ಕಲಬುರಗಿ | ಚಂದ್ರಶೇಖರ ಆಜಾದ್ ಮೇಲೆ ಗುಂಡಿನ ದಾಳಿ: ‌ಭೀಮ್ ಆರ್ಮಿ ಖಂಡನೆ

Date:

ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ನಡೆದ ಕೊಲೆ ಯತ್ನದ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿ ಭೀಮ್ ಆರ್ಮಿ ಕಲಬುರಗಿ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಭೀಮ್ ಆರ್ಮಿ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟಿಸಿದರು. ಸಹರಾನ್‌ಪುರದ ದೇವಬಂದ್‌ನಲ್ಲಿ ಮನುವಾದಿ ಚಿಂತನೆಯ ಕೆಲವು ಅಪರಿಚಿತ ದಾಳಿಕೋರರು ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅವರ ಮೇಲೆ ಯೋಜಿತ ಹತ್ಯೆಯ ದಾಳಿ ನಡೆಸಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ. ಕೊಲೆಯತ್ನ ನಡೆಸಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುಬೇಕು” ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ ಒತ್ತಾಯಿಸಿದರು.

“ಈ ಹಿಂದೆ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅವರು ತಮ್ಮ ಸುರಕ್ಷತೆ ಮತ್ತು ಜೀವಕ್ಕೆ ಬೆದರಿಕೆಯ ಬಗ್ಗೆ ನೋಂದಾಯಿತ ಪೋಸ್ಟ್ ಮೂಲಕ ಸಹರಾನ್‌ಪುರ ಎನ್‌ಎಸ್‌ಪಿ ಮತ್ತು ಡಿಜಿಪಿ ಪೊಲೀಸ್ ಮತ್ತು ಮುಖ್ಯಮಂತ್ರಿಗೆ ತಿಳಿಸಿದ್ದರು. ಆದರೆ ಸರ್ಕಾರದ ಆಡಳಿತ ಉದ್ದೇಶಪೂರ್ವಕವಾಗಿ ಅವರ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನಿರಾಶಾದಾಯಕವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸರ್ಕಾರದ ಆಡಳಿತದ ಸಂಪೂರ್ಣ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಆಡಳಿತದ ಎಡಬಿಡಂಗಿ ಧೋರಣೆಯಿಂದಾಗಿ ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಿದ್ದು, ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ ಆಜಾದ್ ಅವರು ಬಹುಜನ ಸಮಾಜದ ಜನಪ್ರಿಯ ನಾಯಕರಾಗಿದ್ದು, ಲಕ್ಷಾಂತರ ಬಹುಜನ ಸಮಾಜದ ಜನರು ನಂಬಿಕೆ ಮತ್ತು ವಿಶ್ವಾಸ ಹೊಂದಿದ್ದಾರೆ. ಈ ಘಟನೆಯಿಂದಾಗಿ ಸಮಾಜದ ಲಕ್ಷಾಂತರ ಜನರ ಭಾವನೆಗಳಿಗೆ ತೀವ್ರ ನೋವಾಗಿದೆ” ಎಂದರು.

ಈಈ ಸುದ್ದಿ ಓದಿದ್ದೀರಾ? ಸಾಮಾಜಿಕ ಹೋರಾಟಗಾರ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

“ತಪ್ಪಿತಸ್ಥ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧವೂ ರಾಸುಕಾ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಗೌರವಾನ್ವಿತ ಚಂದ್ರಶೇಖರ ಆಜಾದ್ ಅವರ ಭದ್ರತೆಯನ್ನು ಬಲಪಡಿಸುವ ಮೂಲಕ ಅವರಿಗೆ ತಡಮಾಡದೆ ವಿಶೇಷ ನ್ಯಾಯಧೀಶರ ಭದ್ರತೆ ಒದಗಿಸಬೇಕು. ಆದುದರಿಂದ ಸಮಸ್ತ ಬಹುಜನ ಸಮಾಜ ಹಾಗೂ ಲಕ್ಷಾಂತರ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗುಂಡಪ್ಪ ಮಾಳಗೆ, ಸುಭಾಷ್ ಆಲೂರ್, ಸುಧೀರ, ಬಸವರಾಜ ಹೆಡೆ, ಶಿವಶರಣ ಕಲ್ಲೂರು, ಹುಸನಪ್ಪಾ ರದ್ದೆವಾಡಗಿ, ಅಬ್ದುಲ್ ಘನಿ ರಾವಣ, ಸಂದೀಪ ದೊಡ್ಡಮನಿ, ವಿಶ್ವರಾಧ್ಯ ಗೋಪಾಲಕರ್, ಬಸವರಾಜ ಇಂಗಳಗಿ ಇದ್ದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...