ಚಿಕ್ಕಬಳ್ಳಾಪುರ | ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಕೆ ವಿ ನಾಗರಾಜ್‌ ಬದ್ಧತೆ ಎಲ್ಲಿತ್ತು?: ಕೋಚಿಮುಲ್ ನಿರ್ದೇಶಕ

Date:

Advertisements

ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಇವರ ಬದ್ಧತೆ ಎಲ್ಲಿತ್ತು? ಕೆ ವಿ ನಾಗರಾಜ್‌ ಅವರಿಗೆ ನೈತಿಕತೆ ಇಲ್ಲ. ಚುನಾವಣೆ ಬೇಕಾ? ವಿಭಜನೆ ಬೇಕಾ ಎನ್ನುವುದನ್ನು ನಾಗರಾಜ್ ಸ್ಪಷ್ಟಪಡಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್ ಸಿ ವೆಂಕಟೇಶ್ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “1989ರಿಂದ 1992ರವರೆಗೆ ಶಿವಾರೆಡ್ಡಿ ಕೋಚಿಮುಲ್ ಅಧ್ಯಕ್ಷರಾಗಿದ್ದರು. ಆ ವೇಳೆಯಲ್ಲಿ ಕೆ ವಿ ನಾಗರಾಜ್ ಚಿಕ್ಕಬಳ್ಳಾಪುರದಿಂದ ನಿರ್ದೇಶಕರಾಗಿದ್ದರು. ಆಗ 121ರ ಕಾಯ್ದೆಯ ಪ್ರಕಾರ ಎರಡು ವರ್ಷಗಳ ಕಾಲ ಆಡಳಿತ ಮಂಡಳಿಯ ಅಧಿಕಾರ ಅವಧಿಯನ್ನು ವಿಸ್ತರಿಸಲಾಗಿತ್ತು” ಎಂದರು.

“ಕಾಡೇನಹಳ್ಳಿ ನಾಗರಾಜ್ ಅಧ್ಯಕ್ಷರಾಗಿದ್ದ ವೇಳೆಯೂ ಕೆ ವಿ ನಾಗರಾಜ್ ನಿರ್ದೇಶಕರಾಗಿದ್ದರು. ಆಗಲೂ ಆರು ತಿಂಗಳು ಅಧಿಕಾರದ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗ ನಮ್ಮ ಅವಧಿಯಲ್ಲಿ ಕೇವಲ ಎರಡೇ ತಿಂಗಳು ಅಧಿಕಾರ ವಿಸ್ತರಿಸಲಾಗಿದೆ. ಈಗ ಅಧಿಕಾರ ವಿಸ್ತರಿಸಬಾರದು ಎನ್ನುತ್ತಾರೆ. ಈ ಹಿಂದೆ ಎರಡು ಬಾರಿ ವಿಸ್ತರಣೆ ಆದಾಗ ಇವರ ನೈತಿಕತೆ ಎಲ್ಲಿ ಹೋಗಿತ್ತು” ಎಂದು ಟೀಕಿಸಿದರು.

Advertisements

“ಐದು ಬಾರಿ ನಿರ್ದೇಶಕರಾಗಿದ್ದಾರೆ, ಅನುಭವಸ್ಥರು. ಆದರೂ ಮೆಗಾ ಡೇರಿಯಲ್ಲಿ ಹಾಲಿನ ಪ್ಯಾಕೆಟ್ ಘಟಕ ನಿರ್ಮಾಣ ಮಾಡಲಿಲ್ಲ. ಚುನಾವಣೆಯಲ್ಲಿ ಸೋತ ಕೂಡಲೇ ವಿಭಜನೆ ಬೇಕು ಎನ್ನುತ್ತಿದ್ದಾರೆ. ಜನರನ್ನು ಮತ್ತು ಡೆಲಿಗೇಷನ್‌ಗಳನ್ನು ದಾರಿತಪ್ಪಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಚಿಂತಾಮಣಿ ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಮಾತನಾಡಿ, “ಕೋಚಿಮುಲ್ ನಿರ್ದೇಶಕರ ಅಧಿಕಾರಾವಧಿ ವಿಸ್ತರಣೆ ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ. ವಿಸ್ತರಣೆಗೆ ಸಹಕಾರಿ ವಲಯದ ಕಾನೂನಿನಲ್ಲಿ ಅವಕಾಶವಿದೆ” ಎಂದು ಹೇಳಿದರು.

“ಕೋಚಿಮುಲ್‌ಗೆ ಆಡಳಿತಾಧಿಕಾರಿ ನೇಮಕ ಮಾಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಬಿಜೆಪಿ ಸರ್ಕಾರವು ಕೋಚಿಮಲ್ ವಿಭಜನೆಯಲ್ಲಿ ಅವೈಜ್ಞಾನಿಕವಾಗಿ ಮಾಡಿದ ಕಾರಣ ನಾವು ನ್ಯಾಯಾಲಯದ ಮೆಟ್ಟಿಲೇರಿದೆವು. ನಿರ್ದೇಶಕರ ಅಧಿಕಾರದ ಅವಧಿ ಐದು ವರ್ಷ. ಆದರೆ ಆ ಅವಧಿಯನ್ನೇ ಮೊಟಕುಗೊಳಿಸಲು ಮುಂದಾಗಿದ್ದರು” ಎಂದು ದೂರಿದರು.

“ಬಿಜೆಪಿಗರಿಗೆ ವಿಭಜನೆ ಮಾಡಬೇಕು ಎನ್ನುವ ಸದುದ್ದೇಶ ಇದ್ದಿದ್ದರೆ ಐದು ವರ್ಷದ ಅವಧಿಗೆ ನಿರ್ದೇಶಕರನ್ನಾಗಿ ನಮ್ಮನ್ನು ಮುಂದುವರಿಸಬಹುದಿತ್ತು. ಮಾಜಿ ಸಚಿವ ಡಾ ಕೆ ಸುಧಾಕರ್ ಅವರಿಗೆ ಈ ವಿಚಾರವಾಗಿ ಒಕ್ಕೂಟದ ಮಾಜಿ ಅಧ್ಯಕ್ಷ ಕೆ ವಿ ನಾಗರಾಜ್ ತಿರುಚಿ ಹೇಳಿದ್ದಾರೆ” ಎಂದು ಆರೋಪಿಸಿದರು.

“ಕೆ ವಿ ನಾಗರಾಜ್ ಅವರಿಗೆ ಅಧಿಕಾರದಾಹ. ಒಕ್ಕೂಟ ವಿಭಜನೆ ಆಗಬೇಕು. ತಾನು ಅಧ್ಯಕ್ಷ ಆಗಬೇಕು ಎನ್ನುವುದಷ್ಟೇ ಅವರ ಗುರಿ. ತಾನು ಅಧಿಕಾರಕ್ಕೆ ಬರುವವರೆಗೂ ಮೆಗಾ ಡೇರಿಯಲ್ಲಿ ಹಾಲಿನ ಪ್ಯಾಕೆಟ್ ಘಟಕಕ್ಕೆ ಡಿಪಿಆರ್ ಮಾಡಿರಲಿಲ್ಲ” ಎಂದರು.

“ಪನ್ನೀರ್ ಘಟಕ, ಟೆಟ್ರಾ ಪ್ಯಾಕ್ ಘಟಕ ಬಿಟ್ಟರೆ ಲಾಭದಾಯಕ ಉತ್ಪನ್ನಗಳ ತಯಾರಿಕೆಗೆ ಯಾವುದೇ ಘಟಕವನ್ನೂ ಮಾಡಲಿಲ್ಲ. ಇದರಿಂದ ಮೆಗಾ ಡೇರಿಯಲ್ಲಿ ಒಂದು ಲೀಟರ್ ಹಾಲಿಗೆ ₹5 ನಷ್ಟವಾಗುತ್ತಿದೆ. ಹಾಲಿನ ಪ್ಯಾಕೆಟ್ ಘಟಕ ಮಾಡಿದ್ದರೆ ಅನುಕೂಲವಾಗುತ್ತಿತ್ತು” ಎಂದು ಹೇಳಿದರು.

“ಈಗ ಹಾಲಿನ ಪ್ಯಾಕೆಟ್ ಘಟಕ ನಿರ್ಮಾಣಕ್ಕೆ ₹130 ಕೋಟಿ ವೆಚ್ಚದ ಡಿಪಿಆರ್‌ಗೆ ಅನುಮೋದನೆ ದೊರೆತಿದೆ. ಸರ್ಕಾರ, ಸಹಕಾರ ಇಲಖೆಯಿಂದ ಅನುಮತಿ ಪಡೆದು ಟೆಂಡರ್ ಆರಂಭಿಸಲಾಗುವುದು. ಮುಂದಿನ ಎರಡು ವರ್ಷಗಳಲ್ಲಿ ಘಟಕ ನಿರ್ಮಾಣವಾಗಲಿದೆ. ಇದರಿಂದ ಒಕ್ಕೂಟ ಆರ್ಥಿಕವಾಗಿ ಬಲಿಷ್ಠವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ತೆಂಗಿನ ಬೆಳೆಗೂ ಸರಿಯಾದ ಪೋಷಕಾಂಶ ಒದಗಿಸಿ: ಟಿ ಬಿ ಜಯಚಂದ್ರ

“ಸಚಿವ ಡಾ. ಎಂ ಸಿ ಸುಧಾಕರ್ ಅವರು ಕೋಚಿಮುಲ್ ವಿಭಜನೆಯ ಬಗ್ಗೆ ಒಲವು ಮತ್ತು ಬದ್ಧತೆ ಹೊಂದಿದ್ದಾರೆ. ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಲಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯಾದ ಮೇಲೆ ಅಕ್ರಮ ನಡೆದಿದೆಯೊ ಇಲ್ಲವೋ ಎನ್ನುವುದು ತಿಳಿಯಲಿದೆ” ಎಂದರು.

ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಮುಖಂಡರಾದ ಸು ಧಾ ವೆಂಕಟೇಶ್, ಕೆ ಎಂ ಮುನೇಗೌಡ, ವೆಂಕಟ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X