ಬಾಗೇಪಲ್ಲಿ |ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಸಂಪೂರ್ಣ ಬಂದ್‌ಗೆ ಅಭಿಮಾನಿಗಳು ಕರೆ

Date:

ತಾಲ್ಲೂಕು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ ತಾರಕ್ಕೇರಿದೆ. ಈ ಹಿನ್ನೆಲೆ ನಾಳೆ (ಬುಧವಾರ) ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ (ಬಾಗೇಪಲ್ಲಿ ಚೇಳೂರು ಹಾಗೂ ಗುಡಿಬಂಡೆ) ತಾಲ್ಲೂಕು ಗಳು ಬಂದ್‌ಗೆ ಕರೆ ನೀಡಿರುವ ಬೆಂಬಲಿಗರು, ಪಕ್ಷದ ವಿವಿಧ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.

- Advertisement -

ಸಚಿವ ಸಂಪುಟ ವಿಸ್ತರಣೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರು ಬಾಗೇಪಲ್ಲಿಯ ಶಾಸಕ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಬಾಗೇಪಲ್ಲಿ, ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳನ್ನು ಒಳಗೊಂಡಂತೆ ನಾಳೆ ಸಂಪೂರ್ಣ ಬಂದ್ ನಡೆಸಲು ಒಮ್ಮತ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದೇ ವೇಳೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನರೇಂದ್ರ, ʻಆಪರೇಷನ್ ಕಮಲʼದ ವೇಳೆ ಬಿಜೆಪಿ ಸಚಿವ ಸ್ಥಾನ ನೀಡುವ ಆಫರ್ ಮಾಡಿತ್ತು. ಆದರೂ ಸುಬ್ಬಾರೆಡ್ಡಿ ಕಾಂಗ್ರೆಸ್ ತೊರೆಯಲಿಲ್ಲ. ಈಗ ಕಾಂಗ್ರೆಸ್ ಸಚಿವ ಸ್ಥಾನ ನೀಡುವುದಾಗಿ ಹೇಳಿ ಅವಕಾಶ ನೀಡದೇ ಅವಮಾನ ಮಾಡಿದೆ. ಇದರಿಂದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ತೀವ್ರ ನೋವಾಗಿದೆ. ಅದಕ್ಕಾಗಿ ನಾವು ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಅಮರನಾಥ ರೆಡ್ಡಿ ಮಾತನಾಡಿ ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತ‍ಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸುಬ್ಬಾರೆಡ್ಡಿ ಅಭಿಮಾನಿಗಳು ಆ.5ರಂದು (ಬುಧವಾರ) ಬಾಗೇಪಲ್ಲಿ ಬಂದ್‌ಗೆ ಕರೆ ನೀಡಿದ್ದಾರೆ. ಜಿಲ್ಲೆಗೆ ಸಚಿವ ಸ್ಥಾನ ಕೊಡದ ಕಾರಣ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವ ಜತೆಗೆ ಕಾಂಗ್ರೆಸ್‌ ಪಾರುಪತ್ಯಕ್ಕೂ ಪೆಟ್ಟು ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಕೋಲಾರ | ಎಸ್‌ಐಆರ್‌ ಅವಾಂತರ: ಇಷ್ಟು ವರ್ಷ ಮತ ಚಲಾಯಿಸಿದ್ದರೂ ಕೆಲವರ ಹೆಸರು ಗಾಯಬ್…?

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎ.ವಿ.ಪೂಜಪ್ಪ, ಬಿ.ವಿ.ವೆಂಕಟರವಣ ,ಕೊಮುಲ್ ಮಂಜುನಾಥ್ ರೆಡ್ಡಿ, ಪಿ.ಮಂಜುನಾಥ್ ರೆಡ್ಡಿ, ಬೂರಗಮಡಗು ನರಸಿಂಹಪ್ಪ, ಟಿ.ಶ್ರೀನಿವಾಸ್, ಸುಧಾಕರ ರೆಡ್ಡಿ ,ಚಲಂ,ಚಂದ್ರಶೇಖರ ರೆಡ್ಡಿ, ಸೋಮಶೇಖರ್, ಲಕ್ಷ್ಮೀಪತಿ ರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ ,ಆನಂದ್,ಶ್ರೀನಿವಾಸ್ ,ಪ್ರಭಾಕರ್ ರೆಡ್ಡಿ, ಮನ್ಸೂರ್, ನಜಿರಾ ಬೇಗಂ,ಲಕ್ಷ್ಮೀ, ಹಾಗೂ ಇತರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...