ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

Date:

Advertisements

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಸಾಹಿತ್ಯ ಸೇವಕ, ಸಂಶೋಧಕ, ಸಂಘಟಕ ಡಾ.ಕೈವಾರ ಶ್ರೀನಿವಾಸ್ ಅವರಿಗೆ ಪ್ರತಿಷ್ಠಿತ ʼಕನ್ನಡಸಿರಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಸಮ್ಮೇಳನದ ಉದ್ಘಾಟನೆಯನ್ನು ಪೀಠಾಧಿಪತಿ ಸುಬುದೇಂದ್ರ ತೀರ್ಥ ಮಹಾಸ್ವಾಮಿಗಳು ನೆರವೇರಿಸಿದರು.

ಡಾ. ಕೈವಾರ ಶ್ರೀನಿವಾಸ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ʼಮನೆಯಂಗಳದಲ್ಲಿ ನುಡಿಸಿರಿ, ಶಾಲೆಯಂಗಳದಲ್ಲಿ ನುಡಿಸಿರಿ, ಕಸಾಪ ನಡಿಗೆ, ವನಸಿರಿ ನುಡಿಸಿರಿ, ತತ್ವಾಮೃತ ಉದ್ಯಾನವನದಲ್ಲಿ ಸಂಧ್ಯಾರಾಗ ಗಾನಸಿರಿʼ ಕಾರ್ಯಕ್ರಮಗಳ ಮೂಲಕ ಕನ್ನಡವನ್ನು ಜನಜೀವನದ ನಿತ್ಯೋತ್ಸವವಾಗಿ ಹರಡಿದ ಶ್ರಮಕ್ಕೆ ಈ ಗೌರವ ಸಂದಿದೆ. ಅವರು ಗುಡಿಬಂಡೆ ಸಿರಿ, ಚಿಕ್ಕಬಳ್ಳಾಪುರ ಸಿರಿ, ಕೈವಾರ ಸಿರಿ, ಚಿಕ್ಕಬಳ್ಳಾಪುರ ಜಿಲ್ಲಾ ಕಸಾಪ ಹೆಜ್ಜೆ ಗುರುತುಗಳು ಮುಂತಾದ ಅನೇಕ ಕೃತಿಗಳ ಕತೃ. ಜತೆಗೆ ಭೂತಾನ್ ದೇಶದ ಸಾಂಸ್ಕೃತಿಕ ಉತ್ಸವದಲ್ಲಿ ʼಮ್ಯಾನ್ ಆಫ್ ದಿ ಇಯರ್ʼ, ಚಾಮರಾಜನಗರ ಕನ್ನಡ ಸಾಹಿತ್ಯ ಪರಿಷತ್ತಿನಿಂದ ʼಗಡಿಸೇನಾನಿʼ, ಗುರುಕುಲ ಪ್ರತಿಷ್ಠಾನದಿಂದ ʼಸಾಹಿತ್ಯ ರತ್ನʼ ಅಲ್ಲದೆ ಕನ್ನಡ ಸೇವಾಮಾಣಿಕ್ಯ, ಕನ್ನಡ ಪಯಸ್ವಿನಿ, ಕನ್ನಡ ಸೇವಾರತ್ನ, ಹೆಮ್ಮೆಯ ಕನ್ನಡಿಗ, ಕೃಷ್ಣದೇವರಾಯ ಪ್ರಶಸ್ತಿ, ಬಲಿಜ ತರಂಗಿಣಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ಅನೇಕ ಸಂಘ-ಸಂಸ್ಥೆಗಳ ನೂರಾರು ಗೌರವ ಸನ್ಮಾನಗಳಿಗೂ ಕೂಡ ಭಾಜನರಾಗಿದ್ದಾರೆ.

Advertisements

ಸಮ್ಮೇಳನದಲ್ಲಿ ಮುಂದಿನ ಅಂತಾರಾಜ್ಯ ಸಮ್ಮೇಳನವನ್ನು ಗೋವಾ ಸಮುದ್ರದ ನಡುವೆ ಹಡಗಿನಲ್ಲಿ ಆಯೋಜಿಸಲಾಗುವುದೆಂದು ಚಿಕ್ಕಮಗಳೂರು ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಘೋಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ವಿಶೇಷ ಅತಿಥಿಗಳಾಗಿ ಅಯೋಧ್ಯ ರಾಮಲಲ್ಲಾ ಶಿಲ್ಪಿ ಡಾ.ಅರುಣ್ ಯೋಗಿರಾಜ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ, ಗೌರವ ಕಾರ್ಯದರ್ಶಿ ಮದನಗೌಡ, ಸಮ್ಮೇಳನಾಧ್ಯಕ್ಷ ಡಾ.ಪ್ರದೀಪ್ ಕುಮಾರ್ ಹೆಬ್ರಿ, ಆಂಧ್ರ ಘಟಕದ ಅಧ್ಯಕ್ಷ ವಕೀಲ ಅಂಜನ್ ಕುಮಾರ್, ತೆಲಂಗಾಣ ಘಟಕದ ಅಧ್ಯಕ್ಷ ಡಾ.ಗುಡಗುಂಟಿ ವಿಠ್ಠಲ್ ಜೋಶಿ, ಚಿಕ್ಕಮಗಳೂರು ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್, ಮಹಾರಾಷ್ಟ್ರ ಘಟಕದ ಅಧ್ಯಕ್ಷ ಸೋಮಶೇಖರ ಜಮಶೆಟ್ಟಿ, ಗೋವಾ ಘಟಕದ ಅಧ್ಯಕ್ಷ ಡಾ.ಸಿದ್ದಣ್ಣ ಸಂಗಪ್ಪ ಮೇಟಿ ಮುಂತಾದ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ....

ರಾಯಚೂರು | ಬಾಣಂತಿ, ಮಗು ಸಾವು

ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ...

ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ...

ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ...

Download Eedina App Android / iOS

X