ಬಾಗೇಪಲ್ಲಿ | ಶಾಲಾ ಕಾಲೇಜು ಸಮಯಕ್ಕೆ ಕ.ರಾ.ರ.ಸಾ. ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿಧ್ಯಾರ್ಥಿಗಳಿಂದ ರಸ್ತೆ ತಡೆ

Date:

ಪರಗೋಡು, ಬಾಗೇಪಲ್ಲಿ, ಚೆಂಡೂರು ರಾಷ್ಟೀಯ ಹೆದ್ದಾರಿ ಮಾರ್ಗದಲ್ಲಿ ಶಾಲಾ ಕಾಲೇಜು ಸಮಯಕ್ಕೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿರುವ ವಿದ್ಯಾರ್ಥಿಗಳು ಪೊಲೀಸರ ಮತ್ತು ಸಾರಿಗೆ ಸಂಸ್ಥೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಗೇಪಲ್ಲಿ ಪಟ್ಟಣ ಹೊರವಲಯದ ರಾಷ್ಟಿಯ ಹೆದ್ದಾರಿ 44 ರಲ್ಲಿರುವ ಪರಗೋಡು ಗ್ರಾಮದ ಬಳಿ ವಿವಿಧ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್‌ಗಳನ್ನು ತಡೆದು ಶಾಲಾ, ಕಾಲೇಜು ಸಮಯಕ್ಕೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ಬಾಗೇಪಲ್ಲಿ ಡಿಪೋ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ ಮನವಿಪತ್ರ ಸಲ್ಲಿಸಿದರು.

ಬಾಗೇಪಲ್ಲಿ, ಪರಗೋಡು, ಚೆಂಡೂರು, ಬೀಚಗಾನಹಳ್ಳಿ ರ‍್ಲಕೊಂಡ ವ್ಯಾಪ್ತಿಯಲ್ಲಿ ನೂರಾರು ಹಳ್ಳಿಗಳು ಇದ್ದು, ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಪ್ರಯಾಣಿಸಿ ಮನೆಗಳಿಗೆ ವಾಪಸ್ಸು ಬರಲು ಬೆಳಗ್ಗೆ 8 ರಿಂದ 9 ಗಂಟೆಯೊಳಗಡೆ ಹಾಗೂ ಸಾಯಂಕಾಲ 4 ರಿಂದ 6 ಗಂಟೆಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದದಂತಾಗಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಸಮಸ್ಯೆ ಎದುರಾಗಿದೆ. ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನ ಇಲ್ಲದ ಕಾರಣ ವಿದ್ಯಾರ್ಥಿಗಳು ಪರಗೋಡು ಗ್ರಾಮದ ಬಳಿ ಹೆದ್ದಾರಿ ತಡೆ ನಡೆಸಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆ ತಡೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಡಿವೈಎಸ್ಪಿ ಪ್ರಕಾಶ್ ಪ್ರತಿಕ್ರಿಯಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡದೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವುದು ಅಪರಾಧ ಎಂದು ಇನ್ನೊಮ್ಮೆ ರಸ್ತೆ ತಡೆ ನಡೆಸಿದರೆ ವಿದ್ಯಾರ್ಥಿಗಳೆಂದು ನೋಡದೆ ಕೇಸು ದಾಖಲು ಮಾಡುವುದಾಗಿ ಸೂಚಿಸುತ್ತಿದ್ದಂತೆ ಸ್ಥಳದಲ್ಲಿ ಇದ್ದ ವಿದ್ಯಾರ್ಥಿಗಳು ಬಸ್ ಸೌಲಭ್ಯ ಇಲ್ಲದೆ ನಿತ್ಯ ಸಮಸ್ಯೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಓದಗಿಸಿಕೊಡಿ ಸಾರ್, ನಮ್ಮ ಸಮಸ್ಯೆ ಇಲಾಖೆಗೆ ಏಕೆ ಅರ್ಥ ಆಗುತ್ತಿಲ್ಲ ಎಂದು ಪೊಲೀಸರನ್ನು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ಕೋಮುಲ್‌ನಿಂದಲೇ ಪಶು ಆಹಾರ ಘಟಕ ಆರಂಭಕ್ಕೆ ಕ್ರಮ: ನಂಜೇಗೌಡ

ಈ ಸಂರ್ಭದಲ್ಲಿ ಬಾಗೇಪಲ್ಲಿ ಡಿಪೋ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ, ಪೊಲೀಸ್ ವೃತ್ತ ನೀರೀಕ್ಷಕ ಅಜಯ್ ಸಾರಥಿ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...

E-KYC: ಸರ್ವರ್‌ಗಿಂತ ದೊಡ್ಡ ಸಮಸ್ಯೆ: ಜನರ ಬದುಕು

ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ...

ಬಾಗಲಕೋಟೆ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಕೆ.ರಾಜೇಂದ್ರ

ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು....