ಬೀದರ್‌ | ಪ್ರಥಮ ಸರ್ವೋದಯ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಚನ್ನವೀರ ಶಿವಾಚಾರ್ಯ ಆಯ್ಕೆ

Date:

Advertisements

ಹುಲಸೂರ ತಾಲ್ಲೂಕಿನ ಬೇಲೂರಿನ ಉರಿಲಿಂಗಪೆದ್ದಿ ಮಠದಲ್ಲಿ ಜರುಗುವ‌ ಶರಣ ಉರಿಲಿಂಗಪೆದ್ದಿ ಉತ್ಸವ, ಶಿವಲಿಂಗೇಶ್ವರ ಶಿವಯೋಗಿಗಳ 56ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಜರುಗುವ ಪ್ರಥಮ ಸರ್ವೋದಯ ಸಾಹಿತ್ಯ ಸಮ್ಮೇಳನಕ್ಕೆ ಡಾ.ಚನ್ನವೀರ ಶಿವಾಚಾರ್ಯ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಫೆಬ್ರುವರಿ 22 ಮತ್ತು 23ರಂದು ಜರುಗಲಿರುವ ಸಮ್ಮೇಳನ ಕುರಿತು ಬೇಲೂರಿನ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾಹಿತ್ಯ, ಧರ್ಮ ಜೊತೆಗೆ ಸಮಾಜವು ಸಾಮರಸ್ಯಕ್ಕೆ ಒತ್ತು ನೀಡಲು ಹಾಗೂ ಯುವಕರಿಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಪಂಚಾಕ್ಷರಿ ಸ್ವಾಮೀಜಿ ಹಾಗೂ ಸಂಯೋಜಕ ಡಾ.ಗವಿಸಿದ್ಧಪ್ಪ ಪಾಟೀಲ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ : ಸಾಣೇಹಳ್ಳಿ ಶ್ರೀ

Advertisements

ಸಭೆಯಲ್ಲಿ ಹುಲಸೂರ ತಹಸೀಲ್ದಾರ ಶಿವಾನಂದ ಮೇತ್ರೆ, ಮುಖಂಡರಾದ ಜಗನ್ನಾಥ ಚಿಲ್ಲಾಬಟ್ಟಿ, ಸುರೇಶ ಕಾನೇಕರ್, ಡಾ.ರಾಜಕುಮಾರ ಮಾಳಗೆ, ಡಾ.ಸಂಜುಕು ಮಾರ ನಡುಕರ್ ಸೇರಿದಂತೆ ಪ್ರಮುಖರಾದ ಸಂಗಮೇಶ ಜವಾದಿ, ರಾಜಕುಮಾರ ಮೋರೆ, ರಾಜಕುಮಾರ ಮಾಳಗೆ, ಸಂಜುಕುಮಾರ ಖೇಲೆ, ಭೀಮಶಾ ವಾಘಮಾರೆ, ನಿತ್ಯಾನಂದ ಮಂಠಾಳಕರ್, ಮಹಾಲಿಂಗ ದೇವರು, ನವನಾಥ ಬೆಳ್ಳೆ, ಪ್ರಕಾಶ ಸಿಂಗೆ, ಬಸವಸಾಗರ‌ ತುತಾರೆ, ನಾಗಪ್ಪ ನಿಣ್ಣೆ, ಗುರುನಾಥ, ಗೌತಮ ವಾಘಮಾರೆ, ಯೋಗೇಶ ರಾಜಗುರು, ನಿಖೀಲ್ ಬೆಳ್ಳೆ, ಮಚಿಂದ್ರ ಕದಮ್, ರಾಜಪ್ಪ ನಂದುಡೆ, ಸಿದ್ರಾಮ ವಾಘಮಾರೆ, ದಶರಥ ರಾಜಗುರು,ಮಸ್ತಾನ ಪಟೇಲ್, ದತ್ತಾತ್ರೇಯ ಸುಭಾನೆ,ಸಂಜೀವ ತಾಂಬುಳೆ, ಅಶೋಕ್ ಗುಪ್ತಾ, ಅವಿನಾಶ್ ಪಂಚಾಳ, ಚೇತನ್ ರಾಧು, ಗಣೇಶ, ಸನ್ಮುಖ, ಶ್ರಾವಣ,ರವಿ
ನಾಗನಾಥ ಬನಸುಡೆ, ಶೇಖ ಮಿರಾನ ಸಾಬ್‌, ಜಗನ್ನಾಥ ಮೆಟಾರೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X