ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಬೆಟ್ಟ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ತಿಳಿಸಿದ್ದಾರೆ.
“ಈ ಮೊದಲು ಬೆಳಿಗ್ಗೆ 5.30ರಿಂದ ಸಂಜೆ 6ರವರೆಗೆ ಪ್ರವೇಶಕ್ಕೆ ಅವಕಾಶವಿತ್ತು. ಬೇಸಿಗೆ ರಜೆ ಪ್ರಾರಂಭವಾಗುತ್ತಿದೆ. ಹಾಗಾಗಿ ಸೂರ್ಯೋದಯ ಮತ್ತು ಸೂರ್ಯಾಸ್ತ ವೀಕ್ಷಣೆಗಾಗಿ ಪ್ರವಾಸಿಗರಿಗೆ ಹೆಚ್ಚಿನ ಕಾಲಾವಕಾಶ ಒದಗಿಸುವ ನಿಟ್ಟಿನಲ್ಲಿ ಸಮಯ ವಿಸ್ತರಿಸಲಾಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೇಲೂರಿನ ಚನ್ನಕೇಶವ ದೇಗುಲದ ಗೋಪುರಕ್ಕೆ ಬಡಿದ ಸಿಡಿಲು; ಪುರಾತತ್ವ ಇಲಾಖೆಗೆ ಮಾಹಿತಿ
“ನಂದಿಗಿರಿಧಾಮ ಸಮಗ್ರ ಅಭಿವೃದ್ಧಿ ಮತ್ತು ನಿರ್ವಹಣಾಸಮಿತಿ ಅಧ್ಯಕ್ಷರ ಆದೇಶದ ಮೇರೆಗೆ ಸಮಯ ವಿಸ್ತರಿಸಲಾಗಿದ್ದು, ಸೆಪ್ಟೆಂಬರ್ 30ರವರೆಗೆ ಈ ವಿಸ್ತರಣೆ ಅನ್ವಯ ಆಗಲಿದೆ” ಎಂದು ಅವರು ತಿಳಿಸಿದ್ದಾರೆ.