ಚಿಕ್ಕಮಗಳೂರು | ಗೌರಿ ಲಂಕೇಶ್ ಕೊಲೆ ಪಾತಕರಿಗೆ ಸನ್ಮಾನ; ಎದ್ದೇಳು ಕರ್ನಾಟಕದಿಂದ ಪ್ರತಿಭಟನೆ

Date:

Advertisements

ಅತ್ಯಾಚಾರಿಗಳಿಗೆ, ಕೊಲೆಪಾತರಿಗೆ ಸನ್ಮಾನ ಮಾಡುವುದನ್ನು ಗುಜರಾತ್, ಉತ್ತರ ಪ್ರದೇಶಗಳಲ್ಲಿ ಕಂಡಿದ್ದೆವು. ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಸನ್ಮಾನಿಸಿ, ಅಪರಾಧಕ್ಕೆ ಸಾಮಾಜಿಕ ಮನ್ನಣೆ ನೀಡಲಾಗಿದೆ. ಇದನ್ನು ಖಂಡಿಸಿ ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ಬಳಿ ಎದ್ದೇಳು ಕರ್ನಾಟಕ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ನಮ್ಮದೇ ರಾಜ್ಯದಲ್ಲಿ ಕರ್ನಾಟಕದ ಹೆಮ್ಮೆಯ ದನಿಯಾಗಿದ್ದ ಗೌರಿ ಲಂಕೇಶ್ ಅವರನ್ನು ಕೊಲೆಗೈದ ಆರೋಪಿಗಳನ್ನು ಸನ್ಮಾನಿಸಿರುವುದನ್ನು ಕಂಡು ನಾವು ದಂಗಾಗಿದ್ದೇವೆ. ಕರ್ನಾಟಕದ ಪರಂಪರೆಗೆ, ಈ ನೆಲ ಪೋಷಿಸಿಕೊಂಡು ಬರುತ್ತಿರುವ ಮಾನವೀಯ ಮೌಲ್ಯಗಳಿಗೆ, ಆದ ದೊಡ್ಡ ಕಳಂಕವಾಗಿದೆ.ಏನೂ ಆಗಿಲ್ಲವೆಂಬಂತೆ ಗೃಹ ಇಲಾಖೆ ಇರುವುದನ್ನು ಕಂಡು ಮನಸ್ಸಿಗೆ ಬಹಳ ಬೇಸರವಾಗುತ್ತಿದೆಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮನವಿ 8

ಕೊಲೆ ಪಾತಕರಿಗೆ ಮಾಡಿರುವ ಸನ್ಮಾನ, ಕೊಲೆಗೆ ನೀಡಿರುವ ಪ್ರಚೋದನೆ ಹಾಗೂ ಹಿಂಸೆಗೆ ಒದಗಿಸಿರುವ ಸಾಮಾಜಿಕ ಮನ್ನಣೆಯಾಗಿದೆ. ಕರ್ನಾಟಕದ ಪ್ರಜ್ಞಾವಂತ ಜನರೆಲ್ಲರೂ ಈ ಪ್ರಚೋದನಾಕಾರಿ ನಡೆಯನ್ನು ತೀವ್ರವಾಗಿ ಖಂಡಿಸಬೇಕು ಎಂದು ಎದ್ದೇಳು ಕರ್ನಾಟಕ,ಪ್ರಗತಿಪರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಭಾರೀ ಮಳೆ; ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ

ಗೌರಿ ಹಂತಕರಿಗೆ ಸನ್ಮಾನ ಮಾಡಿರುವ ಪ್ರಚೋದನೆಯಡಿ ಕೇಸು ದಾಖಲಿಸಬೇಕು. ವ್ಯಕ್ತಿಗಳ ಮೇಲೆ ಕೊಲೆ ಹಿಂಸೆ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಕೋಮುವಾದಿ ಸಂಘಟನೆಗಳ ಮೇಲೆ ಕ್ರಮ ಜರುಗಿಸಬೇಕು. ಗೌರಿ ಕೊಲೆಯ ವಿಚಾರಣೆಯನ್ನು ತ್ವರಿತಗೊಳಿಸಿ ಹಂತಕರಿಗೆ ಶೀಘ್ರವೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹಕ್ಕೊತ್ತಾಯಗಳನ್ನು ಚಿಕ್ಕಮಗಳೂರು ಜಿಲ್ಲಾಡಳಿತದ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X