ಚಿಕ್ಕಬಳ್ಳಾಪುರದಲ್ಲಿ ಸಂಚಾರಿ ಪೊಲೀಸ್ ನಿಷ್ಕ್ರಿಯ: ರಸ್ತೆ ಮಧ್ಯೆಯೇ ವಾಹನ ನಿಲುಗಡೆ; ಹೇಳೋರಿಲ್ಲ, ಕೇಳೋರಿಲ್ಲ!

Date:

ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಬೈಕ್, ಕಾರುಗಳನ್ನು ನಿಲುಗಡೆ ಮಾಡುತ್ತಿದ್ದು, ಸಂಚಾರಿ ಪೊಲೀಸರ ನಿಷ್ಕ್ರಿಯತೆ, ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ.

- Advertisement -

ಹೌದು. ನಗರದ ಬಿಬಿ ರಸ್ತೆ, ಎಂ.ಜಿ.ರಸ್ತೆ, ಬಜಾರ್ ರಸ್ತೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಎಲ್ಲೆಂದರಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ವಾಹನ ನಿಲುಗಡೆಗೆ ಸೂಕ್ತ ನಿಯಮಗಳನ್ನು ರೂಪಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗುತ್ತಿದೆ. ಕಾಟಾಚಾರಕ್ಕೆ ಅಲ್ಲಲ್ಲಿ ನಿಂತು ದಂಡ ವಿಧಿಸುತ್ತಿರುವುದು ಕೂಡ ಕಂಡುಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಅಡ್ಡಾದಿಡ್ಡಿ ವಾಹನ ಸಂಚಾರ ಮತ್ತು ವಾಹನಗಳ ನಿಲುಗಡೆಯ ಕಾರಣ ಬಿ.ಬಿ.ರಸ್ತೆ, ಬಜಾರ್‌ ರಸ್ತೆ, ಎಂ.ಜಿ.ರಸ್ತೆಗಳಲ್ಲಿ ಅಂಗಡಿ ಮಾಲೀಕರು, ಸಾರ್ವಜನಿಕರು ಸದಾ ಟ್ರಾಫಿಕ್‌ ಕಿರಿಕಿರಿ ಅನುಭವಿಸುವಂತಾಗಿದೆ.

ರಸ್ತೆ ಮಧ್ಯದವರೆಗೆ ಪಾರ್ಕಿಂಗ್

ನಗರದ ಬಿಬಿ ರಸ್ತೆಯಲ್ಲಿ ಅಂಬೇಡ್ಕರ್ ವೃತ್ತದಿಂದ ಹಿಡಿದು ಶನಿಮಹಾತ್ಮ ದೇವಸ್ಥಾನದವರೆಗೆ ನಿತ್ಯ ಎಲ್ಲಿ ನೋಡಿದರೂ ಅಡ್ಡಾದಿಡ್ಡಿಯಾಗಿ ವಾಹನಗಳು ನಿಲ್ಲುತ್ತವೆ. ರಸ್ತೆ ಮಧ್ಯದವರೆಗೆ ವಾಹನ ನಿಲುಗಡೆ ಮಾಡಲಾಗುತ್ತಿದ್ದು, ಹೇಳೋರು ಕೇಳೋರು ಇಲ್ಲವಾಗಿದ್ದಾರೆ. ಈ ನಿಟ್ಟಿನಲ್ಲಿ ನಗರ ಸಂಚಾರಿ ಪೊಲೀಸರು ಯಾವುದೇ ಬಿಗಿ ಕ್ರಮ ಕೈಗೊಳ್ಳುತ್ತಿಲ್ಲ.

ಪೊಲೀಸರ ಮುಂದೆಯೇ ನಿಯಮ ಉಲ್ಲಂಘನೆ

WhatsApp Image 2024 07 03 at 7.50.53 PM

ನಗರದ ಬಿಬಿ ರಸ್ತೆಯಲ್ಲಿ ಎರಡು ಕಡೆ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ. ಆದಾಗ್ಯೂ, ಬಹುತೇಕ ಸಾರ್ವಜನಿಕರು ಟ್ರಾಫಿಕ್ ನಿಯಮಗಳಿಗೆ ಕಿಮ್ಮತ್ತು ಬೆಲೆ ಕೊಡುತ್ತಿಲ್ಲ. ರೆಡ್ ಲೈಟ್ ಇದ್ದರು ಸಿಗ್ನಲ್ ಜಂಪ್ ಮಾಡುತ್ತಿದ್ದಾರೆ. ಪೊಲೀಸರ ಎದುರಲ್ಲೇ ಹೆಲ್ಮೆಟ್ ಧರಿಸದೆ ಬೈಕ್ ಸವಾರರು ರಾಜಾರೋಷವಾಗಿ ಸುತ್ತಾಡುತ್ತಿದ್ದಾರೆ. ಆಗಾಗ ಕಾಣಿಸಿಕೊಳ್ಳುವ ಪೊಲೀಸರು ಕೆಲವೆಡೆ ನಿಂತು ವಾಹನಗಳನ್ನು ಹಿಡಿದು ದಂಡ ವಿಧಿಸುತ್ತಿರುವುದು ಪೊಲೀಸರ ಕಾಟಾಚಾರದ ಕರ್ತವ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಜಾಗದ ಕೊರತೆ

ಕೆಲಸ ಕಾರ್ಯಗಳ ನಿಮಿತ್ತ ಜಿಲ್ಲೆಯ ಸುತ್ತಮುತ್ತಲಿನ ತಾಲೂಕುಗಳಿಂದ ಪ್ರತಿನಿತ್ಯ ನಗರಕ್ಕೆ ಜನ ಬಂದು ಹೋಗುತ್ತಾರೆ. ಇದರಿಂದ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಾಹನ ನಿಲುಗಡೆಗೆ ಸಮಸ್ಯೆಯಾಗುತ್ತಿದೆ. ವಾಹನ ನಿಲುಗಡೆಗೆ ಜಾಗದ ಕೊರತೆ ಇದೆ. ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಆಗಬೇಕಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿ ದೀಪಕ್.

ಈ ಕುರಿತು ಈ ದಿನ.ಕಾಮ್ ಜೊತೆಗೆ ಮಾತನಾಡಿದ ಚಿಕ್ಕಬಳ್ಳಾಪುರ ಎಸ್‌ಪಿ ಡಿ.ಎಲ್.ನಾಗೇಶ್‌, “ವಾಹನಗಳ ನಿಲುಗಡೆಗೆ ಜಾಗದ ಸಮಸ್ಯೆ ಇದೆ. ನಗರಸಭೆಗೆ ಪಾರ್ಕಿಂಗ್‌ ವ್ಯವಸ್ಥೆಗೆ ಮನವಿ ಮಾಡಿದ್ದೇವೆ. ಪಾರ್ಕಿಂಗ್‌ ಸುವ್ಯವಸ್ಥೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು” ಎಂದು ತಿಳಿಸಿದರು.

“ಪಾರ್ಕಿಂಗ್‌ ಸಮಸ್ಯೆ ನಿವಾರಣೆಗೆ ಸಿಬ್ಬಂದಿ ನಿಯೋಜಿಸಲಾಗಿದೆ. ಪಾರ್ಕಿಂಗ್‌ಗೆ ಜಾಗದ ಸಮಸ್ಯೆ ಇರುವ ಕಾರಣ ಎಲ್ಲಿ ನಿಲ್ಲಿಸಬೇಕು ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಹೆಲ್ಮೆಟ್‌ ಧರಿಸದೇ ಇರುವವರನ್ನು ಗುರಿಯಾಗಿಸಿಕೊಂಡು ನಿತ್ಯ 80 – 100 ಜನರಿಗೆ ದಂಡ ವಿಧಿಸುತ್ತಿದ್ದೇವೆ. ಇದೇ ರೀತಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲಾಗುತ್ತಿದೆ” ಎಂದು ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಸಂಚಾರಿ ಪೊಲೀಸ್ ಠಾಣೆ ಅಧಿಕಾರಿ ಎಸ್.ಆರ್.ಮಂಜುಳಾ ತಿಳಿಸಿದರು.

ಇದನ್ನು ಓದಿದ್ದೀರಾ? ಕೋಲಾರ | ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಿದ್ಯಾರ್ಥಿನಿ!

ಒಟ್ಟಾರೆಯಾಗಿ, ನಗರದಲ್ಲಿ ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡುವವರಿಗೆ ಮತ್ತು ಎಲ್ಲೆಂದರಲ್ಲಿ ಬೈಕ್‌ ಪಾರ್ಕಿಂಗ್‌ ಮಾಡುವವರಿಗೆ ಇಲಾಖೆ ಶಿಸ್ತಿನ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ ಈಗಲಾದರೂ ಎಚ್ಚೆತ್ತು ಸೂಕ್ತ ಕ್ರಮಕ್ಕೆ ಮುಂದಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ವಿಜಯಕುಮಾರ್
ವಿಜಯ ಕುಮಾರ್ ಗಜ್ಜರಹಳ್ಳಿ
+ posts

ಪತ್ರಕರ್ತ, ಚಿಕ್ಕಬಳ್ಳಾಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿಜಯ ಕುಮಾರ್ ಗಜ್ಜರಹಳ್ಳಿ
ವಿಜಯ ಕುಮಾರ್ ಗಜ್ಜರಹಳ್ಳಿ
ಪತ್ರಕರ್ತ, ಚಿಕ್ಕಬಳ್ಳಾಪುರ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...