ಚಿಕ್ಕಮಗಳೂರು | ಆನೆಗಳ ಹಾವಳಿ; ಸುತ್ತಲಿನ ಗ್ರಾಮಸ್ಥರಲ್ಲಿ ಭೀತಿ

Date:

Advertisements

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಸಮೀಪದಲ್ಲಿರುವ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕೊರಲುಕೊಪ್ಪ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಆಜುಬಾಜಿನಲ್ಲಿ ತುಂಗಭದ್ರಾ ನೀರು ಹರಿಯುವುದರಿಂದ ನೀರಿನ ದಡದಲ್ಲಿ ಆನೆಗಳು ಯತೇಚ್ಛವಾಗಿವೆ. ಮುತ್ತೋಡಿ ಅಭಯಾರಣ್ಯಗಳಿಂದ ವಲಸೆ ಬಂದು ಈಗ ಊರಿನೊಳಗೆ ನುಗ್ಗುತ್ತಿವೆ.

“ಕಾಡಿನಲ್ಲಿ ಆನೆಗಳಿಗೆ ಆಹಾರವಿಲ್ಲದ ಕಾರಣ, ಆಹಾರ ಹುಡುಕಿಕೊಂಡು ನಾಡಿನೊಳಗೆ ನುಗ್ಗುತ್ತಿವೆ. ಬೆಳೆದಿರುವ ಬೆಳೆಗಳನ್ನು ಸಂಪೂರ್ಣವಾಗಿ ನಾಶಮಾಡುತ್ತಿವೆ. ಮೊದಲು ಆನೆ ಎನ್ನುವ ಸುಳಿವೇ ಇರಲಿಲ್ಲ. ಈಗ 2 ವರ್ಷದಿಂದ ಆನೆಗಳ ಹಾವಳಿ ಜಾಸ್ತಿ ಆಗಿದೆ” ಎಂದು ಸ್ಥಳೀಯ ನಿವಾಸಿ ಸುನಿಲ್ ಹಾಗೂ ತಮ್ಮಣ್ಣ ಈ ದಿನ.ಕಾಮ್‌ನೊಂದಿಗೆ ಅವಲತ್ತುಕೊಂಡಿದ್ದಾರೆ.

ಆನೆಗಳ ಹಾವಳಿ 1

ಕೊರಲು ಕೊಪ್ಪ ಗ್ರಾಮದ ನಿವಾಸಿ ಕೃಷ್ಣಮೂರ್ತಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ. ಸ್ಥಳಕ್ಕೆ ಧಾವಿಸಿ ಕೂಡಲೇ ಸಿಡಿಮದ್ದು, ಪಟಾಕಿ ಹಚ್ಚುತ್ತಾರೆ. ಆದರೂ ಕೂಡ ಆನೆಗಳು ಹೆದರುವುದಿಲ್ಲ. ಆನೆಗಳು ಭಯಬೀಳದೆ ಹೋದಾಗ ಕಾಡಿಗೆ ಓಡಿಸುತ್ತಾರೆ. ಆದರೆ, ಮರಳಿ ರಸ್ತೆ ಬದುಗಳಿಗೆ ಬರುತ್ತವೆ. ನಿಂಗಪುರದಿಂದ ಉಂಬಲೇಬೈಲುವರೆಗೂ ಆನೆಗಳು ಬರದಂತೆ ಆನೆಗಳ ಹೊಂಡ(ಟ್ರಂಚ್)ಗಳನ್ನು ತೋಡಿದ್ದಾರೆ. ಇದೇ ರೀತಿಯಲ್ಲಿ ನಮ್ಮ ಗ್ರಾಮಗಳ ಕಡೆಗೆ ನಿರ್ಮಾಣ ಮಾಡಿದರೆ ಅನುಕೂಲವಾಗುತ್ತದೆ. ಇಲ್ಲವಾದರೆ ಆನೆಗಳು ಊರೊಳಗೆ ನುಗ್ಗಿ ಬರುತ್ತವೆ” ಎಂದು ಕಳವಳ ವ್ಯಕ್ತಪಡಿಸಿದರು.

Advertisements

ಆನೆಗಳ ಹಾವಳಿ

“ಅಡಕೆ, ಕಾಫಿ ಬೆಳೆ ಬೆಳೆಯಲು 5-10 ವರ್ಷ ಬೇಕು. ಭತ್ತ ಹಾಗೂ ಬಾಳೆ ಬೆಳೆಗಳು ಬೆಳೆದು ನಿಂತಿದ್ದು, ಫಸಲು ನೋಡುವ ಮುನ್ನವೇ ಆನೆಗಳು ಬೆಳೆಗಳನ್ನು ಒಂದೇ ಕ್ಷಣಕ್ಕೆ ನಾಶ ಮಾಡುತ್ತಿವೆ. ಇದಕ್ಕೆ ಸರ್ಕಾರ ಆದಷ್ಟು ಬೇಗ ಆನೆಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಉಂಟಾಗಿರುವ ಬೆಳೆನಷ್ಟಕ್ಕೆ ಪರಿಹಾರ ಕಟ್ಟಿಕೊಡಬೇಕು” ಎಂದು ವಿಠಲ್ ಹೆಗ್ಡೆ ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

ಆನೆಗಳ ಹಾವಳಿ

ಮಕ್ಕಳು ಬೆಳಿಗ್ಗೆ ಶಾಲೆಗೆ ತೆರಳಬೇಕೆಂದರೆ 2 ರಿಂದ 3 ಕಿಮೀ ದೂರವಿರುವ ಬಸ್‌ ನಿಲ್ದಾಣಕ್ಕೆ ಕ್ರಮಿಸಬೇಕು. ಸಂಜೆ ಅಯಿತೆಂದರೆ ರಸ್ತೆಯಲ್ಲಿ ಆನೆಗಳು ಸಂಚಾರ ಮಾಡುತ್ತಿರುತ್ತವೆ. ನಾವು ಹೇಗೆ ರಸ್ತೆಗಳಲ್ಲಿ ಓಡಾಡುವುದು. ಮಕ್ಕಳಿಗೆ ಪ್ರಾಣಾಪಾಯವಾಗುವ ಸಾಧ್ಯತೆಗಳಿವೆ” ಎಂದು ಹೊಸೂರು ಗ್ರಾಮದ ನವೀನ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಆನೆಗಳ ಹಾವಳಿ 1

“ಶಾಶ್ವತ ಪರಿಹಾರ ನೀಡಬೇಕು. ಬೆಳೆ ಹೋದರೆ ಪರಿಹಾರ ಕೊಡಬಹುದು, ಜನರ ಪ್ರಾಣ ಹೋದರೆ ಮತ್ತೆ ತರುವುದಕ್ಕೆ ಸಾಧ್ಯವೇ” ಎಂದು ಗ್ರಾಮಸ್ಥರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಆನೆ ಹಾವಳಿಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ಜನರ ಪರಿಸ್ಥಿತಿ ಕುರಿತು ಈ ದಿನ.ಕಾಮ್ ಆರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, “ಆನೆ ಹಾವಳಿ ವಿಷಯ ತಿಳಿದ ಕೂಡಲೇ ಅಧಿಕಾರಿಗಳೂ ಕೂಡ ತಕ್ಷಣ ಸ್ಥಳಕ್ಕೆ ಧಾವಿಸಿ ಪಟಾಕಿ ಹಚ್ಚಿ ರೈತರಿಗೆ, ಜನರಿಗೆ ಎಚ್ಚರಿಕೆ ವಹಿಸುವಂತೆ ತಿಳಿಸಿ, ಆನೆಗಳು ಇರುವ ಜಾಗಕ್ಕೆ ಹೋಗಬೇಡಿ, ಆದಷ್ಟು ದೂರವಿರಿ ಎಂದು ಸೂಚಿಸುತ್ತಾರೆ. ಜತೆಗೆ ಆನೆ ರಕ್ಷಣಾ ಪಡೆಯನ್ನೂ ಕೂಡ ನೇಮಿಸಿದ್ದಾರೆ” ಎಂದು ಮುತ್ತಿನ ಕೊಪ್ಪ ಡೆಪ್ಯೂಟಿ ಅರಣ್ಯ ಅಧಿಕಾರಿ ಮಾರುತಿಯವರು ಪ್ರತಿಕ್ರಿಯೆ ನೀಡಿದ್ದಾರೆ.

ಆನೆಗಳ ಹಾವಳಿ

ಇಲ್ಲಿನ ಸಮಸ್ಯೆ ಬಗ್ಗೆ ಜಿಲ್ಲೆಯ ಸಚಿವ ಜಾರ್ಜ್ ಮತ್ತು ಈ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡರವರಿಗೆ ಮಾಹಿತಿ ತಿಳಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ 96 ಕಿಮೀ ದೂರ ಸೋಲಾರ್‌ ವಿದ್ಯುತ್‌ ತೂಗುತಂತಿ ಬೇಲಿ, ರೈಲ್ವೇ ಬ್ಯಾರಿಕೇಡ್, ಎಲಿಫೆಂಟ್ ಪ್ರೂಫ್‌ ಚಕಿಂಗ್‌ ನಿರ್ಮಾಣ ಮಾಡಲು ಸರ್ಕಾರದ ಗಮನಕ್ಕೆ ತಂದಿದ್ದೇವೆ” ಎಂದು ಆ ಭಾಗದ ವಲಯ ಮಟ್ಟದ ಅರಣ್ಯ ಅಧಿಕಾರಿ ಪ್ರವೀಣ್ ಕುಮಾರ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿದ್ದೀರಾ? ಚಾಮರಾಜನಗರ | ಕೆಲಸ ಹರಸಿ ನೆರೆ ರಾಜ್ಯಕ್ಕೆ ಗುಳೆ ಹೊರಟ ಮಂದಿ; ಮಕ್ಕಳ ಶಿಕ್ಷಣ ಮೊಟಕು

“ಈಗ ಬೆಳೆಗಳಿಗೆ ಅಪಾಯ ಮಾಡುತ್ತಿವೆ. ಇನ್ನು ಸ್ವಲ್ಪ ದಿನಗಳಾದ ಬಳಿಕ ಮನುಷ್ಯರ ಮೇಲೆ ಎರಗುತ್ತವೆಂದು ಸುತ್ತಮುತ್ತಲಿನ ಗ್ರಾಮಸ್ಥರ ಆತಂಕವಾಗಿದೆ. ಆನೆ ದಾಳಿ ಹಾಗೂ ಆನೆಗಳಿಂದಾಗುತ್ತಿರುವ ಬೆಳೆನಷ್ಟ ಸೇರಿದಂತೆ ಇತರ ಸಮಸ್ಯೆಗಳನ್ನು ಆಲಿಸಿ ಆಡಳಿತಾಧಿಕಾರಿಗಳು ಹಾಗೂ ಸರ್ಕಾರ ಗಮನವಹಿಸಿ ಆನೆ ನಿಯಂತ್ರಣದ ಕೆಲಸವನ್ನು ಕಾರ್ಯ ರೂಪಕ್ಕೆ ತರಬೇಕು” ಎಂದು ಸ್ಥಳೀಯರ ಆಗ್ರಹವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X