ಚಿಂತಾಮಣಿ | ಮೇಲಾಧಿಕಾರಿಗಳಿಂದ ಕಿರುಕುಳ,ಲಂಚದ ಆರೋಪ:ಸಾರಿಗೆ ನೌಕರ ಎಸ್.ರಾಜು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಘಟಕದ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ.

Date:

ಚಿಂತಾಮಣಿ ಕೆಎಸ್‌ಆರ್‌ಟಿಸಿ ಸಾರಿಗೆ ಡಿಪೋದಲ್ಲಿ ಮೇಲಾಧಿಕಾರಿಗಳಿಂದ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ,ಕಳೆದ 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕ ಮತ್ತು ನಿರ್ವಾಹಕ ಎಸ್. ರಾಜು ಅವರು ಬೆಂಗಳೂರು ಜೋಡಿ ರಸ್ತೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದ ಗೇಟಿನ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

- Advertisement -

ತಮ್ಮ ವಿರುದ್ಧ ಯಾವುದೇ ಗಂಭೀರ ಪ್ರಕರಣಗಳಿಲ್ಲದಿದ್ದರೂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಉದ್ದೇಶಪೂರ್ವಕವಾಗಿ ಆಕ್ಷೇಪಣೆ ಹಾಕಿಸಿ ವೇತನ ಕಡಿತ ಮಾಡುತ್ತಿದ್ದಾರೆ.ಇತ್ತೀಚೆಗೆ ತಮ್ಮ ಸಂಬಳದಿಂದ ₹6,162 ಕಡಿತ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಒಂದೇ ದಿನದಲ್ಲಿ ಅಮಾನತು ಹಾಗೂ ವರ್ಗಾವಣೆ ಆದೇಶಗಳನ್ನು ಹೊರಡಿಸಲಾಗಿದೆ.ಯಾವುದೇ ನೋಟಿಸ್ ನೀಡದೆ ವಾಟ್ಸಾಪ್ ಮೂಲಕ ಆದೇಶ ಕಳುಹಿಸಲಾಗಿದೆ ಅಮಾನತ ಅವಧಿಯಲ್ಲಿ ನೀಡಬೇಕಾದ ಶೇಕಡ 50ರಷ್ಟು ಜೀವನ ಭತ್ಯೆಯನ್ನೂ ನೀಡಿಲ್ಲ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಡಿಪೋದಲ್ಲಿ ನೌಕರರು ರಜೆ ಕೇಳಿದರೆ ₹500 ನೀಡಬೇಕು ಹಣ ನೀಡಿದರೆ ಮಾತ್ರ ರಜೆ ಮಂಜೂರು ಮಾಡಲಾಗುತ್ತದೆ ಹಾಗೂ ನೈಟ್ ರೂಟ್‌ಗಳು ಅಥವಾ ಒಡಿ ರೂಟ್‌ಗಳನ್ನು ನಿಗದಿಪಡಿಸಲು ಲಂಚ ಕೇಳಲಾಗುತ್ತದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

‘ಶಕ್ತಿ ಯೋಜನೆ’ ಜಾರಿಯಾದ ನಂತರ ಬಸ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಬಿಡಿಭಾಗಗಳು ಸರಿಯಾಗಿ ಸಿಗದ ಕಾರಣ ಕೆಲವು ಸಂದರ್ಭಗಳಲ್ಲಿ ಚಾಲಕರೇ ಸ್ವಂತ ಹಣದಿಂದ ಬಿಡಿಭಾಗಗಳನ್ನು ಖರೀದಿಸಿ ಅಳವಡಿಸಿಕೊಳ್ಳಬೇಕಾಗಿದೆ ಕಲೆಕ್ಷನ್ ಕಡಿಮೆಯಾದರೆ ಮೇಮೋ ಹಾಗೂ ಚಾರ್ಜ್‌ಶೀಟ್ ನೀಡಲಾಗುತ್ತಿದೆ ಎಂದು ನಿರ್ವಾಹಕ ಎಸ್.ರಾಜು ತಿಳಿಸಿದರು.

ಕಿರುಕುಳ ತಾಳಲಾರದೆ ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರೂ,ಅದನ್ನು ಸ್ವೀಕರಿಸದೆ ವಿಚಿತ್ರ ಷರತ್ತುಗಳನ್ನು ವಿಧಿಸಲಾಗುತ್ತಿದೆ.ನ್ಯಾಯ ಸಿಗುವವರೆಗೂ ಧರಣಿ ಮುಂದುವರಿಸುವುದಾಗಿ ರಾಜು ಎಚ್ಚರಿಸಿದ್ದಾರೆ.

ಈ ಕುರಿತು ವರದಿಗಾರರೊಂದಿಗೆ ಮಾತನಾಡಿದ ಚಿಂತಾಮಣಿ ಡಿಪೋ ವ್ಯವಸ್ಥಾಪಕಿ ಸರಿತಾ ಅವರು ನೌಕರ ರಾಜು ಅವರ ಆರೋಪಗಳನ್ನು ಸಂಪೂರ್ಣವಾಗಿ ತಳ್ಳುಹಾಕಿದ್ದಾರೆ.
ಮಹಿಳಾ ಟಿಕೆಟ್ ವಿತರಣೆ ಪ್ರಕರಣದಲ್ಲಿ ಅಕ್ರಮ ಎಸಗಿದ್ದರಿಂದ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ಶಿಡ್ಲಘಟ್ಟ ಡಿಪೋಗೆ ವರ್ಗಾವಣೆ ಮಾಡಲಾಗಿದೆ.ಅಮಾನತಾದ ನೌಕರರು ನಿತ್ಯ ಡಿಪೋಗೆ ಬಂದು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದರೆ ಜೀವನ ಭತ್ಯೆ ನೀಡಲಾಗುತ್ತದೆ, ಆದರೆ ರಾಜು ಅವರು ಸಹಿ ಮಾಡುತ್ತಿಲ್ಲ.

ಇದನ್ನು ಓದಿದ್ದೀರಾ..?​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ಲಂಚದ ಆರೋಪಗಳು ಸುಳ್ಳು ರಾಜೀನಾಮೆ ಹಾಗೂ ವರ್ಗಾವಣೆ ಪ್ರಕ್ರಿಯೆಗಳು ವಿಭಾಗೀಯ ನಿಯಂತ್ರಣಾಧಿಕಾರಿಗಳ ಮಟ್ಟದಲ್ಲಿ ತೀರ್ಮಾನವಾಗಬೇಕಿರುವುದರಿಂದ ಮೇಲಾಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಸದ್ಯ ಮೇಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದ್ದು,ಸಾರಿಗೆ ಘಟಕದ ಮುಂದೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಕಾಸು ಕೊಟ್ಟ ತಕ್ಷಣವೇ ಸಿಕ್ತು ಡೆತ್ ಸರ್ಟಿಫಿಕೇಟ್: ಆಸ್ಪತ್ರೆ ಸಿಬ್ಬಂದಿಯ ಕರಾಳ ಮುಖ ಬಯಲು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರನೊಬ್ಬ ಮರಣ ಪ್ರಮಾಣಪತ್ರ...