ಚಿಕ್ಕಬಳ್ಳಾಪುರ | ಪೋಷಕರ ಆಯ್ಕೆ ನಮ್ಮ ಕೈಯ್ಯಲ್ಲಿಲ್ಲ: ಆರೋಗ್ಯದ ಆಯ್ಕೆ ನಮ್ಮ ಕೈಯ್ಯಲ್ಲಿದೆ: ಡಾ. ಸಿ.ಎಸ್. ಹಿರೇಮಠ್

Date:

Advertisements

ಹೆತ್ತವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾವ ಮಕ್ಕಳ ಕೈಯಲ್ಲಿಯೂ ಇರುವುದಿಲ್ಲ. ಆದರೆ ಬೆಳೆಯುವಾಗ, ಬೆಳೆದು ಬದುಕು ಕಟ್ಟಿಕೊಳ್ಳುವಾಗ ಉತ್ತಮ ಜೀವನ ಶೈಲಿ ಹೊಂದುವುದು, ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇರುತ್ತದೆ ಎಂದು ಸತ್ಯಸಾಯಿ ಮಾನವ ಅಭ್ಯುದಯ ವೈದ್ಯಕೀಯ ವಿಶ್ವವಿದ್ಯಾಲಯ ಹೃದ್ರೋಗ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಎಸ್.ಹಿರೇಮಠ್ ತಿಳಿಸಿದರು.

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ಪತ್ರಕರ್ತರ ಸಾಂಸ್ಕೃತಿಕ ಚಿಂತನಾ ಸಮ್ಮಿಲನದ ಭಾಗವಾಗಿ ಎರಡನೇ ತಿಂಗಳ ಕಾರ್ಯಕ್ರಮದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಸಂಬಂಧ ತಜ್ಞರ ಜತೆ ಸಂವಾದಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರು ಮತ್ತು ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘವು ಹುಣ್ಣಿಮೆ ಅಂಗವಾಗಿ ತಜ್ಞ ವೈದ್ಯರು ಮತ್ತು ಪತ್ರಕರ್ತರ ಜತೆ ಮುಖಾಮುಖಿ ಸಂವಾದ ಏರ್ಪಡಿಸಿ ಈ ಬಗ್ಗೆ ಸಾಕಷ್ಟು ಖಚಿತ ಮಾಹಿತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು.

Advertisements

ಸಂವಾದಕ್ಕೂ ಮುನ್ನ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎಸ್.ಹಿರೇಮಠ್, “ಕೊರೋನಾ ನಂತರದ ಕಾಲದಲ್ಲಿ ದೇಶದಲ್ಲಿ ಹೃದ್ರೋಗ ಸಮಸ್ಯೆ ಯುವಕರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯಸ್ತಂಭನ ಭಾರತದ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಹೋಗಲಾಡಿಸಲು ನಮ್ಮ ಸರಕಾರಗಳು, ಸಮಾಜ, ಮಠಮಾನ್ಯಗಳು ಮತ್ತು ಸಂಘ ಸಂಸ್ಥೆಗಳು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿವೆ. ಜನತೆ ಕೂಡ ಇದನ್ನು ಅರಿತು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗುವುದು ಅಗತ್ಯ ಎಂದರು.

ಆಧುನಿಕ ಜೀವನ ಶೈಲಿಯಿಂದಾಗಿ ಹಲವಾರು ರೋಗಗಳಿಗೆ ನಾವು ತುತ್ತಾಗುತ್ತಿದ್ದೇವೆ. ಹೃದ್ರೋಗಕ್ಕೆ ಪ್ರಧಾನವಾಗಿ ಹೆಚ್ಚಿನ ರಕ್ತದೊತ್ತಡ, ಹೆಚ್ಚಿನ ಕೊಲೆಸ್ಟ್ರಾಲ್, ಧೂಮಪಾನ, ಮಧುಮೇಹ, ಕರಿದ ಪದಾರ್ಥಗಳು ಮತ್ತು ಕ್ರಿಯಾಶೀಲವಲ್ಲದ ಜೀವನ ಶೈಲಿ ಕಾರಣವಾಗಿದೆ. ಇದನ್ನು ತಪ್ಪಿಸಬೇಕಾದರೆ ಧ್ಯಾನ, ಯೋಗ, ನಿತ್ಯ ವ್ಯಾಯಾಮ, ಜಂಕ್ ಫುಡ್ ರಹಿತ ಪೌಷ್ಟಿಕ ಆಹಾರ ಸೇವನೆ, ಕಾಲಕಾಲಕ್ಕೆ ತಜ್ಞ ವೈದ್ಯರಿಂದ ತಪಾಸಣೆಯ ಅಗತ್ಯವಿದೆ ಎಂದರು.

WhatsApp Image 2025 08 11 at 11.26.29 AM

ಮುದ್ದೇನಹಳ್ಳಿಯ ಸದ್ಗುರು ಮಧುಸೂಧನ್ ಸಾಯಿ ಮಾನವ ಅಭ್ಯುದಯ ಆಸ್ಪತ್ರೆಯಲ್ಲಿ ಪತ್ರಕರ್ತರಿಗಾಗಿ ಒಂದು ದಿನ ಹೃದ್ರೋಗ ತಪಾಸಣೆ ಮಾಡಲು ವ್ಯವಸ್ಥೆ ಮಾಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಿಕೊಟ್ಟರೆ ಆದಷ್ಟು ಶೀಘ್ರವೇ ಇದಕ್ಕೆ ಬೇಕಾದ ಕ್ರಮಗಳನ್ನು ಮುಗಿಸಲಾಗುವುದು. ಈ ವೇಳೆ ಹೃದಯಾಘಾತ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಪೂರ್ವ ಕೈಗೊಳ್ಳಬೇಕಾದ ತಪಾಸಣಾ ಕ್ರಮಗಳ ಬಗ್ಗೆ ತರಬೇತಿ ನೀಡಲಾಗುವುದು ಎಂದರು.

ಹೃದಯಾಘಾತಕ್ಕೆ ಒಳಗಾಗುವ ಯಾರೇ ಆಗಲಿ, ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಈ ಘಟನೆ ಆದ 3 ಗಂಟೆಯ ಒಳಗೆ ಸೂಕ್ತ ಮತ್ತು ಸಮರ್ಥ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ದರೆ ಮಾತ್ರ ಅಮೂಲ್ಯ ಜೀವ ಉಳಿಸಬಹುದು. ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕೂಡ ಹೃದಯಾಘಾತಕ್ಕೆ ಚಿಕಿತ್ಸೆ ನೀಡಲಾಗುವುದು.ಈ ಭಾಗದ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೋರಿದರು.

ಮಕ್ಕಳ ಹೃದ್ರೋಗ ತಜ್ಞೆ ಡಾ.ಆನಿ ಮಾತನಾಡಿ, ಮಕ್ಕಳಲ್ಲಿ ವಂಶಪಾರಂಪರ್ಯವಾಗಿ ಬರುವ ಹೃದ್ರೋಗದ ಸಮಸ್ಯೆ, ಕಾರಣ ಪರಿಣಾಮಗಳ ಬಗ್ಗೆ ತಿಳಿಸಿಕೊಟ್ಟರು.

ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಂ.ಜಯರಾಮ್ ಮಾತನಾಡಿ, “ಬಿಡುವಿಲ್ಲದ ವೇಳೆಯಲ್ಲಿಯೂ ನಮ್ಮ ಮನವಿ ಮೇರೆಗೆ ಹುಣ್ಣಿಮೆ ಕಾರ್ಯಕ್ರಮಕ್ಕೆ ಬಂದು ಹೃದ್ರೋಗ ಸಂಬಂಧಿ ಖಾಯಿಲೆಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿ,ನಂತರ ನಡೆದ ಸಂವಾದದಲ್ಲಿ ಪತ್ರಕರ್ತರು ಎತ್ತಿದ ಹಲವು ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರ ನೀಡಿದ್ದಾರೆ. ಇಬ್ಬರೂ ವೈದ್ಯರಿಗೆ ಸಂಘವು ಆಭಾರಿಯಾಗಿದೆ” ಎಂದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ಧನ ಪೂಜಾರಿ ಹೇಳಿಕೆ

ಹುಣ್ಣಿಮೆ ಕಾರ್ಯಕ್ರಮದಲ್ಲಿ ಹಾಡುಗಾರಿಕೆ ನಡೆಸಿಕೊಟ್ಟ ಪ್ರೌಢಶಾಲೆ ಶಿಕ್ಷಕ ನಾರಾಯಣಸ್ವಾಮಿ, ಜನಕಲಾರಂಗದ ವೆಂಕಟರಾಮು, ನಿಲುವುರಾತಹಳ್ಳಿ ನಾರಾಯಣಸ್ವಾಮಿ ಅವರನ್ನು ಇದೇ ವೇಳೆ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಮುನಿರಾಜು ಎಂ ಅರಿಕೆರೆ ಮಾಡಿದರೆ, ಸದಾಶಿವ ಬಿ ಆರಾಧ್ಯ ಸ್ವಾಗತಿಸಿ ವಂದಿಸಿದರು. ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ, ಖಜಾಂಚಿ ರವಿಕುಮಾರ್, ಹಿರಿಯ ಪತ್ರಕರ್ತರು, ಸಂಘದ ಎಲ್ಲ ಸದಸ್ಯರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X