ಚಿಕ್ಕಮಗಳೂರು | ಭಾರೀ ಮಳೆಗೆ ನಲುಗಿದ ಏಲಕ್ಕಿ ಬೆಳೆಗಾರರು; ಕಟಾವು ಮಾಡಿದ ಏಲಕ್ಕಿ ಒಣಗಿಸಲು ಪರದಾಟ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಾದ್ಯಂತ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಏಲಕ್ಕಿ ಬೆಳೆಗಾರರು ತತ್ತರಿಸಿ ಹೋಗಿದ್ದಾರೆ.

ಜಿಲ್ಲೆಯ ದೇವರುಂದ, ಹಂತೂರು, ಮೇಕನಗದ್ದೆ, ಹೊಸ್ಕೆರೆ, ಏರಿಕೆ, ಭೈರಾಪುರ, ಗುತ್ತಿ, ಹೆಸಗೋಡು, ಮೂಲರಹಳ್ಳಿ ಸೇರಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗಡಿ ಭಾಗದಲ್ಲಿ ಸಂಪ್ರಾದಾಯಿಕ ಪದ್ಧತಿಯಲ್ಲಿ ಏಲಕ್ಕಿ ಬೆಳೆಯುತ್ತಾರೆ. ಆಗಸ್ಟ್ ಅಂತ್ಯದಿಂದ ನವೆಂಬರ್‌ ಕೊನೆಯವರೆಗೆ ಏಲಕ್ಕಿ ಕಟಾವಿನ ಕಾಲವಾಗಿದೆ. ಆದರೆ, ಈ ಬಾರಿ ಮಳೆ ಮುಂದುವರೆದಿರುವುದರಿಂದ ಏಲಕ್ಕಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಏಲಕ್ಕಿ ಬೆಳೆಗಾರರಲ್ಲಿ ಹೆಚ್ಚಿನವರು ಸಣ್ಣ ಬೆಳೆಗಾರರಿದ್ದು, ಬೆಳೆ ಒಣಗಿಸಲು ಡ್ರೈಯರ್‌ನಂತಹ ಆಧುನಿಕ ವ್ಯವಸ್ಥೆ ಹೊಂದಿಲ್ಲ. ಮಳೆ ನಿಂತು, ಬಿಸಿಲು ಮೂಡಿದಾಗ ಏಲಕ್ಕಿ ಒಣಗಿಸಿ ಮಾರಾಟ ಮಾಡಬೇಕಾಗಿದೆ. ಈಗಾಗಲೇ ಕಟಾವು ಮುಕ್ತಾಯವಾಗಿದ್ದು, 3 ಹಾಗೂ 4ನೇ ಸುತ್ತಿನಲ್ಲಿ ಕಟಾವು ಮಾಡಬೇಕಾದ ಕಾಯಿಗಳು ಮಾತ್ರ ಗಿಡದಲ್ಲಿ ಉಳಿದಿವೆ.

Advertisements

ಮೊದಲ ಹಂತದ ಕಟಾವು ಮಳೆಯ ನಡುವೆಯೇ ನಡೆದಿದೆ. ಅಕ್ಟೋಬರ್ ಬಳಿಕ ಮಳೆ ಕಡಿಮೆಯಾಗಬಹುದೆಂದು ನಿರೀಕ್ಷಿಸಿ ಕಟಾವು ಮುಂದೂಡಿದ್ದ ರೈತರಿಗೆ, ಈಗ ನಿರಂತರವಾಗಿ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ. ಕಟಾವು ಮಾಡಿದರೆ ಏಲಕ್ಕಿಯನ್ನು ಒಣಗಿಸಲಾಗದ ಸ್ಥಿತಿ ಒಂದೆಡೆಯಾದರೆ, ಇನ್ನೊಂದೆಡೆ ಗಿಡದಲ್ಲೇ ಹಣ್ಣಾದ ಏಲಕ್ಕಿ ನೆಲಕ್ಕೆ ಉದುರಿ ಬಿದ್ದು, ನಷ್ಟವಾಗುತ್ತಿರುವುದು ನುಂಗಲಾರದ ತುತ್ತಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ

ಸತತ ಮಳೆಯಿಂದ ಕಟಾವು ಮಾಡಲು ಸಮಸ್ಯೆಯಾಗಿದ್ದು, ವನ್ಯಪ್ರಾಣಿಗಳ ಹಾವಳಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದು ಸೇರಿದಂತೆ ರೈತರು ಇತ್ಯಾದಿ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಏಲಕ್ಕಿ ಒಣಗಿಸಿಕೊಳ್ಳಲು ಸರ್ಕಾರದ ನೆರವಿನಲ್ಲಿ ಸೌಲಭ್ಯ ಕಲ್ಪಿಸಿದರೆ ಮಳೆಗಾಲದಲ್ಲಿ ಕಟಾವಿಗೆ ಬರುವ ಏಲಕ್ಕಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದು ಏಲಕ್ಕಿ ಬೆಳೆಗಾರರ ನಿರೀಕ್ಷೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X