- ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
- ಶ್ರೀನಿವಾಸ ಸಾಗರಕ್ಕೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು
ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.
ಬೆಂಗಳೂರಿನ ಲಿಂಗರಾಜಪುರದ ಪೂಜಾ (21), ನಾಗವಾರ ಬಳಿಯ ಅಮರಜ್ಯೋತಿ ನಗರದ ಇಮ್ರಾನ್ ಖಾನ್ (21), ಯಲಹಂಕದ ರಾಧಿಕಾ (21) ಮೃತ ದುರ್ದೈವಿಗಳು.
ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿ.ಫಾರ್ಮ್ ಓದುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ಪೈಕಿ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದು, ಚನ್ನರಾಮ, ಸುನೀತಾ ಮತ್ತು ವಿಕಾಸ್ ಎಂಬುವವರು ಅಪಾಯದಿಂದ ಪಾರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮನಗರ | ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಪುನೀತ್ ಕೆರೆಹಳ್ಳಿ ಬಂಧನಕ್ಕೆ ಆಗ್ರಹ
ಜಲಾಶಯದ ಹಿನ್ನೀರಿಗೆ ಇಳಿದಾಗ ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಜಲಾಶಯದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಪೂಜಾ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.