ಚಿಕ್ಕಮಗಳೂರು l ಆಗಸ್ಟ್ 7, 8ರಂದು14ನೇ ಜಿಲ್ಲಾ ಸಮ್ಮೇಳನ: ಸಿಪಿಐ ಕರೆ

Date:

Advertisements

1925ರಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ಜನ್ಮತಾಳಿ 100 ವರ್ಷಗಳ ಸಂಭ್ರಮ ಹಾಗೆಯೇ, 50 ವರ್ಷಗಳ ಇತಿಹಾಸ ಹೊಂದಿರುವ ಚಿಕ್ಕಮಗಳೂರು ಜಿಲ್ಲಾ ಸಮಿತಿಯ 14ನೇ ಜಿಲ್ಲಾ ಸಮ್ಮೇಳನ ಆಗಸ್ಟ್ 7-8 ಕ್ಕೆ ಸಮ್ಮೇಳನ ನಡೆಯಲಿದೆ ಎಂದು ಕಮ್ಯೂನಿಸ್ಟ್ ಪಕ್ಷ ವತಿಯಿಂದ ಪತ್ರಿಕಾಗೋಷ್ಠಿ ಮಂಗಳವಾರ ನಡೆಸಲಾಯಿತು.

ಸುಮಾರು 80ರ ದಶಕದಲ್ಲಿ ಆರಂಭವಾದ ಪಕ್ಷ ನಿರಂತರವಾಗಿ ತೋಟ ಕಾರ್ಮಿಕರ ಹಕ್ಕುಗಳು ಜಿಲ್ಲೆಯ ನಿರುದ್ಯೋಗಿ ಯುವಕರ ಉದ್ಯೋಗ, ವಿದಾರ್ಥಿಗಳಿಗೆ ಸೂಕ್ತ ಹಾಸ್ಟೆಲ್ ವ್ಯವಸ್ಥೆ, ಭೂಹೀನ ರಹಿತರಿಗೆ ಭೂಮಿ (ಬಗರ್ ಹುಕುಂ ಚಳುವಳಿ) ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಮತ್ತು ಶೋಷಿತರ ಹೇಳಿಗೆಗಾಗಿ ಹೋರಾಟ, ನಿವೇಶನರಹಿತರಿಗಾಗಿ ಹೋರಾಟ ನಡೆಸಿ ಜನರಿಗೆ ಭೂಮಿ ಮತ್ತು ವಸತಿ ಕೊಡಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ ಹೆಗ್ಗಳಿಕೆ ಭಾರತ ಕಮ್ಯೂನಿಸ್ಟ್ ಪಕ್ಷಕ್ಕಿದೆ ಎಂದು ತಾಲೂಕು ಅಧ್ಯಕ್ಷೆ ನಳಿನಾ ತಿಳಿಸಿದರು.

ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಕೇವಲ 600 ಮತಗಳ ಅಂತರದಲ್ಲಿ ಸೋತ ಪಕ್ಷವು, ಹಲವು ತಾಲ್ಲೂಕು, ಪಂಚಾಯಿತಿ, ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ ಸದಸ್ಯರನ್ನು ಗೆಲ್ಲಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಹಣಬಲ, ಜಾತಿಬಲ, ಚುನಾವಣೆ ವ್ಯವಸ್ಥೆಯಿಂದ ಚುನಾವಣಾ ಗೆಲುವಿನ ಮತ ಪಡೆಯುವಲ್ಲಿ ಪಕ್ಷಕ್ಕೆ  ಹಿನ್ನೆಡೆಯಾಗಿರುವುದು ನಿಜ ಅದರೆ ನೈತಿಕ ಹೋರಾಟದಲ್ಲಿ ಜಿಲ್ಲೆಯ ರಾಜಕೀಯ ವ್ಯವಸ್ಥೆಯನ್ನು ಪ್ರತಿನಿಧಿಸಬಲ್ಲ ಶಕ್ತಿಯಾಗಿರುವುದು ಹೆಮ್ಮೆಯಾಗಿದೆ ಎಂದು ತಿಳಿದರು.

Advertisements

ರಾಜಕೀಯ, ಆರ್ಥಿಕ, ಸಾಮಾಜಿಕ ಅಸಮತೋಲನೆಯಿಂದ ದೇಶ ಮತ್ತು ಸ್ವರ್ಥ ರಾಜಕಾರಣದಿಂದ ರೈತರು, ಕಾರ್ಮಿಕರು, ಯುವಜನರು, ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಸ್ವಚ್ಛ ನ್ಯಾಯ ಸಮ್ಮಿತ ರಾಜಕೀಯ ವ್ಯವಸ್ಥೆಯನ್ನು ಕಲ್ಪಿಸುವ ಅವಶ್ಯಕತೆಗೆ ಭಾರತ ಕಮ್ಯೂನಿಸ್ಟ್ ಪಕ್ಷದತ್ತ ಜನರ ಸಹಕಾರ ಅಗತ್ಯವಾಗಿದ್ದು, ಜಿಲ್ಲೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ ನಡೆಸುವ ಹೋರಾಟ ಮತ್ತು ಸಾಧನೆಗಳನ್ನು ಈ ಸಮಾವೇಶದಲ್ಲಿ ಚರ್ಚಿಸಿ ಪಕ್ಷವನ್ನು ಬಲ ಪಡಿಸಲು ಅಗತ್ಯ ವೇದಿಕೆಯಾನ್ನಾಗಿ ಸಿಕೊಳ್ಳಲು ತೀರ್ಮಾನಿಸಿದೆ ಎಂದು ಕಮ್ಯೂನಿಸ್ಟ್ ಪಕ್ಷದ ಮುಖಂಡರು ತಿಳಿಸಿದರು. ಈ ವೇಳೆ ಸಿಪಿಐ ಮುಖಂಡರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X