ಚಾಮರಾಜನಗರ | ವಿಜಯೇಂದ್ರ ಆಯ್ಕೆ ರಾಜ್ಯ ಬಿಜೆಪಿಗೆ ಶಕ್ತಿ: ಮಾಜಿ ಶಾಸಕ ನಿರಂಜನಕುಮಾರ್

Date:

ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಬಿಜೆಪಿಗೆ ಶಕ್ತಿ ಬಂದಂತಾಗಿದೆ ಎಂದು ಗುಂಡ್ಲುಪೇಟೆ ಮಾಜಿ ಶಾಸಕ ಸಿ.ಎಸ್ ನಿರಂಜನಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

- Advertisement -

“ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಬಿಜೆಪಿ ನಾಯಕರು ಸೂಕ್ತ ತೀರ್ಮಾನ ಮಾಡಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಸಹಕಾರಿಯಾಗಿದೆ. ಈಗಾಗಲೇ ಹಲವು ಉಪ ಚುನಾವಣೆಯಲ್ಲಿ ವಿಜಯೇಂದ್ರ ಸಾಮರ್ಥ್ಯ ತೋರಿಸಿದ್ದಾರೆ. ಅಂತೆಯೇ ಮುಂದಿನ ದಿನಗಳಲ್ಲಿಯೂ ಕೂಡ ಎಲ್ಲ ಜಾತಿ, ಜನಾಂಗದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧಿಕಾರ ಇಲ್ಲದ ಸಂದರ್ಭದಲ್ಲಿ ರಾಜ್ಯದ ಪ್ರತಿ ಹಳ್ಳಿಗೂ ತಿರುಗಾಡಿ ಪಕ್ಷವನ್ನು ಬಲಗೊಳಿಸಿ ಅಧಿಕಾರಕ್ಕೆ ತಂದಿದ್ದಾರೆ. ಅವರ ಮಾದರಿಯಲ್ಲಿ ವಿಜಯೇಂದ್ರ ಕೂಡ ಕೆಲಸ ನಿರ್ವಹಿಸಲಿದ್ದಾರೆ. ರಾಜ್ಯದ ಹಿರಿಯ ನಾಯಕರ ಮುನಿಸನ್ನೂ ಕೂಡ ಶಮನ ಮಾಡಿ ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಲು ಅಗತ್ಯವಿರುವ ಎಲ್ಲ ರೀತಿಯ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ” ಎಂದರು.

“ಬಿ ವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದು ರಾಜ್ಯದ ಯುವ ಸಮೂಹದಲ್ಲಿ ಹೆಚ್ಚಿನ ಹುರುಪಿಗೆ ಕಾರಣವಾಗಿದ್ದು, ಯುವಕರಿಗೆ ಪಕ್ಷ ಹೆಚ್ಚಿನ ಮನ್ನಣೆ ಕೊಡಲಿದೆ ಎಂದು ನಿರೂಪಿಸಿದೆ. ಈ ಮೂಲಕ ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೂ ಇದು ಪೂರಕವಾಗಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ವಿರೋಧ ಪಕ್ಷದ ನಾಯಕ ಅಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ಡಾ ಅಶ್ವತ್ಥನಾರಾಯಣ

“ಕೇಂದ್ರ ನಾಯಕರು ನವೆಂಬರ್ ಅಂತ್ಯದೊಳಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಸೂಚನೆಯಂತೆ ರಾಜ್ಯದಲ್ಲಿ ಸಂದರ್ಭಕ್ಕೆ ತಕ್ಕಂತೆ ಬದಲಾವಣೆ ಆಗಲಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...