ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌: ವ್ಯಾಪಕ ಆಕ್ರೋಶ

Date:

Advertisements

ಚನ್ನಪಟ್ಟಣದಲ್ಲಿ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ನಡುವೆಯೇ ಜೆಡಿಎಸ್‌ನ ಕೆಲವು ಮುಖಂಡರು, ಮುಸ್ಲಿಮ್ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯ ಸಂಬಂಧ ಚನ್ನಪಟ್ಟಣದ ಮುಸ್ಲಿಂ ಸಮುದಾಯದ ಹಿರಿಯರೋರ್ವರು ನೀಡಿರುವ ಹೇಳಿಕೆಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ಹರಿದಾಡಿರುವ ಫೋಟೋ ಹಾಗೂ ವಿಡಿಯೋದಲ್ಲಿ ಒಂದು ಕವರ್‌ನಲ್ಲಿ ಒಂದು ಸಾವಿರ ಹಣ, ಮುಸ್ಲಿಮರು ನಮಾಜ್ ಮಾಡುವ ಮುಸಲ್ಲ(ಶುದ್ಧವಾದ ಬಟ್ಟೆ) ಹಾಗೂ ಕುರ್‌ಆನಿನ 36ನೇ ಪವಿತ್ರ ಸೂಕ್ತವಾದ ‘ಸೂರಃ ಯಾಸೀನ್’ನ ಒಂದು ಪ್ರತಿ ಹಾಗೂ ಮತ ನೀಡುವಂತೆ ಕರಪತ್ರ ನೀಡಿರುವುದು ಕಂಡುಬಂದಿದೆ.

Advertisements

ಈ ಬೆಳವಣಿಗೆಗೆ ಸಂಬಂಧಿಸಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಸ್ಲಿಂ ಬಾಂಧವರು ಆಕ್ರೋಶ ಹೊರಹಾಕಿದ್ದು, “ನಿಮಗೆ ಮತ ನೀಡಲು ನಮ್ಮ ಧಾರ್ಮಿಕ ನಂಬಿಕೆಗಳನ್ನು ಬಳಸಿಕೊಳ್ಳಬೇಡಿ. ಎಚ್.ಡಿ.ಕುಮಾರಸ್ವಾಮಿ ಅವರು ಕುರ್‌ಆನ್‌ನ ಪ್ರತಿಯ ಜೊತೆಗೆ 1000 ರೂ.ಗಳ ಲಂಚ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

Gb80Q9LbEAA7Nxr

“ದಯವಿಟ್ಟು ಇಂತಹ ರಾಜಕೀಯದಿಂದ ದೂರವಿರಿ. ನಮ್ಮ ಈಮಾನ್‌(ಧರ್ಮ ವಿಶ್ವಾಸ)ವನ್ನು ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ. ನಮ್ಮಲ್ಲಿ ಬಂದು ಮತ ಕೇಳಿ. ಆದರೆ, 1000 ರೂ ಹಣ ತೆಗೆದುಕೊಂಡು, ಕುರಾನ್ ಮೇಲೆ ನಿಮ್ಮ ಮತವನ್ನು ನೀಡಿ ಎಂದು ಪ್ರತಿಜ್ಞೆ ಮಾಡಿಸುವ ನಿಮ್ಮ ಈ ಕೆಲಸವನ್ನು ನಾವು ಯಾರೂ ಒಪ್ಪುವುದಿಲ್ಲ. ನಿಮ್ಮ ಮಗನ ಜಯಕ್ಕಾಗಿ, ಈ ರೀತಿಯ ಕೆಲಸಕ್ಕೆ ಕೈ ಹಾಕಬೇಡಿ. ಇದು ನಮ್ಮ ಧಾರ್ಮಿಕ ನಂಬಿಕೆಯ ವಿಚಾರವನ್ನು ಬಳಸಿಕೊಳ್ಳಬೇಡಿ” ಎಂದು ಚನ್ನಪಟ್ಟಣದ ಮುಸ್ಲಿಂ ಮುಖಂಡರು ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿಯವರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬೆಳವಣಿಗೆ ಸಂಬಂಧ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತುರುಕರ ನಿಯತ್ತು ಗೊತ್ತಿದ್ದರೂ ಸುಮ್ಮನೆ waste ಮಾಡಿದ್ದಾನೆ. ಅದೇ ಕಾಸು ಗೌಡರಿಗೆ ಕೊಟ್ಟಿದ್ರೆ ಸಾಲಿಡ್ ಆಗಿರೋದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X