ಚಾಮರಾಜನಗರ | ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಿ, ಗ್ರಾಹಕರ ವಿಶ್ವಾಸಗಳಿಸಿ: ಶಿಲ್ಪಾ ನಾಗ್

Date:

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆಯ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಲೀಡ್ ಬ್ಯಾಂಕ್ ಸಹಯೋಗದೊಂದಿಗೆ ಬ್ಯಾಂಕ್ ಅಧಿಕಾರಿ ಸಿಬ್ಬಂದಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕನ್ನಡ ಕಲಿಕೆ ತರಬೇತಿ ಶಿಬಿರವನ್ನು ‘ಕನ್ನಡ ಕಲಿಯಿರಿ’ ಎಂದು ಬರೆಯುವ ಮೂಲಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಿ, ಗ್ರಾಹಕರ ವಿಶ್ವಾಸಗಳಿಸಿ ಎಂದರು.

- Advertisement -

ಬ್ಯಾಂಕುಗಳಲ್ಲಿ ಸ್ಥಳೀಯ ಕನ್ನಡ ಭಾಷೆಯಲ್ಲಿ ವ್ಯವಹರಿಸಿದಾಗ ಗ್ರಾಹಕರು ಹಾಗೂ ಅಧಿಕಾರಿ ಸಿಬ್ಬಂದಿ ನಡುವಿನ ವಿಶ್ವಾಸಾರ್ಹತೆ ಹೆಚ್ಚಲಿದೆ. ಹೀಗಾಗಿ, ಕನ್ನಡ ಬಾರದ ಅಧಿಕಾರಿ ಸಿಬ್ಬಂದಿ ಕನ್ನಡ ಭಾಷೆ ಕಲಿಯುವ ಅಗತ್ಯವಿದೆ. ಯಾವುದೇ ಸಂಸ್ಥೆ, ಕಚೇರಿಗಳಲ್ಲಿ ಸಾರ್ವಜನಿಕರೊಂದಿಗೆ ಸಂವಹನ ನಡೆಸಲು ಭಾಷೆ ಪರಿಣಾಮಕಾರಿ ಪಾತ್ರ ವಹಿಸಲಿದೆ. ಸ್ಥಳೀಯ ಭಾಷೆಗಳಲ್ಲಿ ವ್ಯವಹರಿಸಿದಾಗ ಅಧಿಕಾರಿ ಸಿಬ್ಬಂದಿ ಸಾರ್ವಜನಿಕರು ಗ್ರಾಹಕರ ನಡುವೆ ವಿಶ್ವಾಸ, ನಂಬಿಕೆ ವೃದ್ದಿಯಾಗಲಿದೆ. ಹೀಗಾಗಿ, ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡ ಭಾಷೆಗೆ ಪ್ರಾಧನ್ಯತೆ ನೀಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬ್ಯಾಂಕುಗಳಲ್ಲಿ ಕನ್ನಡ ಬಾರದ ಅಧಿಕಾರಿಗಳು ಸಿಬ್ಬಂದಿಯಿಂದ ವ್ಯವಹರಿಸಲು ತೊಡಕಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿತ್ತು. ಅನೇಕ ಸಾರ್ವಜನಿಕ, ರೈತ ಮುಖಂಡರ ಸಭೆಗಳಲ್ಲಿಯೂ ಬ್ಯಾಂಕ್ ಗಳಲ್ಲಿ ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಹೀಗಾಗಿ, ಕನ್ನಡ ಭಾಷೆ ತಿಳಿಯದ ಅಧಿಕಾರಿಗಳಿಗೆ ಜಿಲ್ಲಾಡಳಿತವು ಶಿಕ್ಷಣ ಇಲಾಖೆ ಹಾಗೂ ಲೀಡ್ ಬ್ಯಾಂಕ್ ಸಹಕಾರದೊಂದಿಗೆ ಕನ್ನಡ ಕಲಿಸುವ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದೆ ಎಂದರು.

ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಿದಾಗ ಗ್ರಾಹಕರು ಹಾಗೂ ಅಧಿಕಾರಿ ಸಿಬ್ಬಂದಿ ಮಧ್ಯೆ ಗೊಂದಲಗಳು ಏರ್ಪಡುವುದು ತಪ್ಪಲಿದೆ. ಕನ್ನಡ ಭಾಷೆಯನ್ನೇ ಬಳಸಿದಾಗ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ. ಸ್ಥಳೀಯ ಗ್ರಾಹಕರು ಪೂರ್ಣಪ್ರಮಾಣದಲ್ಲಿ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.

ಕನ್ನಡ ಬಾರದಿರುವವರಿಗೆ ಕನ್ನಡ ಕಲಿಸುವ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುವುದು. ಸರಳವಾಗಿ ಸಂಭಾಷಿಸಲು ಸೂಕ್ತ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಗಳು ನೀಡಲಿದ್ದಾರೆ. ಕಾರ್ಯನಿರ್ವಹಣೆಯಲ್ಲಿ ಸುಗಮ ಹಾಗೂ ದಕ್ಷತೆಗೆ ಪೂರಕವಾಗಿರುವ ಎಲ್ಲ ನೆರವು ಸಹಕಾರವನ್ನು ಜಿಲ್ಲಾಡಳಿತ ಒದಗಿಸಲು ಸಿದ್ದವಿದೆ. ಕಲಿಕಾ ತರಬೇತಿ ಶಿಬಿರದ ಪ್ರಯೋಜನವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಸಲಹೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹುಣಸೂರು | ತಂಬಾಕು ಬೆಳೆಗಾರರ ಸಭೆ; ಉತ್ತಮ ಬೆಲೆಗೆ ಆಗ್ರಹ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುರೇಖಾ, ಶಾಲಾ ಶಿಕ್ಷಣ ಇಲಾಖೆ ಉನಿರ್ದೇಶಕ ಚಂದ್ರಕಾಂತ್ ಪಾಟೀಲ್, ಜಿಲ್ಲಾ ಸಮಾಲೋಚಕ ಮಧುಕೇಶ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...