ಚಿಕ್ಕಮಗಳೂರು | ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲ: ಶಾಸಕ ಕೆ ಎಸ್ ಆನಂದ್

Date:

Advertisements

ರಾಜ್ಯ ಸರ್ಕಾರ ಸ್ಥಾಪಿಸಲ್ಪಟ್ಟ ಕರ್ನಾಟಕ ಒನ್ ಸೇವಾ ಕೇಂದ್ರ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಕಡೂರು ಶಾಸಕ ಕೆ ಎಸ್ ಆನಂದ್ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕಚೇರಿ ಮುಂಭಾಗದಲ್ಲಿ ನೂತನವಾಗಿ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

“ಸೇವೆಗಳನ್ನು ಒಂದೇ ಸೂರಿನಡಿ ಲಭ್ಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಒನ್ ಸೇವಾ ಕೇಂದ್ರ ಸ್ಥಾಪಿಸಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

Advertisements

“ಕರ್ನಾಟಕ ಒನ್ ಪೋರ್ಟಲ್ ಒಂದು ಆನ್‌ಲೈನ್ ಪ್ಲಾಟ್‌ಫಾರ್ಮ್ ಆಗಿದ್ದು, ಎಲ್ಲ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ನಾಗರಿಕ-ಕೇಂದ್ರಿತ ಸೇವೆಗಳನ್ನು ಸುಲಭಗೊಳಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಒನ್ ಸ್ಥಾಪಿಸಲ್ಪಟ್ಟಿದ್ದು, ಎಲ್ಲ ಸೇವೆಗಳನ್ನು ಪ್ರವೇಶಿಸಲು ಜನರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು” ಎಂದು ತಿಳಿಸಿದರು.

“ಕರ್ನಾಟಕ ಒನ್ ರಾಜ್ಯ ಸರ್ಕಾರದ ಹಲವಾರು ಸೇವೆಗಳನ್ನು ತಲುಪಿಸಲು ಉದ್ದೇಶಿಸಿದ್ದು, ಆನ್‌ಲೈನ್ ಪೋರ್ಟಲ್‌ನಲ್ಲಿ ಆಧಾರ್ ಸೇವೆಗಳು, ಆರೋಗ್ಯ ಇಲಾಖೆ ಸೇವೆ, ಚುನಾವಣಾ ಆಯೋಗದ ಸೇವೆಗಳು, ನಾಡಕಚೇರಿ ಸೇವೆ, ಇ-ಸ್ಟಾಂಪಿಂಗ್, ಪುರಸಭೆಯ ಸಹಕಾರ ಸೇವೆಗಳು, ಆಹಾರ ಮತ್ತು ನಾಗರಿಕ ಸರಬರಾಜು ಸೇವೆಗಳು ಲಭ್ಯವಾಗಲಿವೆ. ಅನೇಕ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಕಂಪನಿಗಳ ಸೇವೆಗಳನ್ನು ಒಂದೇ ಪೋರ್ಟಲ್‌ನಲ್ಲಿ ಲಭ್ಯಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಪುರಸಭೆ ಸದಸ್ಯೆ ಜ್ಯೋತಿ ವೆಂಕಟೇಶ್ ಮಾತನಾಡಿ “ನಿಗದಿತ ಸಮಯದ ಮಿತಿಯೊಳಗೆ ದಾಖಲೆಗಳನ್ನು ತಲುಪಿಸಲಾಗುತ್ತದೆ ಹಾಗೂ ಸರ್ಕಾರ ನೀಡುವ ಬಹುತೇಕ ಸೇವೆಗಳಿಗೆ ಯಾವುದೇ ಹೆಚ್ಚುವರಿ ಶುಲ್ಕವಿರುವುದಿಲ್ಲ.‌ ಸರ್ಕಾರಿ ಕಚೇರಿ ಹಾಗೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯಕ್ಕೂ ಕರ್ನಾಟಕ ಒನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬಸ್ ಪಾಸ್‌ಗಳಿಗೆ ಅರ್ಜಿ ಹಾಕಬಹುದು” ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲೇಶ್, ಕರ್ನಾಟಕ ಒನ್ ಸೇವಾ ಕೇಂದ್ರದ ಮಾಲೀಕ ಡಿ ವಿ ಗೌತಮ್, ಜಿ ಪಂ ಮಾಜಿ ಸದಸ್ಯರು, ತಾ ಪಂ ಹಾಗೂ ಪುರಸಭೆಯ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಕಾಂಗ್ರೆಸ್ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X