ಚಿಕ್ಕಬಳ್ಳಾಪುರ | ಎಂಎಲ್‌ಸಿ ಚುನಾವಣೆ ನೆಪ; ಸಾರ್ವಜನಿಕರ ಕಾರ್ಯಕ್ಕೆ ನಿರ್ಬಂಧಿಸಿದ ಅಧಿಕಾರಿಗಳು

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕೇಂದ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದ್ದು, ತಾಲೂಕು ಆಡಳಿತ ಯಂತ್ರಾಂಗವನ್ನು ಸ್ಥಗಿತಗೊಳಿಸಿ ಕಚೇರಿ ಪ್ರವೇಶ ದ್ವಾರಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಪಡಿಸಿರುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಾರ್ವಜನಿಕರ ಕೆಲಸಕ್ಕೆ ಅಡ್ಡಿಪಡಿಸಿದ್ದು, ಪ್ರಶ್ನಿಸಿದವರಿಗೆ ಅಧಿಕಾರಿಗಳು, ʼಜಿಲ್ಲಾಧಿಕಾರಿ ಆದೇಶ ಇದೆ. ಏನಾದರೂ ತುರ್ತು ಇದ್ದರೆ ನಮಗೆ ತಿಳಿಸಿʼ ಎನ್ನುತ್ತಿರುವುದಾಗಿ ತಿಳಿದುಬಂದಿದೆ.

ದಸಂಸ ಮುಖಂಡ ಜಿ ವಿ ಗಂಗಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗುಡಿಬಂಡೆ ಕ್ಷೇತ್ರದಲ್ಲಿ ಎಂಎಲ್‌ಸಿ ಚುನಾವಣೆ ನಡೆಯುತ್ತಿದೆ. ತಾಲೂಕು ಕಚೇರಿಯಲ್ಲೇ ಬೂತ್ ಅಳವಡಿಸಿದ್ದಾರೆ. ಈ ನೆಪವನ್ನೇ ಇಟ್ಟುಕೊಂಡು ತಾಲೂಕು ಆಡಳಿತ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ಕೇಳಲು ಹೋದರೆ ಚುನಾವಣೆ ಕರ್ತವ್ಯಕ್ಕೆ ಅಡ್ಡಿಯಾಗುತ್ತದೆ. ಇಲ್ಲಿಂದ ಹೋಗಿ, ಇಲ್ಲದಿದ್ದಲ್ಲಿ ಕಾನೂನು ಕ್ರಮ ಜರುಗಿಸುತ್ತೇವೆಂದು ಉಪ ತಹಶೀಲ್ದಾರ್‌ ಶೋಭಾ ಅವರು ಬೆದರಿಕೆಯೊಡ್ಡುತ್ತಿದ್ದಾರೆ” ಎಂದು ಆರೋಪಿಸಿದರು.

Advertisements
ಎಂಎಲ್‌ಸಿ 1
ಮೂಕ ಪ್ರೇಕ್ಷಕರಾಗಿ ಚುನಾವಣ ಪ್ರಚಾರಕ್ಕಾಗಿ ಕುಳಿತಿರುವ ರಾಜಕೀಯ ಮುಖಂಡರು

“ಕಚೇರಿ ಕೆಲಸಕ್ಕಾಗಿ ಬಂದ ಸಾರ್ವಜನಿಕರನ್ನು ನಾಳೆ ಬನ್ನಿ ಎಂದು ವಾಪಸ್‌ ಕಳುಹಿಸಿದ್ದಾರೆ. ಆದರೆ ನುಲಿಗುಂಬ ಗ್ರಾಮದ ರೈತರು ಕೇಳಿದ ಪಹಣಿಗಳನ್ನು ಅವರಿಗೆ ಕಾನೂನು ಬಾಹಿರವಾಗಿ ತರಿಸಿ ಕೊಡಿಸಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮುಟ್ಟಿನ ಅಂಧತ್ವ ಕಳೆದುಕೊಳ್ಳದ ಗೊಲ್ಲರಹಟ್ಟಿಗಳು; ಚಿಕ್ಕನಾಯಕನಹಳ್ಳಿಯಲ್ಲಿ ಮಗು, ಬಾಣಂತಿ ರಕ್ಷಣೆ

ಕಾನೂನು ಬಾಹಿರ ಸಾರ್ವಜನಿಕ ನಿರ್ಬಂಧತೆಯನ್ನು ಖಂಡಿಸಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಜಿ ವಿ ಗಂಗಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಆದ್ಯತೆಯ ಮೇರೆಗೆ ಸಾರ್ವಜನಿಕ ಸೇವೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X