ಚಿಕ್ಕಮಗಳೂರು l 17 ವರ್ಷದ ಬಾಲಕನ ಮೇಲೆ ಹಲ್ಲೆ; ಆರೋಪಿಗಳನ್ನು ಬಂಧಿಸುವಂತೆ ಎಸ್‌ಡಿಪಿಐ ಆಗ್ರಹ

Date:

Advertisements

17 ವರ್ಷದ ಬಾಲಕ ಆಟ ಆಡುತ್ತಿದ್ದಾಗ ಗೊತ್ತಿಲ್ಲದೇ ಹಸುವಿನ ಬಾಲಕ್ಕೆ ಪರಫ್ಯೂಮ್ ಸ್ಪ್ರೇ ಹಾಕಿದ ಕಾರಣಕ್ಕೆ ಹಲ್ಲೆ ನಡೆಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ.

ಹಲ್ಲೇಗೊಳಗಾದ ಬಾಲಕ ಶುಹೇಬ್(17), ಆಟ ಆಡುತ್ತಿದ್ದಾಗ ಗೊತ್ತಿಲ್ಲದೇ ಹಸುವಿನ ಬಾಲದ ಕಡೆ ಬಾಲಕ ಸ್ಪ್ರೇ ಹಾರಿಸಿದ್ದಾನೆ, ಈ ನೆಪ ಮಾಡಿಕೊಂಡು ಬಜರಂಗದಳದ ಶ್ಯಾಮ್ ವಿ.ಗೌಡ, ಸಂತೋಷ ಕೋಟ್ಯನ್ ಹಾಗೂ ಅವರ ತಂಡ ಕ್ರೂರವಾಗಿ ಆ ಬಾಲಕನ ಮೇಲೆ ಹಲ್ಲೆ ನಡೆಸಿ, ಅಬಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಾಗೆಯೇ, ಮೊಬೈಲ್ ಅಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹೆಸರುವಾಸಿಯಾಗಿರುವ AI ಬಳಸಿದ್ದಾರೆಂದು ತಿಳಿದು ಬಂದಿದೆ. ಇಂತಹ ಹಿಂಸಾತ್ಮಕ ಮತ್ತು ಅತಿರೇಕಿ ವರ್ತನೆಗಳು ಸಂಸ್ಕೃತ ಸಮಾಜದಲ್ಲಿ ಯಾವುದೇ ರೀತಿಯ ಸ್ವೀಕಾರಾರ್ಹವಾಗುವುದಿಲ್ಲ. ಯಾರಿಗೂ ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳುವ ಹಕ್ಕಿಲ್ಲ ಎಂದು ಎಸ್‌ಡಿಪಿಐ ತೀವ್ರ ಖಂಡಿಸಿದೆ.

Screenshot 2025 10 06 18 46 06 94 7352322957d4404136654ef4adb64504

ಎಸ್‌ಡಿಪಿಐ ಪಕ್ಷದಿಂದ ಕೆಳಕಂಡ ಬೇಡಿಕೆಗಳು: 1️⃣ ಆರೋಪಿಗಳಾದ ಶ್ಯಾಮ್ ವಿ.ಗೌಡ, ಸಂತೋಷ ಕೋಟ್ಯನ್ ಹಾಗೂ ಇತರರನ್ನು ತಕ್ಷಣ ಬಂಧಿಸಿ, ಕೊಲೆ ಯತ್ನ, ಹಲ್ಲೆ ಮತ್ತು ಬೆದರಿಕೆ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಬೇಕು. 2️⃣ ತನಿಖೆಯನ್ನು ಉನ್ನತ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಿರಪೇಕ್ಷವಾಗಿ ನಡೆಸಬೇಕು. 3️⃣ ಬಾಲಕನ ಹಕ್ಕುಗಳನ್ನು ರಕ್ಷಿಸಲು ಜುವೆನೈಲ್ ಜಸ್ಟಿಸ್ ಕಾಯ್ದೆ (Juvenile Justice Act) ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. 4️⃣ ಪೀಡಿತ ಕುಟುಂಬಕ್ಕೆ ತಕ್ಷಣ ಪರಿಹಾರ ಹಾಗೂ ವೈದ್ಯಕೀಯ ನೆರವು ನೀಡಬೇಕು. 5️⃣ ಘಟನೆಯ ಕುರಿತು ತಪ್ಪು, ಕೋಮು ಆಧಾರಿತ ಅಥವಾ AI ವಿಡಿಯೋಗಳ ಮೂಲಕ ತಪ್ಪು ಸುದ್ದಿ ಹರಡಿದವರ ಮೇಲೆ IT ಕಾಯ್ದೆ ಹಾಗೂ IPC ಪ್ರಕಾರ ಕ್ರಮ ಕೈಗೊಳ್ಳಬೇಕು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರೈತರ ಬೆಳೆಯನ್ನು ನಾಶ ಮಾಡಿದ ಕಾಡಾನೆ

ಈ ಘಟನೆ ಧರ್ಮದ ವಿಚಾರವಲ್ಲ, ಮಾನವೀಯತೆ ಮತ್ತು ನ್ಯಾಯದ ಪ್ರಶ್ನೆಯಾಗಿದೆ. ಶಾಂತಿ ಕಾಪಾಡಲು ಮತ್ತು ಪೀಡಿತ ಕುಟುಂಬದವರಿಗೆ ನ್ಯಾಯ ಸಿಗಬೇಕೆಂದು ಎಸ್‌ಡಿಪಿಐ ಅಧ್ಯಕ್ಷರಾದ ಸಯ್ಯದ್ ಅಜ್ಮತ್ ಈದಿನ. ಕಾಮ್ ಗೆ ಮಾಹಿತಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರೋಗಿಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆಗ್ರಹ

ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು...

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

Download Eedina App Android / iOS

X