ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮದಲ್ಲಿ ಮಳೆಗಾಗಿ ಮುಸ್ಲಿಮರು ಗ್ರಾಮದಲ್ಲಿ ಬತ್ತಿರುವ ಕೆರೆ ಅಂಗಳದಲ್ಲಿ ಕುಳಿತು ಶುಕ್ರವಾರ ಸಾಮೂಹಿಕ ನಮಾಜ್ ಮಾಡಿದರು.
ತಾಲ್ಲೂಕಿನ ನಾರೇಮದ್ದೇಪಲ್ಲಿ ಗ್ರಾಮದ ಮುಸ್ಲಿಮರು ಮಳೆಗಾಗಿ ಪ್ರಾರ್ಥಿಸಿ ಸಾಮೂಹಿಕ ನಮಾಜ್ ಸಲ್ಲಿಸಿದರು. ಮಳೆಗಾಲ ಆರಂಭವಾಗಿ ಎರಡು ತಿಂಗಳು ಮುಗಿಯುತ್ತಿದ್ದರೂ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗದೇ ಇರುವುದರಿಂದ ಕೆರೆ, ಹಳ್ಳ, ಕೊಳ್ಳಗಳು ಬತ್ತಿ ಹೋಗಿದೆ. ಜಾನುವಾರುಗಳಿಗೆ ನೀರು, ಮೇವು ದೊರಕುತ್ತಿಲ್ಲ. ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಉತ್ತಮ ಮಳೆ ಕರುಣಿಸುವಂತೆ ದೇವರನ್ನು ಪ್ರಾರ್ಥಿಸಿದರು.
ಇದನ್ನು ಓದಿದ್ದೀರಾ..?ಕೆಜಿಎಫ್ | ಶಿಕ್ಷಕರ ಕರ್ತವ್ಯ ನಿಷ್ಠೆ ಸಮಾಜಕ್ಕೆ ಮಾದರಿ: ದೇವೇರಹಳ್ಳಿ ನಾರಾಯಣಸ್ವಾಮಿ
ಭಕ್ತಿಗೀತೆಗಳನ್ನು ಹಾಡುವ ಮೂಲಕ ವಿಶೇಷವಾಗಿ ಪ್ರಾರ್ಥಿಸಿದರು. ಮಳೆಯಾಗದೆ ತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆ ಸ್ತಬ್ಧಗೊಂಡಿವೆ. ಬಿತ್ತನೆ ಮಾಡಿದ ಬೆಳೆ ಒಣಗುತ್ತಿವೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಗರಿಷ್ಠ ಪ್ರಮಾಣದಲ್ಲಿ ಈ ತಾಲ್ಲೂಕಿನಲ್ಲಿ ಮಳೆ ಕೊರತೆ ಇದೆ. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿಗೂ ಸಹ ತತ್ವಾರ ಉಂಟಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ಮನಗಂಡ ನಾರೇಮದ್ದೇಪಲ್ಲಿ ಗ್ರಾಮದ ಮುಸ್ಲಿಮರು ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಸಿದರು.




