ಚಿಕ್ಕಬಳ್ಳಾಪುರ | ಇನ್‌ಪೆಕ್ಟರ್ ತಪ್ಪಿಗೆ ಸಿಬ್ಬಂದಿ ತಲೆದಂಡ: ಎಸ್‌ಪಿ ನಾಗೇಶ್ ಅಮಾನತಿಗೆ ಆಗ್ರಹ

Date:

Advertisements

ಸಮಸ್ಯೆ ಹೇಳಿಕೊಂಡು ಬಂದ ಪರಿಶಿಷ್ಟರನ್ನು ನಿಂದಿಸಿ, ಜಾತೀಯತೆ ಮೆರೆದಿರುವ ಚಿಕ್ಕಬಳ್ಳಾಪುರ ಎಸ್‌ಪಿ ನಾಗೇಶ್ ಅವರನ್ನು ಅಮಾನತು ಮಾಡಬೇಕು. ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಅಹಿಂದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಹರಿರಾಮ್ ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಂವಿಧಾನಿಕವಾಗಿ ನೇಮಕಗೊಂಡು ಅಧಿಕಾರದ ಗದ್ದುಗೆ ಏರುವ ಮೇಲಾಧಿಕಾರಿಗಳೇ ಜಾತೀಯತೆ ಆಚರಣೆ ಮಾಡಿದರೆ, ತಳವರ್ಗದ ಜನರ ಪಾಡು ಏನಾಗಬೇಕು” ಎಂದರು.

“ಪ್ರಕರಣವೊಂದರಲ್ಲಿ ಇನ್ಸ್‌ಪೆಕ್ಟರ್ ಅವರನ್ನು ರಕ್ಷಿಸಲು ಸಿಬ್ಬಂದಿಗಳ ತಲೆದಂಡ ಮಾಡುತ್ತಿದ್ದಾರೆ. ಇಬ್ಬರು ಪೇದೆಗಳನ್ನು 6 ತಿಂಗಳ ಕಾಲ ಅಮಾನತು ಮಾಡಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ. ಇದನ್ನು ಕೇಳಲು ಹೆಣ್ಣುಮಕ್ಕಳು ಎಸ್‌ಪಿ ಕಚೇರಿಗೆ ಹೋದಾಗ ಅವರ ವಿರುದ್ಧವೂ ಪ್ರಕರಣ ದಾಖಲಿಸುವುದಾಗಿ ನಾಗೇಶ್‌ ಬೆದರಿಕೆ ಹಾಕಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ. ಅಧಿಕಾರಿಗಳ ದುರ್ವರ್ತನೆ ಖಂಡನೀಯ” ಎಂದರು.

Advertisements

“ದಿಬ್ಬೂರಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ರವಿಕುಮಾರ್ ಹಣ ಬದಲಾವಣೆ ಪ್ರಕರಣದ ಆರೋಪಿಗಳನ್ನು 3 ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದರು. ಅದು ದೊಡ್ಡ ಅಪರಾಧ. ಇದು ಬೆಳಕಿಗೆ ಬಂದ ಬಳಿಕ, ಇನ್ಸ್‌ಪೆಕ್ಟರ್‍‌ನನ್ನು ರಕ್ಷಿಸಲು ಮುಖ್ಯಪೇದೆ ನರಸಿಂಹ ಮೂರ್ತಿ ಹಾಗೂ ಪೇದೆ ಅಶೋಕ್ ಎಂಬುವರನ್ನು ಅಮಾನತು ಮಾಡಲಾಗಿದೆ” ಎಂದು ದೂರಿದ್ದಾರೆ.

“ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದಂತೆ ದಲಿತರನ್ನು ಜಾತಿ ನಿಂದನೆ ಮಾಡಿದ ಎಸ್‌ಪಿ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಭಾಸ್ಕರ ಪ್ರಸಾದ್, ದಲಿತ್ ರಮೇಶ್, ಜನಾರ್ದನ, ನಾಗೇಶ್ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X