ಚನ್ನಪಟ್ಟಣ | ಕೆಪಿಎಸ್‌ ‘ಮ್ಯಾಗ್ನೆಟ್’ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ

Date:

ಎಸ್‌ಐಓ(ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ) ಕರ್ನಾಟಕದ ಪ್ರತಿನಿಧಿಗಳ ತಂಡವು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆಪಿಎಸ್ ಶಾಲೆ ಹಾಗೂ ಇತರೆ ಹಲವು ಶಾಲೆಗಳಿಗೆ ಭೇಟಿ ನೀಡಿ, ಕೆಪಿಎಸ್ “ಮ್ಯಾಗ್ನೆಟ್” ಶಾಲಾ ವಿಲೀನ ನೀತಿಯ ಸ್ಥಳೀಯ ಸತ್ಯಾಂಶಗಳನ್ನು ಅಧ್ಯಯನ ಮಾಡಿದ್ದು, ಅಲ್ಲಿನ ಪರಿಸ್ಥಿತಿಗಳನ್ನು ಗಮನಿಸಿದ ಬಳಿಕ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ ವ್ಯಕ್ತಪಡಿಸಿದೆ.

- Advertisement -

ಸ್ಥಳೀಯ ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ನಂತರ, ಸಮೀಪದ ನೆರೆಹೊರೆಯ ಶಾಲೆಗಳನ್ನು ಮುಚ್ಚಿ ಕೆಪಿಎಸ್ ಸಂಸ್ಥೆಗಳೊಂದಿಗೆ ವಿಲೀನಗೊಳಿಸುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ ಎಂದು ಎಸ್‌ಐಓ ತಂಡ ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಎಸ್‌ಐಓ ಪ್ರತಿನಿಧಿಗಳ ತಂಡವು, ಮಕ್ಕಳ ಹಕ್ಕುಗಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ (RTE Act, 2009)ಯಡಿಯಲ್ಲಿ “ನೆರೆಹೊರೆಯ ಶಾಲೆ” ನಿಯಮ (ಕಲಂ 6) ಪ್ರಕಾರ, ಪ್ರತಿ ಮಗುವಿನ ನಿವಾಸದಿಂದ ನಡೆದು ಹೋಗಬಹುದಾದ ದೂರದಲ್ಲಿ ಸರ್ಕಾರವು ಶಾಲೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.

ಇದನ್ನು ಓದಿದ್ದೀರಾ? ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

ಸಮೀಪದ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸುವ ಆದೇಶವು ಈ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಭೇಟಿಯ ಸಂದರ್ಭದಲ್ಲಿ, ತಂಡವು ಶಾಲಾ ಆಡಳಿತ ಮಂಡಳಿಗೆ ಎಸ್‌ಐಓ ನಡೆಸಿದ ಇತ್ತೀಚಿನ ಸಮೀಕ್ಷೆಯ ವಿವರಗಳನ್ನು ನೀಡಿತು.

WhatsApp Image 2025 12 16 at 11.31.30 AM

ಈ ಸಮೀಕ್ಷೆಯು ಸರ್ಕಾರಿ ಶಾಲೆಗಳ ಸುತ್ತಲಿನ ವಿವಿಧ ಕಳವಳಕಾರಿ ಸಮಸ್ಯೆಗಳನ್ನು ಎತ್ತಿ ತೋರಿಸಿದೆ ಎಸ್‌ಐಓ ಇದಕ್ಕೂ ಮೊದಲು ನೆರೆಹೊರೆಯ ಶಾಲೆಗಳ ಮುಚ್ಚುವಿಕೆಯನ್ನು ಖಂಡಿಸಿತ್ತಲ್ಲದೇ, ಸರ್ಕಾರವು ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಎಸ್‌ಐಓ ನಿಯೋಗದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (SIO) ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯಾನ್, ರಾಜ್ಯ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್, ರಾಜ್ಯ ಸಲಹಾ ಸಮಿತಿಯ ಸದಸ್ಯ ಮೊಹಮ್ಮದ್ ಪೀರ್ ಲಟಗೇರಿ ಉಪಸ್ಥಿತರಿದ್ದರು.

WhatsApp Image 2025 12 16 at 11.31.29 AM 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...