ಚನ್ನಪಟ್ಟಣ ಉಪಚುನಾವಣೆ; ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

Date:

Advertisements

ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ನ.11ರ ಸಂಜೆ 5.30 ರಿಂದ ನ.20ರ ಸಂಜೆ 6.30ರವರೆಗೆ ಬಹಿರಂಗ ಪ್ರಚಾರ, ಚರ್ಚೆ, ಸಂವಾದ, ಸಮೀಕ್ಷೆ ಮತ್ತು ಚುನಾವಣೆ ಸಂಬಂಧಿತ ಇತರ ಕಾರ್ಯಕ್ರಮಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ರಾಮನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ನೀಡಿದ ಮಾಹಿತಿಯ ಪ್ರಕಾರ, “ಚುನಾವಣೆಯ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಮಾಧ್ಯಮ, ಟಿವಿ, ಕೇಬಲ್, ರೇಡಿಯೋ, ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಚುನಾವಣೆ ಸಂಬಂಧಿತ ಚರ್ಚೆ, ವಿಶ್ಲೇಷಣೆ, ಮತ್ತು ಚುನಾವಣೋತ್ತರ ಸಮೀಕ್ಷೆ ಪ್ರಸಾರ ಮತ್ತು ಬಿತ್ತರವನ್ನೂ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸುವವರು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಇಲ್ಲವೇ ದಂಡ, ಇಲ್ಲವೇ ಎರಡನ್ನೂ ಎದುರಿಸಬೇಕಾಗುತ್ತದೆ.

ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಮತ್ತು ಮತದಾನದ ದಿನದಂದು, ಯಾವುದೇ ಮಾಧ್ಯಮಗಳು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವಂತಹ, ಮತದಾರರ ಮೇಲೆ ಪ್ರಭಾವ ಬೀರುವ ಮಾತುಗಳನ್ನು ಪ್ರಸಾರ ಮಾಡಬಾರದು. ಯಾವುದೇ ಪಕ್ಷದ ಪರವಾಗಿ ಇಲ್ಲವೇ ವಿರೋಧವಾಗಿ ನೀಡುವ ಅಭಿಪ್ರಾಯ ಸಂಗ್ರಹಗಳ ಫಲಿತಾಂಶವನ್ನು ಪ್ರಕಟಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಣ ಹಂಚುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ

ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಅಂದರೆ ನ.20ರ ಸಂಜೆ 6.30 ಗಂಟೆಯವರೆಗೆ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿವಿ ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X