ಚಿಕ್ಕಮಗಳೂರು l ಅಕ್ರಮ ಅರಣ್ಯ ಭೂ ಮಂಜೂರು ಆರೋಪ; ತಹಶೀಲ್ದಾರ್ ಪೂರ್ಣಿಮ ಅಮಾನತು

Date:

Advertisements

ಅರಣ್ಯ ಜಮೀನನ್ನು ಸರ್ಕಾರದ ಪೂರ್ವಾನುಮತಿ ಪಡೆಯದೇ ಅಕ್ರಮವಾಗಿ ಭೂ ಮಂಜೂರಾತಿ ಮಾಡಿರುವ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಸಿ.ಎಸ್ ಪೂರ್ಣಿಮ ಅವರನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ವಲಯದಲ್ಲಿ ಅಧಿಸೂಚಿತ ಅರಣ್ಯ ಪ್ರದೇಶವಾದ ರಂಗೇನಹಳ್ಳಿ ಗ್ರಾಮದ ಸರ್ವೆ ನಂ.4ರಲ್ಲಿ ಒಟ್ಟು 12.33 ಎಕರೆ ಅರಣ್ಯ ಜಮೀನನ್ನು ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಪೂರ್ಣಿಮ ಅವರು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರನ್ನು ಅಮಾನತು ಮಾಡಲಾಗಿದೆ.

“ಅರಣ್ಯ ಜಮೀನನ್ನು ಕಾನೂನು ಬಾಹಿರವಾಗಿ ಮಂಜೂರು ಮಾಡಿ ದುರ್ನಡತೆ/ಕರ್ತವ್ಯ ಲೋಪವೆಸಗಿರುವ ಆಪಾದಿತ ಅಧಿಕಾರಿ ವಿರುದ್ಧ ‘Van (Sanrakshan Evam Samvardhan) Adhiniyam-1980’ರ ಸೆಕ್ಷನ್ 8(3B) ಮತ್ತು ‘Van (Sanrakshan Evam Samvardhan) Rules-2023’ರನಿಯಮ 15 ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕಾಯ್ದೆ-1963 ಅಡಿಯಲ್ಲಿ ದೂರು ದಾಖಲಿಸಲಾಗಿದೆ” ಎಂದು ವಲಯ ಅರಣ್ಯಾಧಿಕಾರಿ ಈದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

Advertisements
Screenshot 2025 01 03 17 43 27 72 439a3fec0400f8974d35eed09a31f914

“ಪ್ರಕರಣದಲ್ಲಿ ತರೀಕೆರೆಯ ಹಿಂದಿನ ತಹಶೀಲ್ದಾರ್ (ಈಗ ನಿವೃತ್ತರಾಗಿದ್ದಾರೆ) ಎನ್.ಟಿ ಧರ್ಮೋಜಿರಾವ್ ಮತ್ತು ಪೂರ್ಣಿಮ ಅವರು ಭಾಗಿಯಾಗಿದ್ದಾರೆ. ಸರ್ಕಾರದ ಅರಣ್ಯ ಭೂಮಿಯನ್ನು ಪರಭಾರೆ ಮಾಡಲು ನಿರ್ಬಂಧವಿದ್ದರೂ, ಅವರು ಅನಧಿಕೃತವಾಗಿ ಭೂ ಮಂಜೂರಾತಿ ಮಾಡಿರುವುದು ದೃಢಪಟ್ಟಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

“ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ಭೂಮಿಯನ್ನು ಸಂರಕ್ಷಿಸುವುದರ ಬದಲು ಫಲಾನುಭವಿಗಳಿಂದ ಬಾಹ್ಯ ಪ್ರತಿಫಲಾಪೇಕ್ಷೆ ಪಡೆಯುವ ಉದ್ದೇಶದಿಂದ, ಸರ್ಕಾರದ ಭೂಮಿಯನ್ನು ಅನಧಿಕೃತವಾಗಿ ಮಂಜೂರು ಮಾಡಿ ಕರ್ನಾಟಕ ನಾಗರೀಕ ಸೇವಾ (ನಡತೆ)ನಿಯಮಗಳು-2021ರ ನಿಯಮ (3)ರ ಉಪ ನಿಯಮ-(1)(2)(3)(5)(6) & (7)ನ್ನು ಉಲ್ಲಂಘಿಸಿದ್ದಾರೆ. ಕರ್ತವ್ಯ ಲೋಪವೆಸಗಿ ಸರ್ಕಾರಿ ನೌಕರನಿಗೆ ತಕ್ಕದಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ, ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ ಹೆಚ್.ಜಿ ಅವರು ಆದೇಶ ಹೊರಡಿಸಿದ್ದಾರೆ” ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X