ಚಿಕ್ಕಮಗಳೂರು | ಆದಿವಾಸಿಗಳ ಬದುಕು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು: ಚೇತನ್ ಅಹಿಂಸಾ

Date:

ಆದಿವಾಸಿ ಸಮುದಾಯಗಳಿಗೆ ನ್ಯಾಯ ಸಿಗಬೇಕು. ಸಾಂಸ್ಕೃತಿಕ ಆದಿವಾಸಿ ಆಧ್ಯಾತ್ಮಿಕ ವಿಷಗಳನ್ನು ಅರಿಯಬೇಕು ಎಂದು ಆದಿವಾಸಿ ಜನರ ಬದುಕು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು ಎಂದು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಹೇಳಿದರು.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿ, “ಇತಿಹಾಸವನ್ನು ಅರ್ಥ ಮಾಡಿಕೊಳ್ಳಬೇಕು ಅಂತ ಬಾಬಾ ಸಾಹೇಬರು ಒಂದು ಮಾತು ಹೇಳ್ತಾರೆ, ಇಂದಿಗೆ 2 ಲಕ್ಷ ವರ್ಷಗಳ ಇತಿಹಾಸ ನೋಡುತ್ತಿದ್ದೇವೆ. ಇದರಲ್ಲಿ ಮುಕ್ತವಾಗಿ ಮೂಲ ನಿವಾಸಿಗಳು ಅಥವಾ ಆದಿವಾಸಿಗಳು ಇದ್ದಾರೆ. ಇವರು ಇಂದಿಗೂ ತಳಮಟ್ಟದಲ್ಲಿ ಬದುಕುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಅಮೆರಿಕ ಅನ್ನೋ ದೇಶ ಶ್ರೀಮಂತವಾಗಿದೆ ಎಂದರೆ, ಆದಿವಾಸಿ ಸಮುದಾಯಗಳ ಭೂಮಿಗಳನ್ನು ಕಿತ್ತುಕೊಂಡು ನರಮೇಧಗಳನ್ನಾಗಿ ಮಾಡಿ ಅವರ ಕೈಯಲ್ಲಿ ಕೆಲಸ ಮಾಡಿಸಿಕೊಂಡು
ಅವರ ಭೂಮಿಯನ್ನು ಬಂಡವಾಳ ಶಾಹಿಗಳು ಹಾಗೂ ಕಾರ್ಪೊರೇಟರ್ ಕಂಪನಿಗಳಿಗೆ ನೀಡಿದ್ದಾರೆ” ಎಂದು ಹೇಳಿದರು.

ಆದಿವಾಸಿ ಸಮಾಗಮ 1

“10 ಸಾವಿರ ವರ್ಷಗಳಿಂದ ಪ್ರತಿರೋಧ ಆಗಿದೆ. ಬ್ರಾಹ್ಮಣ ಅಸಮಾನತೆ, ಹಿಂದೂಗಳ ಅಸಮಾನತೆ, ಭ್ರಷ್ಟಾಚಾರ, ಜಾತಿ, ವರ್ಗ, ಲಿಂಗ ತಾರತಮ್ಯ ಪ್ರಸ್ತುತ ದಿನದಲ್ಲಿ ಹೆಚ್ಚಾಗಿದೆ. ದಲಿತ, ಪ್ರತಿರೋಧವಾಗಿ ಪಾಪಾ ಪುಣ್ಯ ಇಲ್ಲದಂತಾಗಿದೆ” ಎಂದು ಹೇಳಿದರು.

“ಬಾಬಾ ಸಾಹೇಬ್, ಬಸವಣ್ಣ,‌ ಬುದ್ಧ ಅವರ ತತ್ವದೊಂದಿಗೆ ಇರಬೇಕಾಗಿದೆ. ರಾಜ್ಯ ಸರ್ಕಾರಗಳು ದಲಿತ ಆದಿವಾಸಿಗಳ ₹11 ಸಾವಿರ ಕೋಟಿ ಅನುದಾನವನ್ನು ವ್ಯಯ ಮಾಡುತ್ತಿದ್ದಾರೆ. ದಲಿತ, ಆದಿವಾಸಿಗಳಿಗೆ ಮೀಸಲಿಡಬೇಕಾದ ಅನುದಾನವನ್ನು ವ್ಯರ್ಥ ಮಾಡುತ್ತಿದ್ದಾರೆ. ಮೀಸಲಾತಿಗಳನ್ನು ಬಳಸದೆ ಜನರಿಗೆ ಮಣ್ಣೆರಚುತ್ತಿದ್ದಾರೆ” ಎಂದರು.

“ಹಾಲು ಮತದ ಕುರುಬ, ಮತ್ತಿ ಕುರುಬ ಇವರನ್ನೆಲ್ಲ ಎಸ್‌ಟಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ದಿಡ್ಡಳ್ಳಿ ಹೋರಾಟದಲ್ಲಿ ಆದಿವಾಸಿಗಳ ಗುಡಿಸಲು ಕಿತ್ತು ಎಸೆದರು. ಅದರೂ ನಿರಂತರ ಹೋರಾಟದಿಂದ ಅವರ ಬದುಕು ಕಟ್ಟಿಕೊಳ್ಳಲು ಅವಕಾಶ ಸಿಕ್ಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್

“ಆದಿವಾಸಿ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ಹಿಡಿಯಬೇಕು. ಇತ್ತೀಚೆಗೆ ಬಂದಿರುವ ಕಾಂತಾರ ಸಿನಿಮಾವನ್ನು ಹಿಂದೂ ಸಂಸ್ಕೃತಿಯೆಂದು ಹೇಳಿದರು. ಆದರೆ ಅದು ಪಂಜುರ್ಲಿ ಎನ್ನುವ ದೈವ. ಆ ದೈವಕ್ಕೆ ಆದಿವಾಸಿಗಳ 5 ಸಾವಿರ ವರ್ಷಗಳ ಇತಿಹಾಸವಿದೆ. ಸಮಾನತೆ, ನ್ಯಾಯ, ವೈಜ್ಞಾನಿಕತೆ ಮೂರು ಮುಖ್ಯವಾದ ಅಂಶವಾಗಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...