ಚಿಕ್ಕಬಳ್ಳಾಪುರ | ಹಣಕ್ಕಾಗಿ ಬ್ಲಾಕ್‌ಮೇಲ್‌; ಯುವತಿಯ ತಿರುಚಿದ ಅಶ್ಲೀಲ ಫೋಟೊ ತಂದೆಗೆ ಕಳುಹಿಸಿದ ಕಿರಾತಕ

Date:

ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಯುವತಿಯ ಫೋಟೊವನ್ನು ಅಸಭ್ಯವಾಗಿ ಎಡಿಟ್‌ ಮಾಡಿ ಅದನ್ನು ಆಕೆಯ ತಂದೆಗೇ ವಾಟ್ಸಾಪ್‌ ಮಾಡಿರುವ ವಿಕೃತನೊಬ್ಬ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಯುವತಿಯ ತಂದೆ ಸೈಬರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇತ್ತೀಚೆಗಷ್ಟೇ ಎಂಬಿಬಿಎಸ್ ಮುಗಿಸಿ ಉದ್ಯೋಗ ಆರಂಭಿಸಿದ್ದ ಯುವತಿಗೆ ಅಪರಿಚಿತ ಕರೆಯೊಂದು ಬಂದಿದ್ದು, ನೀವು ಆನ್ಲೈನ್‌ನಲ್ಲಿ 5 ಸಾವಿರ ಸಾಲ ಪಡೆದಿದ್ದೀರಿ. ಅದನ್ನು ವಾಪಸ್‌ ಕಟ್ಟಬೇಕು ಎಂದು ಬೆದರಿಕೆ ಹಾಕಲಾಗಿದೆ. ಆದರೆ, ಯುವತಿ, ನಾನು ಯಾವುದೇ ಸಾಲ ಪಡೆದಿಲ್ಲ. ಹಾಗಾಗಿ ಯಾವುದೇ ಹಣ ಕಟ್ಟುವುದಿಲ್ಲ ಎಂದು ಹೇಳಿದ್ದರು.

ಚಿಂತಾಮಣಿ ನಗರದ ಕನಂಪಲ್ಲಿ ನಿವಾಸಿಯಾಗಿರುವ ಈ ಯುವ ವೈದ್ಯೆ ಹಲವು ದಿನಗಳ ಹಿಂದೆ ನಕಲಿ ಅಪ್ಲಿಕೇಶನ್‌ ಮೇಲೆ ಕ್ಲಿಕ್‌ ಮಾಡಿದ್ದು ನಿಜವಾದರೂ ಯಾವುದೇ ಹಣ ಪಡೆದಿರಲಿಲ್ಲ. ಆರಂಭದಲ್ಲಿ ಹಣ ಪಡೆಯುವಂತೆ ಒತ್ತಡ ಹೇರಿದ ಕಿರಾತಕರು ಬಳಿಕ, ಹಣ ಪಡೆದಿದ್ದೀರಿ ವಾಪಸ್‌ ಕೊಡಿ ಎಂದು ಒತ್ತಡ ಹೇರಲು ಆರಂಭಿಸಿದ್ದಾರೆ. ಆದರೆ, ಆಕೆ ಹಣ ಮರಳಿ ಪಾವತಿಸುವ ಪ್ರಮೇಯವೇ ಇಲ್ಲವೆಂದು ಸ್ಪಷ್ಟವಾಗಿ ಹೇಳಿದ್ದರು ಎನ್ನಲಾಗಿದೆ.

“ನಿಮ್ಮ ಅಶ್ಲೀಲ ಫೋಟೊ ನಮ್ಮ ಬಳಿ ಇದೆ. ಅದನ್ನು ನಿಮ್ಮ ಮನೆಯವರು, ಸ್ನೇಹಿತರಿಗೆಲ್ಲ ಕಳುಹಿಸುತ್ತೇನೆʼʼ ಎಂದು ಆಕೆಗೆ ತಿಳಿಸಿದ್ದಾರೆ. ಆದರೆ, ತಮ್ಮ ಫೋಟೊ ಅವರಿಗೆ ಹೇಗೆ ಸಿಗುತ್ತದೆ, ತಾನು ಆ ರೀತಿ ನಡೆದುಕೊಂಡಿದ್ದೇ ಇಲ್ಲ ಎಂದು ಯುವ ವೈದ್ಯೆ ಧೈರ್ಯವಾಗಿದ್ದರು.

ಕಿರಾತಕನೊಬ್ಬ ವೈದ್ಯೆಯ ಅಸಭ್ಯ ಫೋಟೊ ಒಂದನ್ನು ಯುವತಿಯ ತಂದೆಯ ವಾಟ್ಸಾಪ್‌ಗೆ ಶೇರ್‌ ಮಾಡಿದ್ದಾನೆ. ಇದು ಅಶ್ಲೀಲವಾಗಿ ಎಡಿಟ್‌ ಮಾಡಿರುವ ಫೋಟೊ ಆಗಿದ್ದು, ಗೊತ್ತೇ ಆಗದಂತೆ ಎಡಿಟ್‌ ಮಾಡಲಾಗಿದೆ ಎನ್ನಲಾಗಿದೆ. ಜತೆಗೆ ಮನೆಯವರು, ಸಂಬಂಧಿಕರಿಗೂ ಈ ಫೋಟೊಗಳನ್ನು ಸೈಬರ್‌ ಕಳ್ಳ ಕಳುಹಿಸಿದ್ದಾನೆ. ಇದೀಗ ಯುವತಿಯ ತಂದೆ ಚಿಕ್ಕಬಳ್ಳಾಪುರದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

ವೈದ್ಯೆಯ ಅಶ್ಲೀಲ ಫೋಟೊ ಎಡಿಟ್‌ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವುದು ಸೈಬರ್‌ ಕಳ್ಳರ ಅಥವಾ ಬೇರೆ ಯಾರೋ ಪರಿಚಿತರು ಈ ಕೃತ್ಯ ನಡೆಸುತ್ತಿದ್ದಾರ ಎಂಬ ಬಗ್ಗೆಯೂ ಸಂಶಯವಿದೆ. ಈ ಕಿರಾತಕ ಕೇವಲ ಸೋಷಿಯಲ್‌ ಮೀಡಿಯಾದಲ್ಲಿ ಮಾತ್ರ ಯುವತಿಯ ಫೋಟೊ ಅಪ್‌ಲೋಡ್‌ ಮಾಡುತ್ತಿಲ್ಲ. ಬದಲಾಗಿ ಯುವತಿಯ ಸಂಬಂಧಿಕರಿಗೆಲ್ಲ ಫೋಟೊ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...