ಚಿಕ್ಕಮಗಳೂರು l ಪ್ರವಾಸಿ ತಾಣಕ್ಕೆ ಆನ್ ಲೈನ್ ನೋಂದಣಿ ನಿಷೇಧಿಸಿ: ಎದ್ದೇಳು ಕರ್ನಾಟಕ ಆಗ್ರಹ

Date:

Advertisements

ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ದೂರದಿಂದ ಬರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ಆನ್ಲೈನ್ ನೋಂದಣಿ ಕಡ್ಡಾಯ ಮಾಡಿರುವುದನ್ನು ಕಂಡಿಸುತ್ತೇವೆಂದು ಎದ್ದೇಳು ಕರ್ನಾಟಕ ಸಂಘಟನೆಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ನೋಡಲು ಬೇರೆ ಬೇರೆ ಭಾಗಗಳಿಂದ ಬರುತ್ತಾರೆ. ಹಾಗೆಯೇ, ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ಬರುವವರಿಗೆ ಆನ್ ಲೈನ್ ನೋಂದಣಿ ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಪ್ರವಾಸಿಗರಿಗೆ,ಸ್ಥಳೀಯರು, ಆ ಭಾಗದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಜನರಿಗೆ ಹಾಗೂ ಬದುಕು ಕಟ್ಟಿಕೊಳ್ಳಲು ವಲಸೆ ಬಂದಿರುವ ಕಾರ್ಮಿಕರಿಗೆ ತುಂಬ ಸಮಸ್ಯೆಯಾಗುತ್ತದೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನಗರ ವ್ಯಾಪ್ತಿಯಲ್ಲೇ ಮೂಲಭೂತ ಸೌಕರ್ಯ ಕೊರತೆ; ಮಲತಾಯಿ ಧೋರಣೆ ಎಂದ ಉಪ್ಪಳ್ಳಿಯ 17ನೇ ವಾರ್ಡ್ ನಿವಾಸಿಗಳು

ಆನ್ ಲೈನ್ ನೋಂದಣಿ ಮಾಡುವವರು ಓದಿದವರು ಹಾಗೂ ನೋಂದಣಿ ಹೇಗೆ ಮಾಡುವುದು ಎಂದು ತಿಳಿದವರಿಗೆ ಮಾತ್ರ, ಓದಲು, ಬರೆಯಲು ಬಾರದವರು ಏನು ಮಾಡಬೇಕು. ಇದನ್ನ ನಾವು ಖಂಡಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಸಮಿತಿಯ ಸದಸ್ಯರಾದ ಗೌಸ್ ಮೋಹದ್ದಿನ್ ತಿಳಿದರು. ಈ ವೇಳೆ ಎದ್ದೇಳು ಕರ್ನಾಟಕ  ಸಂಘಟನೆಯ ಗಣೇಶ್, ರೀತು, ವೀಣಾ, ದಿವಾಕರ್, ಚಂದ್ರು, ಇಲಿಯಾಸ್, ಪುಟ್ಟಸ್ವಾಮಿ, ಹಾಗೂ ದಸಂಸ ಸಂಘಟನೆಯ ಆಶಾ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X