ಚಿಕ್ಕಬಳ್ಳಾಪುರ | ಕ್ರೀಡೆಯೊಳಗಿನ ಶಿಸ್ತು ಬದುಕಿನ ಭಾಗವಾಗಲಿ : ಡಾ.ನಿರ್ಮಲಾನಂದನಾಥ ಸ್ವಾಮೀಜಿ

Date:

Advertisements

ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್‌ ಜೆ ಸಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಚುಂಚಾದ್ರಿ ಕ್ರೀಡೋತ್ಸವ – 2024

ಭಾಗವಹಿಸುವಿಕೆ ಅತೀ ಮುಖ್ಯ, ಸೋಲು ಗೆಲುವಿನ ಲೆಕ್ಕಾಚಾರ ಆನಂತರ. ಕ್ರೀಡೆಗಳಲ್ಲಿ ಭಾಗವಹಿಸಿದವರ ಶಿಸ್ತು ಬೇರೆಯವರಲ್ಲಿ ಇರುವುದಿಲ್ಲ. ಹಾಗಾಗಿ ಕ್ರೀಡೆಯೊಳಗಿನ ಶಿಸ್ತು ನಿಮ್ಮ ಬದುಕಿನ ಭಾಗವಾಗಲಿ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶಿಸಿದರು.

ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 27ನೇ ವರ್ಷದ ರಾಜ್ಯಮಟ್ಟದ ಚುಂಚಾದ್ರಿ ಕ್ರೀಡೋತ್ಸವದ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

sjcit ಕ್ರೀಡ

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸೋತಾಗ ಕುಗ್ಗದೇ, ಗೆದ್ದಾಗ ಬೀಗದೆ ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಸಲಹೆ ನೀಡಿದರು.

Advertisements

ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ತಮ್ಮ ಭವಿಷ್ಯವನ್ನು ಲೆಕ್ಕಿಸದೇ ದುಡಿಯುತ್ತಾರೆ. ಅದಕ್ಕೆ ಪ್ರತಿಯಾಗಿ ತಾವುಗಳು ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೆ ಮಾಡಬೇಕೆಂದು. ಈ ದೇಶದ ಮುಖ್ಯ ಸಂಪತ್ತಾದ ಮಾನವ ಸಂಪತ್ತನ್ನು ನಾವುಗಳು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

sjcit12 1

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ವಿ.ಗೋಪಾಲ್‌ ಗೌಡ ಮಾತನಾಡಿ, ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರೀಕರಾಗಿ ದೇಶ ಸೇವೆಗಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಪ್ರಸ್ತುತ ವಿದ್ಯಾರ್ಥಿ ಯುವಜನರು ಅತ್ಯಾಧುನಿಕತೆಯ ಭರಾಟೆಯಲ್ಲಿ ಮೊಬೈಲ್‌ ಬಳಕೆ, ದುಶ್ಚಟಗಳ ದಾಸರಾಗುತ್ತಿದ್ದಾರೆ. ಇದು ದೇಶದ ಅಭಿವೃದ್ಧಿಗೆ ಮಾರಕ. ಆದ್ದರಿಂದ, ಶ್ರದ್ಧಾ ಭಕ್ತಿಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಮ್ಮದಾಗುತ್ತದೆ ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

sjcit1234

ಬೆಳಗ್ಗೆ 9 ಗಂಟೆಗೆ ಆರಂಭವಾದ ಕ್ರೀಡಾಕೂಟದಲ್ಲಿ ರಾಜ್ಯದ 21 ಜಿಲ್ಲೆಗಳಿಂದ 6000ಕ್ಕೂ ಹೆಚ್ಚು ವಿದ್ಯಾರ್ಥಿಗಳು 30ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೋಕ್ಸೊ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನ್ಯಾಯಾಂಗದ ನಿರಾಸಕ್ತಿ; ಸದನದ ಚರ್ಚೆ ಸ್ವಾಗತಾರ್ಹ

sjcit ಭರತ ನಾಟ್ಯ

ಸಮಾರಂಭದಲ್ಲಿ ಪುರುಷೋತ್ತಮನಂದನಾಥ ಸ್ವಾಮೀಜಿ, ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಪ್ರಕಾಶನಾಥ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ,‌ ಆದಿಚುಂಚನಗಿರಿ ವಿವಿ ಉಪಕುಲಪತಿ ಡಾ.ಎಂ.ಎ ಶೇಖರ್‌, ಅಕ್ಕ ಸಮ್ಮೇಳನದ ಅಧ್ಯಕ್ಷ ಅಮರನಾಥ ಗೌಡ, ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ, ಎಸ್ಪಿ ಕುಶಾಲ್‌ ಚೌಕ್ಸೆ, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಉಷಾರಾಣಿ, ಡಾ.ಶಿವರಾಮರೆಡ್ಡಿ, ಪ್ರಾಂಶುಪಾಲರಾದ ಡಾ.ಜಿ.ಟಿ.ರಾಜು, ಕುಲಸಚಿವ ಸುರೇಸ್‌ ಜೆ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X