲೆಗಳು ಹೆಚ್ಚಾಗುತ್ತಿವೆ. ಗೂಗಲ್‌ನಿಂದಾಗಿ ಪುಸ್ತಕ ಸಂಸ್ಕೃತಿ ನಾಶವಾಗುತ್ತಿದೆ. ಮಾದಾರ ಚನ್ನಯ್ಯ ಅವರು ಕಾಯಕಕ್ಕೆ ಹೆಚ್ಚು ಗೌರವ ತಂದು ಕೊಟ್ಟರು. ಉರಿಲಿಂಗಿಪೆದ್ದಿ ಅವರ 366, ಮಾದಾರ ಚನ್ನಯ್ಯ 12, ಡೋಹಾರ ಕಕ್ಕಯ್ಯ 13, ಮಾದಾರ ದೂಳಯ್ಯ ಅವರ 33 ವಚನಗಳು ಲಭ್ಯವಿದ್ದು, ಇವುಗಳು ಮಾನವೀಯ ಮೌಲ್ಯಗಳನ್ನು ಹೊಂದಿವೆ” ಎಂದರು.

“ಪ್ರಸ್ತುತದಲ್ಲಿ ನಾವು ಮನುಷ್ಯರ ಭಾರತ ಕಟ್ಟಬೇಕಿದೆ. ಭಾರತದ ಸಂವಿಧಾನ ಮಹತ್ತರವಾದದ್ದು. 12ನೇ ಶತಮಾನದಲ್ಲಿ ವಚನಗಳು ಹಾಗೂ ಬುದ್ದನ ಕಾಲದಲ್ಲಿ ತ್ರಿಪಿಟಕಗಳೇ ಸಂವಿಧಾನವಾಗಿದ್ದವು. ಸಮಸಮಾಜ ನಿರ್ಮಾಣಕ್ಕಾಗಿ ಶರಣರ ವಚನಗಳನ್ನು ಅಧ್ಯಯನ ಮಾಡಬೇಕು” ಎಂದು ಸ್ವಾಮೀಜಿ ಸಲಹೆ ನೀಡಿದರು.

ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ, “ಪ್ರಸ್ತುತ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸಿ ಸಮಾಜದ ಶಾಂತಿ ಕದಡುತ್ತಿರುವುದು ವಿಪರ್ಯಾಸ. ಅಸ್ಪೃಶ್ಯತೆ ಹೋಗಲಾಡಿಸಲು ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಕಾಯಕ ಶರಣರ ವಚನಗಳ ಅಧ್ಯಯನದ ಮೂಲಕ ಸಮಾಜದಲ್ಲಿರುವ ಕಂದಾಚಾರ, ಜಾತಿ ಪದ್ಧತಿಗಳನ್ನು ಹೋಗಲಾಡಿಸಬೇಕು” ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, “12ನೇ ಶತಮಾನದಲ್ಲಿದ್ದ ಶರಣರು ಸಮಾಜದಲ್ಲಿದ್ದ ಅಂಕುಡೊಂಕುಗಳ ಕುರಿತು ಸರಳ ಭಾಷೆಯ ಮೂಲಕ ಸಾಮಾನ್ಯ ಜನರಿಗೆ ತಿಳಿಸುವ ಕಾರ್ಯ ಮಾಡಿದರು. ವಿದ್ಯಾರ್ಥಿಗಳು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಕಡಿಮೆ ಮಾಡಿ ಓದಿನ ಕಡೆ ಗಮನ ಕೊಡಬೇಕು. ಹೆಚ್ಚೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದ್ದಾರೆ: ಪಾರಸಮಲ್ ಸುಖಾಣ

ಪ್ರಗತಿಪರ ಹೋರಾಟಗಾರ ಸಿ ಎಂ ಕೃಷ್ಣಮೂರ್ತಿ, ಕನ್ನಡಪರ ಹೋರಾಟಗಾರರು ನಾಗರಾಜು, ರವಿಕುಮಾರ್, ಕಲಾವಿದರುಗಳಾದ ದೊಡ್ಡಗವಿ ಬಸಪ್ಪ, ನಿಂಗಶೆಟ್ಟಿ, ಗಾಯಕ ಸಿ ಎಂ ನರಸಿಂಹಮೂರ್ತಿ ಸೇರಿದಂತೆ ಇತರರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...