ಚಿಕ್ಕಬಳ್ಳಾಪುರ | ನೀರಿನ ಗ್ಯಾರಂಟಿ ಕೊಡುವವರಿಗೆ ಮತ ನೀಡಿ: ಆಂಜನೇಯ ರೆಡ್ಡಿ

Date:

Advertisements

ಸುಮಾರು 15 ವರ್ಷಗಳಿಂದ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಭರವಸೆಗಳು ಬಿಟ್ಟರೆ ಅಗತ್ಯವಿರುವ ನೀರಾವರಿ ಸೌಲಭ್ಯ ದಕ್ಕಿಲ್ಲ. ಹಾಗಾಗಿ ನೀರಿನ ಗ್ಯಾರಂಟಿ ಕೊಡುವ ವ್ಯಕ್ತಿಗೆ ಮತ ನೀಡಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಕರೆಕೊಟ್ಟರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, “2009ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳು ಜಲಮೂಲಗಳ ಸಂರಕ್ಷಣೆ, ರೈತರ ಹೊಲ ಗದ್ದೆಗಳಿಗೆ ನೀರು ಕೊಡುವ ಬಿಟ್ಟಿ ಭರವಸೆಗಳನ್ನು ನೀಡಿದ್ದರು. ಆದರೆ ಇವತ್ತಿನವರೆಗೆ ಯಾವುದೇ ಪರಿಹಾರ ಕಂಡುಕೊಳ್ಳುವ, ಪರಿಹಾರ ಕೊಡುವ ಕೆಲಸವಾಗಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕ್ಷೇತ್ರದ ಪ್ರತಿಯೊಬ್ಬರ ನಾಗರಿಕನ ಮೇಲೂ ಈ ಜವಾಬ್ದಾರಿ ಇದೆ. ಅಭ್ಯರ್ಥಿಗಳು ಮತ ಕೇಳಲು ಬಂದಾಗ ನೀರಾವರಿ ಕುರಿತು ಗಟ್ಟಿಯಾಗಿ ಪ್ರಶ್ನೆ ಮಾಡಿ, ಖಚಿತ ಭರವಸೆಯನ್ನು ಪಡೆಯಿರಿ. ವಿಫಲರಾದಲ್ಲಿ ಮುಂದಿನ ಚುನಾವಣೆಯಲ್ಲಿ ಬರಬಾರದು ಎಂದು ಹೇಳಬೇಕು. ಯಾರೇ ಮತ ಕೇಳಲು ಬಂದಾಗ ಕತ್ತಿನ ಪಟ್ಟಿ ಹಿಡಿದು ಕೇಳಿ” ಎಂದು ಕರೆಕೊಟ್ಟರು.

Advertisements

“ಅವೈಜ್ಞಾನಿಕ ನೀರಾವರಿ ಯೋಜನೆಗಳಿಂದ ಹಣ ವ್ಯಯವಾಯಿತೇ ವಿನಃ ಯಾವುದೇ ಉಪಯೋಗವಾಗಲಿಲ್ಲ. ಬಾಣಲೆಯಿಂದ ಬೆಂಕಿಗೆ ಬಿದ್ದ ಪರಿಸ್ಥಿತಿ ನಮ್ಮ ಜಿಲ್ಲೆಗೆ ಬಂದಿದೆ” ಎಂದು ಬೇಸರಗೊಂಡರು.

“ಯುರೇನಿಯಂ, ಆರ್ಸೆನಿಕ್‌ನಂತಹ ವಿಷಕಾರಿ ನೀರು ನಮ್ಮ ಜಿಲ್ಲೆಗೆ ಪೂರೈಕೆಯಾಗುತ್ತಿದೆ. ಇದರಿಂದ ಪ್ಯಾರಾಲಿಸಿಸ್, ಮಿದುಳಿನ ಸಮಸ್ಯೆ ಇತ್ಯಾದಿ ಸಮಸ್ಯೆಗಳು ಉಲ್ಬಣವಾಗುತ್ತಿವೆ. ಆದ್ದರಿಂದ, ಕೇಂದ್ರ ಸರ್ಕಾರ ಕೂಡಲೇ ಗಂಭೀರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಫಲವತ್ತಾದ ಭೂಮಿ ಇರುವವರಿಗೆ ನೀರಿಲ್ಲದೆ ಲಕ್ಷಾಂತರ ಎಕರೆ ಭೂಮಿ ಪಾಳುಬಿದ್ದಿದೆ. ಆರ್ಥಿಕವಾಗಿ ಸುಧಾರಣೆ ಹೊಂದಿರುವ ರೈತರು ಮಾತ್ರ ಕೊಳವೆ ಬಾವಿ ಮೊರೆಹೋಗುತ್ತಾರೆ. ಆದರೆ, ರೈತರಿಗೆ ಶಾಶ್ವತ ನೀರಾವರಿ ಭದ್ರತೆ ಇಲ್ಲ. ಕುಡಿಯಲು ಯೋಗ್ಯವಿಲ್ಲ, ಕೃಷಿಗೂ ಯೋಗ್ಯವಿಲ್ಲ” ಎಂದು ಕಳವಳ ವ್ಯಕ್ತಪಡಿಸಿದರು.

“ಯುರೇನಿಯಂ, ಆರ್ಸೆನಿಕ್ ಯುಕ್ತ ನೀರಿನಿಂದ ಮಲ್ಟಿ ಆರ್ಗನ್ ಡ್ಯಾಮೇಜ್ ಆಗುತ್ತದೆ ಎಂದು ಬೆಂಗಳೂರಿನ ಎಂ2ಎಂ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದೆ. ಆದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ” ಎಂದರು.

ಕೇಂದ್ರ ಸರ್ಕಾರದ Drought Manual ಅನುಸಾರ ಬರ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ನೀರಾವರಿ ಯೋಜನೆಯ ಸಿವೆಜ್ ಮ್ಯಾನುವಲ್ ಅನುಸಾರ ಪರಿಹಾರ ಶಾಶ್ವತ ನೀರಾವರಿ ಯೋಜನೆ ತರಲು ಏಕೆ ಸಾಧ್ಯವಿಲ್ಲ. ಸರ್ಕಾರದ ಈ ರೀತಿಯ ವರ್ತನೆ ಜಿಲ್ಲೆಗೆ ಆಗಿರುವ ಘೋರ ಅನ್ಯಾಯ. CPHEEO(Central Public Health Engineering Organisation) Guideline ಪ್ರಕಾರ ಪರಿಹಾರ ಕೊಡಿ” ಎಂದು ಒತ್ತಾಯಿಸಿದರು.

“Guideline ಪ್ರಕಾರ ಪರಿಹಾರ ಕೊಡಲೇಬೇಕು. ನೀರಿನ ಸಮಸ್ಯೆಗೆ ಕಾಲಮಿತಿ ಇಟ್ಟುಕೊಂಡು ಜಿಲ್ಲೆಗೆ ಸೂಕ್ತ ಸಮಯಕ್ಕೆ ಕೃಷಿ ಮತ್ತು ಕುಡಿಯುವ ನೀರಾವರಿ ಯೋಜನೆ ತರಬೇಕು. ಇದರಿಂದ ನಮ್ಮ ಜಿಲ್ಲೆಗಳ ಉಳಿವು ಸಾಧ್ಯ. ಪಕ್ಕದ ಜಿಲ್ಲೆಗೆ ಉತ್ತಮ ಗುಣಮಟ್ಟದ ತರಕಾರಿ ರಫ್ತು ಮಾಡಲು ಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ನನ್ನ ಮತ ನೀರಿಗೆ :‌ “ಜಿಲ್ಲೆಯ ಅಳಿವು ಉಳಿವು ನೀರಿನ ಮೇಲಿದೆ ಎಂಬುದನ್ನು ಎಲ್ಲ ಮತದಾರರು, ಮತದಾರ್ತಿಯರು ಅರಿತು ಪ್ರಜ್ಞಾವಂತರಾಗಿ, ಬದ್ಧತೆಯಿಂದ ಮತಚಲಾವಣೆಗೆ ಮುಂದಾಗಬೇಕು” ಎಂದು ಕರೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮಮತಾ, ಹರೀಶ್, ಶ್ರೀರಾಮೆಗೌಡ, ನಾರಾಯಣ ಸ್ವಾಮಿ, ಕೃಷ್ಣಪ್ಪ, ಸುಷ್ಮಾ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X